ಜಿಲ್ಲೆಗಳು

ಪತ್ರಕರ್ತ ಭವನ ನಿರ್ಮಾಣಕ್ಕೆ 10 ಲಕ್ಷ : ಸಂಸದ ಶ್ರೀನಿವಾಸ್ ಪ್ರಸಾದ್

ಹನೂರು: ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಭವನ ನಿರ್ಮಾಣಕ್ಕೆ 10 ಲಕ್ಷ ಅನುದಾನ ನೀಡುವುದಾಗಿ ಚಾಮರಾಜನಗರ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಭರವಸೆ ನೀಡಿದರು.

ಪಟ್ಟಣದ ರೈತ ಸಂಪರ್ಕ ಕೇಂದ್ರ ಸಮೀಪ ನಿರ್ಮಾಣ ಮಾಡುತ್ತಿರುವ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಭವನ ನಿರ್ಮಾಣ ಕಾಮಗಾರಿಗೆ ಅನುದಾನ ನೀಡುವಂತೆ ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದೇವರಾಜ್ ಕಪ್ಪಸೋಗೆ ನೇತೃತ್ವದ ನಿಯೋಗ ಮಂಗಳವಾರ ಸಂಸದರ ನಿವಾಸದಲ್ಲಿ ಭೇಟಿಯಾಗಿ ಭವನ ನಿರ್ಮಾಣ ಕಾಮಗಾರಿಗೆ ಅನುದಾನ ನೀಡುವಂತೆ ಮನವಿ ಸಲ್ಲಿಸಲಾಯಿತು .

ಮನವಿ ಸ್ವೀಕರಿಸಿ ಮಾತನಾಡಿದ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಹನೂರು ಪಟ್ಟಣದಲ್ಲಿ ಪತ್ರಕರ್ತರ ಭವನ ನಿರ್ಮಾಣವಾಗುತ್ತಿರುವುದು ಸಂತಸದ ವಿಚಾರ. ಪತ್ರಕರ್ತರು ಸದಾ ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಇವರು ಸಮಾಜ ನಾಲ್ಕನೇ ಅಂಗವಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಂಥ ಕೆಲಸಗಳಿಗೆ ಅನುದಾನ ನೀಡಬೇಕು. ಭವನ ನಿರ್ಮಾಣಕ್ಕೆ ಎರಡು ಹಂತದಲ್ಲಿ ಹತ್ತು ಲಕ್ಷ ಅನುದಾನ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಹನೂರು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಗೌರವ ಅಧ್ಯಕ್ಷ ದೇವರಾಜ್ ನಾಯ್ಡು, ಅಧ್ಯಕ್ಷ ಮಹಾದೇಶ್ ಎಂ, ಕಾರ್ಯದರ್ಶಿ ಬಸವರಾಜು ನಿರ್ದೇಶಕ ಸೋಮಶೇಖರ್ ಇದ್ದರು..

andolana

Recent Posts

‘ಹೆರಿಟೇಜ್ ಟೂರಿಸಂ ಅಭಿವೃದ್ಧಿಗೆ ಯೋಜನೆ’

ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್‌ಗೆ ಆದ್ಯತೆ …

54 mins ago

ಜನವರಿ.3ರಿಂದ ನೈಸರ್ಗಿಕ ಕೃಷಿ ಕಾರ್ಯಾಗಾರ

ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…

58 mins ago

ಅಂಬೇಡ್ಕರ್ ಜೀವಜಲವನ್ನು ಹರಿಯುವಂತೆ ಮಾಡುವುದು ನಮ್ಮ ಕೆಲಸವಾಗಿದೆ

ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…

1 hour ago

ತಾಯಿ ನಂಜನಗೂಡಿನ ನಂಜಿ, ಮಗ ನಿಕೋಲಸ್ ವಿಶ್ವವಿಖ್ಯಾತ ಕ್ಯಾಮೆರಾಮ್ಯಾನ್

ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…

1 hour ago

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

11 hours ago