ಜಿಲ್ಲೆಗಳು

ಶೇ.10 ಮೀಸಲಾತಿಯಿಂದ ಸಾಮಾಜಿಕ ನ್ಯಾಯಕ್ಕೆ ಧಕ್ಕೆ : ನಟ ಚೇತನ್‌ ಅಹಿಂಸಾ ಅಸಮಾಧಾನ

ಚಿತ್ರನಟ ಚೇತನದ ಅಹಿಂಸಾ ಅಸಮಾಧಾನ

ಚಾಮರಾಜನಗರ: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.೧೦ ಮೀಸಲಾತಿ ನೀಡುವುದು ಸಾಮಾಜಿಕ ನ್ಯಾಯಕ್ಕೆ ಧಕ್ಕೆಯಾಗಿದೆ. ಆದ್ದರಿಂದ ಇದರ ವಿರುದ್ದ ಶೋಷಿತರು ಹೋರಾಟ ನಡೆಸಬೇಕಾಗಿದೆ ಎಂದು ಚೇತನ್ ಅಹಿಂಸಾ ಸಲಹೆ ನೀಡಿದರು.
ನಗರದ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಭಾನುವಾರ ಬಹುಜನ್ ವಾಲೆಂಟಿಯರ್ ಫೋರ್ಸ್ ಜಿಲ್ಲಾ ಘಟಕದಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ೬೬ನೇ ಪರಿನಿಬ್ಬಾಣ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಮೀಸಲಾತಿ ಪ್ರಾತಿನಿಧ್ಯವೋ-ಆರ್ಥಿಕ ಸಬಲೀಕರಣವೋ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.
೮ ಲಕ್ಷ ರೂ. ಆದಾಯದೊಳಗಿನವರು ಶೇ.೧೦ ಮೀಸಲಾತಿಗೆ ಅರ್ಹರು ಎಂದು ಹೇಳಲಾಗಿದೆ. ಈ ಮಾನದಂಡ ಸರಿಯೇ ಎಂದು ಪ್ರಶ್ನಿಸಿದ ಅವರು, ಆರ್ಥಿಕವಾಗಿ ಹಿಂದುಳಿದವರ ಸಬಲೀಕರಣಕ್ಕೆ ಆರ್ಥಿಕ ನೀತಿಗಳನ್ನು ರೂಪಿಸಲಿ. ಅದನ್ನು ಬಿಟ್ಟು ಮೀಸಲಾತಿ ನೀಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮೀಸಲಾತಿಯು ಪ್ರಾತಿನಿಧ್ಯವೇ ಹೊರತು ಆರ್ಥಿಕ ಸಬಲೀಕರಣ ಅಲ್ಲವೇ ಅಲ್ಲ. ಶೋಷಿತ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ, ಉದ್ಯೋಗ, ರಾಜಕೀಯ, ಭೌಗೋಳಿಕವಾಗಿ ಪ್ರಾಧ್ಯಾನ್ಯತೆ ನೀಡುವ ಪ್ರಯತ್ನವೇ ಮೀಸಲಾತಿ ಎಂದು ತಿಳಿಸಿದರು.
ಪ್ರಸನ್ನಾನಂದ ಶ್ರೀಗಳ ಹೋರಾಟ ಹಾಗೂ ನಾಗಮೋಹನ್ ದಾಸ್ ವರದಿಯಂತೆ ಪರಿಶಿಷ್ಟರಿಗೆ ಮೀಸಲಾತಿ ಹೆಚ್ಚಳ ಮಾಡಿದೆ ಹೊರತು ರಾಜಕೀಯ ಲಾಭವಿಲ್ಲ. ಒಕ್ಕಲಿಗರು ಮೀಸಲಾತಿ ಹೆಚ್ಚಿಸಿ ಎಂದು ಹೋರಾಟಕ್ಕೆ ಸಜ್ಜಾಗಿರುವುದು ಸಮಂಜಸವಾಗಿದೆ. ಪಂಚಮಸಾಲಿಗಳು ೨ಎಗೆ ಸೇರಿಸಬೇಕು ಎಂದು ಹೋರಾಟ ಮಾಡುವುದು ಸ್ವಾರ್ಥದಿಂದ ಕೂಡಿದೆ ಎಂದು ತಿಳಿಸಿದರು.
ನ್ಯಾ.ಸದಾಶಿವ ಆಯೋಗದ ಶಿಫಾರಸ್ಸಿನಂತೆ ಒಳಮೀಸಲಾತಿ ನ್ಯಾಯಯುತವಾಗಿದೆ. ಸರೋಜಿನಿ ಮಹಿಷಿ ವರದಿಯಂತೆ ಕನ್ನಡಗರಿಗೆ ಉದ್ಯೋಗಾವಕಾಶ ನೀಡಬೇಕು. ಶಿಕ್ಷಣ, ಉದ್ಯೋಗದಲ್ಲಿ ಶೋಷಿತರಿಗೆ ಸಂಪೂರ್ಣ ನ್ಯಾಯ ಸಿಗುವ ತನಕ ಮೀಸಲಾತಿ ಇರಲೇಬೇಕು. ಜನಸಂಖ್ಯೆ ಆಧಾರವಾಗಿ ಮತ್ತು ಖಾಸಗಿ ರಂಗದಲ್ಲೂ ಮೀಸಲಾತಿ ನೀಡುವುದು ನ್ಯಾಯವಾಗಿದೆ ಎಂದರು.

andolanait

Recent Posts

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…

17 mins ago

ಅಸ್ಸಾಂನಲ್ಲಿ ಘೋರ ದುರಂತ: ರೈಲು ಡಿಕ್ಕಿಯಾಗಿ 7 ಆನೆಗಳು ಸಾವು

ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ…

1 hour ago

ಬುರುಡೆ ಗ್ಯಾಂಗ್‌ನಲ್ಲಿ ಬಿರುಕು: ಏನಾಗಿದೆ ಗೊತ್ತಾ?

ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್‌ ವಿರುದ್ಧವೇ ತಿರುಗಿ ಬಿದ್ದಿದ್ದಾನೆ.…

1 hour ago

ದ್ವೇಷ ಭಾಷಣ ಪ್ರತಿಬಂಧನ ಮಸೂದೆಗೆ ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು…

1 hour ago

ಓದುಗರ ಪತ್ರ: ಕಾನೂನು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತೆ?

ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…

2 hours ago

ಓದುಗರ ಪತ್ರ:  ಸಾಮಾಜಿಕ ಬಹಿಷ್ಕಾರ ನಿಷೇಧ ಕಾನೂನು ಸ್ವಾಗತಾರ್ಹ

ರಾಜ್ಯದಲ್ಲಿ ‘ಸಾಮಾಜಿಕ ಬಹಿಷ್ಕಾರ ನಿಷೇಧ ’ ಕಾನೂನನ್ನು ಜಾರಿಗೊಳಿಸಲು ಮುಂದಾಗಿರುವ ರಾಜ್ಯಸರ್ಕಾರದ ಕ್ರಮ ಶ್ಲಾಘನೀಯ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾರ್ವಭೌಮತೆ,…

2 hours ago