ಜಿಲ್ಲೆಗಳು

ಸಿಮ್ಸ್ ಆಸ್ಪತ್ರೆಯಿಂದ ಏಕಾಏಕಿ 10 ನೌಕರರ ವಜಾ

2 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಏಜೆನ್ಸಿ; ಏಜೆನ್ಸಿ ಮಾಲೀಕನ ವಿರುದ್ಧ ಪೊಲೀಸರಿಗೆ ದೂರು

ಚಾಮರಾಜನಗರ: ನಗರದ ಹೊರವಲಯದ ಯಡಬೆಟ್ಟದಲ್ಲಿರುವ ಚಾ.ನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಸಿಮ್ಸ್) ಬೋಧನಾ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಡಿ.ದರ್ಜೆಯ 10 ನೌಕರರನ್ನು ಏಕಾಏಕಿ ವಜಾ ಮಾಡಿದ್ದಲ್ಲದೆ, ಅವರಿಗೆ 2 ತಿಂಗಳ ಸಂಬಳವನ್ನು ನೀಡದೆ ಸತಾಯಿಸಲಾಗುತ್ತಿದೆ.
ಹೊರಗುತ್ತಿಗೆ ಆಧಾರದ ಮೇಲೆ ವಿಘ್ನೇಶ್ವರ ಏಜೆನ್ಸಿಯಿಂದ ನೇಮಕ ಮಾಡಿಕೊಂಡಿದ್ದ ಪದ್ಮ, ಲಕ್ಷ್ಮಮ್ಮ, ಯಶೋಧಮ್ಮ, ಸವಿತಾ, ಜಯಮ್ಮ, ಮೀನಾ ಎಂಬುವರು ಸೇರಿದಂತೆ 10 ನೌಕರರನ್ನು ಕಳೆದ 4 ತಿಂಗಳ ಹಿಂದೆ ದಿಡಿಕ್ಷೀರನೆ ಕಿತ್ತು ಹಾಕಲಾಗಿದೆ. ಇವರಿಗೆ 2 ತಿಂಗಳ ಸಂಬಳವನ್ನು ನೀಡಿಲ್ಲ.
ಇವರ ಬದಲಿಗೆ ವಿಘ್ನೇಶ್ವರ ಏಜೆನ್ಸಿ ಮಾಲೀಕ ವಿಜೆಯೇಂದ್ರ ಎಂಬುವರು ಮಧ್ಯವರ್ತಿ ಮಹದೇವಸ್ವಾಮಿ ಎಂಬಾತನ ಮೂಲಕ 30-40  ಸಾವಿರ ರೂ. ನೀಡಿದ 25 ಮಂದಿಯಯನ್ನು ಡಿ.ದರ್ಜೆ ನೌಕರರರಾಗಿ ನೇಮಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
2 ತಿಂಗಳ ಬಾಕಿ ಸಂಬಳವನ್ನು ಕೇಳಿದರೆ ನೀಡುವುದಾಗಿ ಸಬೂಬು ಹೇಳುತ್ತ ಕಾಲ ಕಳೆಯುತ್ತಿದ್ದಾರೆ. ಏಜೆನ್ಸಿಅವಧಿ ಇನ್ನು2  ತಿಂಗಳಲ್ಲಿ ಮುಗಿಯಲಿದೆ. ನಮಗೆ ಯಾವಾಗ ಬಾಕಿ ಸಂಬಳ ನೀಡುವುದು ಎಂದು ಕೆಲಸ ಕಳೆದುಕೊಂಡಿರುವ ನೌಕರರು ಪ್ರಶ್ನಿಸಿದ್ದಾರೆ.
2016-17 ನೇ ಸಾಲಿನಿಂದಲೂ ನಾವು ಆಸ್ಪತ್ರೆಯಲ್ಲಿ ಹೊರ ಗುತ್ತಿಗೆಯಡಿ ಡಿ.ದರ್ಜೆ ನೌಕರರಾಗಿ ಕೆಲಸ ಮಾಡಿದ್ದೇವೆ. ಕೊರೊನಾ ಸಂದರ್ಭದಲ್ಲೂ ದುಡಿದಿದ್ದೇವೆ. ಆದರೂ ನಮ್ಮನ್ನು ಕಿತ್ತು ಹಾಕಿ ನಮ್ಮ ಬದಲಿಗೆ ಬೇರೆಯವರನ್ನು ಹಣ ಪಡೆದು ಏಜೆನ್ಸಿಯವರು ನೇಮಿಸಿಕೊಂಡಿದ್ದಾರೆ ಎಂದು ನೌಕರರು ದೂರಿದ್ದಾರೆ.
ಬಾಕಿ ಸಂಬಳ ನೀಡಬೇಕೆಂದು ಮತ್ತು ಮರು ನೇಮಕ ಮಾಡಿಕೊಳ್ಳಬೇಕೆಂದು ನಾವು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಸಿಮ್ಸ್ ಆಸ್ಪತ್ರೆಯ  ನಿರ್ದೇಶಕ ಡಾ.ಸಂಜೀವ್ ಅವರ ಗಮನಕ್ಕೆ ತರಲಾಗಿದ್ದರೂ ಯಾವುದೇ ಪ್ರಯೋಜವಾಗಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

ಹಣ ವಸೂಲಿ ಮಾಡಿ ನೌಕರಿ
ಆಸ್ಪತ್ರೆಗೆ ಹೊರ ಗುತ್ತಿಗೆಯಡಿ ಡಿ.ದರ್ಜೆ ನೌಕರರನ್ನು ನೇಮಿಸಿಕೊಳ್ಳಲು ಮಧ್ಯವರ್ತಿ ಅಯ್ಯನಪುರ ಮಹದೇವಸ್ವಾಮಿ ಎಂಬಾತನ ಮೂಲಕ ಹಣ ವಸೂಲಿ ಮಾಡಲಾಗುತ್ತಿದೆ. ಒಬ್ಬರಿಂದ ಕನಿಷ್ಟ 30-40 ಸಾವಿರ ರೂ. ಪಡೆದು ಸೇರಿಸಿಕೊಳ್ಳಲಾಗುತ್ತಿದೆ. ಏಜೆನ್ಸಿಯವರು ಸರ್ಕಾರದಿಂದ ಕಮೀಷನ್ ಪಡೆಯುವ ಜೊತೆಗೆ ಜನರಿಂದ ಹಣ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.


ನಮಗೆ ಬಾಕಿ ಸಂಬಳ ನೀಡದಿರುವುದು ಮತ್ತು ನಮ್ಮ ಬದಲಿಗೆ ಹಣ ಪಡೆದು ನೇಮಕ ಮಾಡಿಕೊಂಡಿರುವ ಏಜೆನ್ಸಿ ಮಾಲೀಕರ ವಿರುದ್ಧ ನಗರದ ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಲಾಗುವುದು.
– ಪದ್ಮ, ಕೆಲಸ ಕಳೆದುಕೊಂಡ ನೌಕರರು.


ಕೋವಿಡ್ ಮುಗಿದ ನಂತರ ಹೊರ ಗುತ್ತಿಗೆಯಡಿ ನೇಮಿಸಿಕೊಂಡಿದ್ದ ಹಲವು ಡಿ.ದರ್ಜೆ ನೌಕರರನ್ನು ರಾಜ್ಯ ಸರ್ಕಾರದ ನಿರ್ದೇಶನದಂತೆ ಏಜೆನ್ಸಿಯವರು ಕೆಲಸದಿಂದ ತೆಗೆದು ಹಾಕಿದ್ದಾರೆ. ಅವರಲ್ಲಿ ಈ 10 ಮಂದಿಯೂ ಸೇರಿದ್ದಾರೆ. ಇವರು ಹಳೆಯ ನೌಕರರು ಎಂಬುದು ಗಮನಕ್ಕೆ ಬರಲಿಲ್ಲ. ಈಗ ಸಿಮ್ಸ್ ಆಸ್ಪತ್ರೆಗೆ ಇನ್ನು ಹಲವು ಡಿ.ದರ್ಜೆ ನೌಕರರ ನೇಮಕಕ್ಕೆ ಅವಕಾಶ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಲ್ಲಿಂದ ಒಪ್ಪಿಗೆ ಸಿಕ್ಕಿದರೆ ಇವರನ್ನು ಪರಿಗಣಿಸಲಾಗುವುದು.
– ಡಾ.ಸಂಜೀವ್. ಸಿಮ್ಸ್, ನಿರ್ದೇಶಕ

andolanait

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

7 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

9 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

11 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

12 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

13 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

13 hours ago