ಜಿಲ್ಲೆಗಳು

ಯೂನಿಟ್‌ಗೆ 1.46 ರೂ. ಹೆಚ್ಚಳಕ್ಕೆ ಸೆಸ್ಕ್ ಪ್ರಸ್ತಾಪ

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ ವಿಚಾರಣೆ
ದರ ಹೆಚ್ಚಳಕ್ಕೆ ಅವಕಾಶ ಕೊಡದಂತೆ ಸಾರ್ವಜನಿಕರ ಒತ್ತಾಯ

ಮೈಸೂರು: ಕೊರೊನಾ ಸಂದರ್ಭದಲ್ಲಿ ವಿದ್ಯುತ್ ಬೇಡಿಕೆ, ಬಳಕೆ ಕಡಿಮೆ, ಬಡ್ಡಿದರದಲ್ಲಿ ಹೆಚ್ಚಳ, ಸರ್ಕಾರಿ ಯೋಜನೆಗಳಿಗೆ ಸಬ್ಸಿಡಿ ದರದಲ್ಲಿ ವಿದ್ಯುತ್ ಸೇವೆ ಒದಗಿಸುವುದೂ ಸೇರಿದಂತೆ ಇನ್ನಿತರ ಮೂಲ ಸೌಕರ್ಯಗಳನ್ನು ಕಲ್ಪಿಸಲು ಎಲ್ಲಾ ವೆಚ್ಚಗಳನ್ನೊಳಗೊಂಡಂತೆ ಪ್ರತಿ ಯೋನಿಟ್‌ಗೆ 1.46 ಪೈಸೆ ವಿದ್ಯುತ್ ದರ ಹೆಚ್ಚಳಕ್ಕೆ ಅನುಮತಿ ಕೋರಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತವು (ಸೆಸ್ಕ್) ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಕ್ಕೆ ಪ್ರಸ್ತಾಪ ಸಲ್ಲಿಸಿದೆ.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಕರ್ನಾಟಕ ವಿದ್ಯುಚ್ಛಕ್ತಿ ಆಯೋಗದ ಅಧ್ಯಕ್ಷ ರವಿಕುಮಾರ್ ಅಧ್ಯಕ್ಷತೆಯಲ್ಲಿ 2023-24ನೇ ಸಾಲಿನ ವಿದ್ಯುತ್ ದರ ಪರಿಷ್ಕರಣೆ ಅರ್ಜಿ ಕುರಿತು ನಡೆದ ಸಾರ್ವಜನಿಕ ವಿಚಾರಣೆಯಲ್ಲಿ ದರ ಪರಿಷ್ಕರಣೆ ಕುರಿತಂತೆ ಬೇಡಿಕೆ ಇಡಲಾಯಿತು. ಆದರೆ, ಇದಕ್ಕೆ ಅಪಸ್ವರ ತೆಗೆದ ರೈತರು, ಕೈಗಾರಿಕಾ ಸಂಘಗಳ ಪ್ರತಿನಿಧಿಗಳು , ವಾಣಿಜ್ಯೋದ್ಯಮಿಗಳು ದರ ಹೆಚ್ಚಳವನ್ನು ವಿರೋಧಿಸಿದರು.

ಸಭೆಯ ಆರಂಭದಲ್ಲಿ ವ್ಯವಸ್ಥಾಪಕ ನಿರ್ದೇಶಕ ಜಯವಿಭವಸ್ವಾಮಿ ಅವರು ೨೦೨೧-೨೨ನೇ ಸಾಲಿನ ಕೊರತೆ 382.57 ಕೋಟಿ ರೂ.ಗಳಾಗಿದ್ದು, 2023-24ಕ್ಕೆ ಪ್ರಸ್ತುತ ವಿದ್ಯುತ್ ದರಗಳಿಂದ 5572.74 ಕೋಟಿ ರೂ.ಆದಾಯ ಬರಲಿದ್ದು, ಅಗತ್ಯವಿರುವ   6622.48ಕೋಟಿ ರೂ. ವೆಚ್ಚವಾಗಲಿದೆ. ಹಾಗಾಗಿ, 2021-22ನೇ ಸಾಲಿನ ಕೊರತೆ382.57 ಕೋಟಿ ರೂ. ಮತ್ತು 2023-24ನೇ ಸಾಲಿನ ಅಂದಾಜು ಕೊರತೆ  667.17ಕೋಟಿ ರೂ. ಸೇರಿ ಒಟ್ಟು 1049.74ಕೋಟಿ ರೂ.ಗಳಾಗುವ ಕಾರಣ ಸರಾಸರಿ ಪ್ರತಿಯೂನಿಟ್‌ಗೆ 1.46 ಪೈಸೆ ಹೆಚ್ಚಳ ಮಾಡಲು ಅನುವು ಮಾಡಿಕೊಡಬೇಕು ಎಂದು ಪ್ರಸ್ತಾಪ ಸಲ್ಲಿಸಿದರು.

2023-24ನೇ ಸಾಲಿನಲ್ಲಿ  8245.68ದಶಲಕ್ಷ ಯೂನಿಟ್‌ಗಳ ವಿದ್ಯುತ್ ಖರೀದಿ ಮಾಡಿದರೆ, 7167.89ದಶಲಕ್ಷ ಯೂನಿಟ್‌ಗಳ ವಿದ್ಯುತ್ ಮಾರಾಟವಾಗುತ್ತಿದೆ. ಪ್ರಸಕ್ತ ವರ್ಷದಲ್ಲಿ ವಿದ್ಯುತ್ ಖರೀದಿಗೆ 4603.2 ಕೋಟಿ ರೂ., ಕಾರ್ಯ ಮತ್ತುಪಾಲನೆ ವೆಚ್ಚ   971.89ಕೋಟಿ ರೂ., ಸವಕಳಿ 431.85 ಕೋಟಿ ರೂ., ಬಡ್ಡಿ ಮತ್ತು ಆರ್ಥಿಕ ವೆಚ್ಚಗಳಿಗೆ  505.14 ಕೋಟಿ ರೂ., ಇತರೆ ಖರ್ಚು 12.2 ಕೋಟಿ ರೂ., ಗ್ರಾಹಕ ಶಿಕ್ಷಣಕ್ಕೆ 0.5 ಕೋಟಿ ರೂ. ಸೇರಿದಂತೆ  6522.48 ಕೋಟಿ ರೂ. ಖರ್ಚಾದರೆ, ವಿದ್ಯುತ್ ದರಗಳಿಂದ 5572.74 ಕೋಟಿ ರೂ. ಕಂದಾಯ ಬರಲಿದೆ. ಹೀಗಾಗಿ, ಕೊರತೆ ನೀಗಿಸಲು ದರ ಹೆಚ್ಚಳ ಮಾಡುವುದು ಅಗತ್ಯವಾಗಿದೆ. ನಮ್ಮ ಬೇಡಿಕೆಯನ್ನು ಪರಿಗಣಿಸಿ ಒಪ್ಪಿಗೆ ಕೊಡಬೇಕು ಎಂದು ಕೋರಿದರು.

ಕೊರೊನಾ ವರ್ಷದಲ್ಲಿ ಮಾರಾಟ ಕಡಿಮೆ: ಕೊರೊನಾ ವರ್ಷದಲ್ಲಿ ವಿದ್ಯುತ್ ಬೇಡಿಕೆ ಮತ್ತು ಮಾರಾಟ ಕಡಿಮೆಯಾಗಿದ್ದರಿಂದ 2021ರ ಅವಧಿಯಲ್ಲಿ ನಷ್ಟವಾಗಿದೆ. ಸರ್ಕಾರಿ ಯೋಜನೆಗಳನ್ನು ಮುಂದುವರಿಸುವುದೂ ಸೇರಿದಂತೆ ಗ್ರಾಹಕರಿಗೆ ಗುಣಮಟ್ಟದ ವಿದ್ಯುತ್ ಕೊಡಲಾಗಿದೆ. ಕೈಗಾರಿಕೆಗಳು ಬಂದ್ ಆಗಿದ್ದರಿಂದ ಬೇಡಿಕೆ ಬರಲಿಲ್ಲ, ಮಾರಾಟವೂ ನಡೆಯಲಿಲ್ಲ. ಹಾಗಾಗಿ, ನಷ್ಟಕ್ಕೆ ಕಾರಣವಾಗಿದೆ. ಆದರೆ, ಈ ವರ್ಷದಲ್ಲಿ ಅದನ್ನು ಸರಿದೂಗಿಸಿಕೊಳ್ಳುವ ಕೆಲಸ ಮಾಡಲಾಗಿದೆ ಎಂದು ಜಯವಿಭವಸ್ವಾಮಿ ಆಯೋಗದ ಗಮನಕ್ಕೆ ತಂದರು.

ಒಟ್ಟು ವೆಚ್ಚ  6522.48ಕೋಟಿ ರೂ.
ಆದಾಯ  5572.74 ಕೋಟಿ ರೂ.

ಯಾವುದಕ್ಕೆ ಎಷ್ಟು?

ವಿದ್ಯುತ್ ಖರೀದಿಗೆ 4603.2 ಕೋಟಿ ರೂ.

ಕಾರ್ಯ ಮತ್ತು ಪಾಲನೆ ವೆಚ್ಚ  971.89 ಕೋಟಿ ರೂ.

ಸವಕಳಿ ವೆಚ್ಚ431.85 ಕೋಟಿ ರೂ.

ಬಡ್ಡಿ ಮತ್ತು ಆರ್ಥಿಕ ವೆಚ್ಚ505.14 ಕೋಟಿ ರೂ.

ಇತರೆ ಖರ್ಚು 12.2 ಕೋಟಿ ರೂ.

ಗ್ರಾಹಕ ಶಿಕ್ಷಣಕ್ಕೆ 0.5 ಕೋಟಿ ರೂ.

 

andolanait

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

4 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

4 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

4 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

4 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

4 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

4 hours ago