ಜಿಲ್ಲೆಗಳು

ಶೇ.10 ಮೀಸಲಾತಿಯಿಂದ ಸಾಮಾಜಿಕ ನ್ಯಾಯಕ್ಕೆ ಧಕ್ಕೆ : ನಟ ಚೇತನ್‌ ಅಹಿಂಸಾ ಅಸಮಾಧಾನ

ಚಿತ್ರನಟ ಚೇತನದ ಅಹಿಂಸಾ ಅಸಮಾಧಾನ

ಚಾಮರಾಜನಗರ: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.೧೦ ಮೀಸಲಾತಿ ನೀಡುವುದು ಸಾಮಾಜಿಕ ನ್ಯಾಯಕ್ಕೆ ಧಕ್ಕೆಯಾಗಿದೆ. ಆದ್ದರಿಂದ ಇದರ ವಿರುದ್ದ ಶೋಷಿತರು ಹೋರಾಟ ನಡೆಸಬೇಕಾಗಿದೆ ಎಂದು ಚೇತನ್ ಅಹಿಂಸಾ ಸಲಹೆ ನೀಡಿದರು.
ನಗರದ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಭಾನುವಾರ ಬಹುಜನ್ ವಾಲೆಂಟಿಯರ್ ಫೋರ್ಸ್ ಜಿಲ್ಲಾ ಘಟಕದಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ೬೬ನೇ ಪರಿನಿಬ್ಬಾಣ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಮೀಸಲಾತಿ ಪ್ರಾತಿನಿಧ್ಯವೋ-ಆರ್ಥಿಕ ಸಬಲೀಕರಣವೋ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.
೮ ಲಕ್ಷ ರೂ. ಆದಾಯದೊಳಗಿನವರು ಶೇ.೧೦ ಮೀಸಲಾತಿಗೆ ಅರ್ಹರು ಎಂದು ಹೇಳಲಾಗಿದೆ. ಈ ಮಾನದಂಡ ಸರಿಯೇ ಎಂದು ಪ್ರಶ್ನಿಸಿದ ಅವರು, ಆರ್ಥಿಕವಾಗಿ ಹಿಂದುಳಿದವರ ಸಬಲೀಕರಣಕ್ಕೆ ಆರ್ಥಿಕ ನೀತಿಗಳನ್ನು ರೂಪಿಸಲಿ. ಅದನ್ನು ಬಿಟ್ಟು ಮೀಸಲಾತಿ ನೀಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮೀಸಲಾತಿಯು ಪ್ರಾತಿನಿಧ್ಯವೇ ಹೊರತು ಆರ್ಥಿಕ ಸಬಲೀಕರಣ ಅಲ್ಲವೇ ಅಲ್ಲ. ಶೋಷಿತ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ, ಉದ್ಯೋಗ, ರಾಜಕೀಯ, ಭೌಗೋಳಿಕವಾಗಿ ಪ್ರಾಧ್ಯಾನ್ಯತೆ ನೀಡುವ ಪ್ರಯತ್ನವೇ ಮೀಸಲಾತಿ ಎಂದು ತಿಳಿಸಿದರು.
ಪ್ರಸನ್ನಾನಂದ ಶ್ರೀಗಳ ಹೋರಾಟ ಹಾಗೂ ನಾಗಮೋಹನ್ ದಾಸ್ ವರದಿಯಂತೆ ಪರಿಶಿಷ್ಟರಿಗೆ ಮೀಸಲಾತಿ ಹೆಚ್ಚಳ ಮಾಡಿದೆ ಹೊರತು ರಾಜಕೀಯ ಲಾಭವಿಲ್ಲ. ಒಕ್ಕಲಿಗರು ಮೀಸಲಾತಿ ಹೆಚ್ಚಿಸಿ ಎಂದು ಹೋರಾಟಕ್ಕೆ ಸಜ್ಜಾಗಿರುವುದು ಸಮಂಜಸವಾಗಿದೆ. ಪಂಚಮಸಾಲಿಗಳು ೨ಎಗೆ ಸೇರಿಸಬೇಕು ಎಂದು ಹೋರಾಟ ಮಾಡುವುದು ಸ್ವಾರ್ಥದಿಂದ ಕೂಡಿದೆ ಎಂದು ತಿಳಿಸಿದರು.
ನ್ಯಾ.ಸದಾಶಿವ ಆಯೋಗದ ಶಿಫಾರಸ್ಸಿನಂತೆ ಒಳಮೀಸಲಾತಿ ನ್ಯಾಯಯುತವಾಗಿದೆ. ಸರೋಜಿನಿ ಮಹಿಷಿ ವರದಿಯಂತೆ ಕನ್ನಡಗರಿಗೆ ಉದ್ಯೋಗಾವಕಾಶ ನೀಡಬೇಕು. ಶಿಕ್ಷಣ, ಉದ್ಯೋಗದಲ್ಲಿ ಶೋಷಿತರಿಗೆ ಸಂಪೂರ್ಣ ನ್ಯಾಯ ಸಿಗುವ ತನಕ ಮೀಸಲಾತಿ ಇರಲೇಬೇಕು. ಜನಸಂಖ್ಯೆ ಆಧಾರವಾಗಿ ಮತ್ತು ಖಾಸಗಿ ರಂಗದಲ್ಲೂ ಮೀಸಲಾತಿ ನೀಡುವುದು ನ್ಯಾಯವಾಗಿದೆ ಎಂದರು.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

6 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

11 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

12 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago