ಜಿಲ್ಲೆಗಳು

ಶೇ.10 ಮೀಸಲಾತಿಯಿಂದ ಸಾಮಾಜಿಕ ನ್ಯಾಯಕ್ಕೆ ಧಕ್ಕೆ : ನಟ ಚೇತನ್‌ ಅಹಿಂಸಾ ಅಸಮಾಧಾನ

ಚಿತ್ರನಟ ಚೇತನದ ಅಹಿಂಸಾ ಅಸಮಾಧಾನ

ಚಾಮರಾಜನಗರ: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.೧೦ ಮೀಸಲಾತಿ ನೀಡುವುದು ಸಾಮಾಜಿಕ ನ್ಯಾಯಕ್ಕೆ ಧಕ್ಕೆಯಾಗಿದೆ. ಆದ್ದರಿಂದ ಇದರ ವಿರುದ್ದ ಶೋಷಿತರು ಹೋರಾಟ ನಡೆಸಬೇಕಾಗಿದೆ ಎಂದು ಚೇತನ್ ಅಹಿಂಸಾ ಸಲಹೆ ನೀಡಿದರು.
ನಗರದ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಭಾನುವಾರ ಬಹುಜನ್ ವಾಲೆಂಟಿಯರ್ ಫೋರ್ಸ್ ಜಿಲ್ಲಾ ಘಟಕದಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ೬೬ನೇ ಪರಿನಿಬ್ಬಾಣ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಮೀಸಲಾತಿ ಪ್ರಾತಿನಿಧ್ಯವೋ-ಆರ್ಥಿಕ ಸಬಲೀಕರಣವೋ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.
೮ ಲಕ್ಷ ರೂ. ಆದಾಯದೊಳಗಿನವರು ಶೇ.೧೦ ಮೀಸಲಾತಿಗೆ ಅರ್ಹರು ಎಂದು ಹೇಳಲಾಗಿದೆ. ಈ ಮಾನದಂಡ ಸರಿಯೇ ಎಂದು ಪ್ರಶ್ನಿಸಿದ ಅವರು, ಆರ್ಥಿಕವಾಗಿ ಹಿಂದುಳಿದವರ ಸಬಲೀಕರಣಕ್ಕೆ ಆರ್ಥಿಕ ನೀತಿಗಳನ್ನು ರೂಪಿಸಲಿ. ಅದನ್ನು ಬಿಟ್ಟು ಮೀಸಲಾತಿ ನೀಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮೀಸಲಾತಿಯು ಪ್ರಾತಿನಿಧ್ಯವೇ ಹೊರತು ಆರ್ಥಿಕ ಸಬಲೀಕರಣ ಅಲ್ಲವೇ ಅಲ್ಲ. ಶೋಷಿತ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ, ಉದ್ಯೋಗ, ರಾಜಕೀಯ, ಭೌಗೋಳಿಕವಾಗಿ ಪ್ರಾಧ್ಯಾನ್ಯತೆ ನೀಡುವ ಪ್ರಯತ್ನವೇ ಮೀಸಲಾತಿ ಎಂದು ತಿಳಿಸಿದರು.
ಪ್ರಸನ್ನಾನಂದ ಶ್ರೀಗಳ ಹೋರಾಟ ಹಾಗೂ ನಾಗಮೋಹನ್ ದಾಸ್ ವರದಿಯಂತೆ ಪರಿಶಿಷ್ಟರಿಗೆ ಮೀಸಲಾತಿ ಹೆಚ್ಚಳ ಮಾಡಿದೆ ಹೊರತು ರಾಜಕೀಯ ಲಾಭವಿಲ್ಲ. ಒಕ್ಕಲಿಗರು ಮೀಸಲಾತಿ ಹೆಚ್ಚಿಸಿ ಎಂದು ಹೋರಾಟಕ್ಕೆ ಸಜ್ಜಾಗಿರುವುದು ಸಮಂಜಸವಾಗಿದೆ. ಪಂಚಮಸಾಲಿಗಳು ೨ಎಗೆ ಸೇರಿಸಬೇಕು ಎಂದು ಹೋರಾಟ ಮಾಡುವುದು ಸ್ವಾರ್ಥದಿಂದ ಕೂಡಿದೆ ಎಂದು ತಿಳಿಸಿದರು.
ನ್ಯಾ.ಸದಾಶಿವ ಆಯೋಗದ ಶಿಫಾರಸ್ಸಿನಂತೆ ಒಳಮೀಸಲಾತಿ ನ್ಯಾಯಯುತವಾಗಿದೆ. ಸರೋಜಿನಿ ಮಹಿಷಿ ವರದಿಯಂತೆ ಕನ್ನಡಗರಿಗೆ ಉದ್ಯೋಗಾವಕಾಶ ನೀಡಬೇಕು. ಶಿಕ್ಷಣ, ಉದ್ಯೋಗದಲ್ಲಿ ಶೋಷಿತರಿಗೆ ಸಂಪೂರ್ಣ ನ್ಯಾಯ ಸಿಗುವ ತನಕ ಮೀಸಲಾತಿ ಇರಲೇಬೇಕು. ಜನಸಂಖ್ಯೆ ಆಧಾರವಾಗಿ ಮತ್ತು ಖಾಸಗಿ ರಂಗದಲ್ಲೂ ಮೀಸಲಾತಿ ನೀಡುವುದು ನ್ಯಾಯವಾಗಿದೆ ಎಂದರು.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago