ಹನೂರು: ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಭವನ ನಿರ್ಮಾಣಕ್ಕೆ 10 ಲಕ್ಷ ಅನುದಾನ ನೀಡುವುದಾಗಿ ಚಾಮರಾಜನಗರ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಭರವಸೆ ನೀಡಿದರು.
ಪಟ್ಟಣದ ರೈತ ಸಂಪರ್ಕ ಕೇಂದ್ರ ಸಮೀಪ ನಿರ್ಮಾಣ ಮಾಡುತ್ತಿರುವ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಭವನ ನಿರ್ಮಾಣ ಕಾಮಗಾರಿಗೆ ಅನುದಾನ ನೀಡುವಂತೆ ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದೇವರಾಜ್ ಕಪ್ಪಸೋಗೆ ನೇತೃತ್ವದ ನಿಯೋಗ ಮಂಗಳವಾರ ಸಂಸದರ ನಿವಾಸದಲ್ಲಿ ಭೇಟಿಯಾಗಿ ಭವನ ನಿರ್ಮಾಣ ಕಾಮಗಾರಿಗೆ ಅನುದಾನ ನೀಡುವಂತೆ ಮನವಿ ಸಲ್ಲಿಸಲಾಯಿತು .
ಮನವಿ ಸ್ವೀಕರಿಸಿ ಮಾತನಾಡಿದ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಹನೂರು ಪಟ್ಟಣದಲ್ಲಿ ಪತ್ರಕರ್ತರ ಭವನ ನಿರ್ಮಾಣವಾಗುತ್ತಿರುವುದು ಸಂತಸದ ವಿಚಾರ. ಪತ್ರಕರ್ತರು ಸದಾ ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಇವರು ಸಮಾಜ ನಾಲ್ಕನೇ ಅಂಗವಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಂಥ ಕೆಲಸಗಳಿಗೆ ಅನುದಾನ ನೀಡಬೇಕು. ಭವನ ನಿರ್ಮಾಣಕ್ಕೆ ಎರಡು ಹಂತದಲ್ಲಿ ಹತ್ತು ಲಕ್ಷ ಅನುದಾನ ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಹನೂರು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಗೌರವ ಅಧ್ಯಕ್ಷ ದೇವರಾಜ್ ನಾಯ್ಡು, ಅಧ್ಯಕ್ಷ ಮಹಾದೇಶ್ ಎಂ, ಕಾರ್ಯದರ್ಶಿ ಬಸವರಾಜು ನಿರ್ದೇಶಕ ಸೋಮಶೇಖರ್ ಇದ್ದರು..
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…