ಚಿತ್ರನಟ ಚೇತನದ ಅಹಿಂಸಾ ಅಸಮಾಧಾನ
ಚಾಮರಾಜನಗರ: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.೧೦ ಮೀಸಲಾತಿ ನೀಡುವುದು ಸಾಮಾಜಿಕ ನ್ಯಾಯಕ್ಕೆ ಧಕ್ಕೆಯಾಗಿದೆ. ಆದ್ದರಿಂದ ಇದರ ವಿರುದ್ದ ಶೋಷಿತರು ಹೋರಾಟ ನಡೆಸಬೇಕಾಗಿದೆ ಎಂದು ಚೇತನ್ ಅಹಿಂಸಾ ಸಲಹೆ ನೀಡಿದರು.
ನಗರದ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಭಾನುವಾರ ಬಹುಜನ್ ವಾಲೆಂಟಿಯರ್ ಫೋರ್ಸ್ ಜಿಲ್ಲಾ ಘಟಕದಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ೬೬ನೇ ಪರಿನಿಬ್ಬಾಣ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಮೀಸಲಾತಿ ಪ್ರಾತಿನಿಧ್ಯವೋ-ಆರ್ಥಿಕ ಸಬಲೀಕರಣವೋ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.
೮ ಲಕ್ಷ ರೂ. ಆದಾಯದೊಳಗಿನವರು ಶೇ.೧೦ ಮೀಸಲಾತಿಗೆ ಅರ್ಹರು ಎಂದು ಹೇಳಲಾಗಿದೆ. ಈ ಮಾನದಂಡ ಸರಿಯೇ ಎಂದು ಪ್ರಶ್ನಿಸಿದ ಅವರು, ಆರ್ಥಿಕವಾಗಿ ಹಿಂದುಳಿದವರ ಸಬಲೀಕರಣಕ್ಕೆ ಆರ್ಥಿಕ ನೀತಿಗಳನ್ನು ರೂಪಿಸಲಿ. ಅದನ್ನು ಬಿಟ್ಟು ಮೀಸಲಾತಿ ನೀಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮೀಸಲಾತಿಯು ಪ್ರಾತಿನಿಧ್ಯವೇ ಹೊರತು ಆರ್ಥಿಕ ಸಬಲೀಕರಣ ಅಲ್ಲವೇ ಅಲ್ಲ. ಶೋಷಿತ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ, ಉದ್ಯೋಗ, ರಾಜಕೀಯ, ಭೌಗೋಳಿಕವಾಗಿ ಪ್ರಾಧ್ಯಾನ್ಯತೆ ನೀಡುವ ಪ್ರಯತ್ನವೇ ಮೀಸಲಾತಿ ಎಂದು ತಿಳಿಸಿದರು.
ಪ್ರಸನ್ನಾನಂದ ಶ್ರೀಗಳ ಹೋರಾಟ ಹಾಗೂ ನಾಗಮೋಹನ್ ದಾಸ್ ವರದಿಯಂತೆ ಪರಿಶಿಷ್ಟರಿಗೆ ಮೀಸಲಾತಿ ಹೆಚ್ಚಳ ಮಾಡಿದೆ ಹೊರತು ರಾಜಕೀಯ ಲಾಭವಿಲ್ಲ. ಒಕ್ಕಲಿಗರು ಮೀಸಲಾತಿ ಹೆಚ್ಚಿಸಿ ಎಂದು ಹೋರಾಟಕ್ಕೆ ಸಜ್ಜಾಗಿರುವುದು ಸಮಂಜಸವಾಗಿದೆ. ಪಂಚಮಸಾಲಿಗಳು ೨ಎಗೆ ಸೇರಿಸಬೇಕು ಎಂದು ಹೋರಾಟ ಮಾಡುವುದು ಸ್ವಾರ್ಥದಿಂದ ಕೂಡಿದೆ ಎಂದು ತಿಳಿಸಿದರು.
ನ್ಯಾ.ಸದಾಶಿವ ಆಯೋಗದ ಶಿಫಾರಸ್ಸಿನಂತೆ ಒಳಮೀಸಲಾತಿ ನ್ಯಾಯಯುತವಾಗಿದೆ. ಸರೋಜಿನಿ ಮಹಿಷಿ ವರದಿಯಂತೆ ಕನ್ನಡಗರಿಗೆ ಉದ್ಯೋಗಾವಕಾಶ ನೀಡಬೇಕು. ಶಿಕ್ಷಣ, ಉದ್ಯೋಗದಲ್ಲಿ ಶೋಷಿತರಿಗೆ ಸಂಪೂರ್ಣ ನ್ಯಾಯ ಸಿಗುವ ತನಕ ಮೀಸಲಾತಿ ಇರಲೇಬೇಕು. ಜನಸಂಖ್ಯೆ ಆಧಾರವಾಗಿ ಮತ್ತು ಖಾಸಗಿ ರಂಗದಲ್ಲೂ ಮೀಸಲಾತಿ ನೀಡುವುದು ನ್ಯಾಯವಾಗಿದೆ ಎಂದರು.
ಹೊಸದಿಲ್ಲಿ : ಮುಂಬರುವ ಏಪ್ರಿಲ್ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…