ಜಿಲ್ಲೆಗಳು

ಶೇ.10 ಮೀಸಲಾತಿಯಿಂದ ಸಾಮಾಜಿಕ ನ್ಯಾಯಕ್ಕೆ ಧಕ್ಕೆ : ನಟ ಚೇತನ್‌ ಅಹಿಂಸಾ ಅಸಮಾಧಾನ

ಚಿತ್ರನಟ ಚೇತನದ ಅಹಿಂಸಾ ಅಸಮಾಧಾನ

ಚಾಮರಾಜನಗರ: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.೧೦ ಮೀಸಲಾತಿ ನೀಡುವುದು ಸಾಮಾಜಿಕ ನ್ಯಾಯಕ್ಕೆ ಧಕ್ಕೆಯಾಗಿದೆ. ಆದ್ದರಿಂದ ಇದರ ವಿರುದ್ದ ಶೋಷಿತರು ಹೋರಾಟ ನಡೆಸಬೇಕಾಗಿದೆ ಎಂದು ಚೇತನ್ ಅಹಿಂಸಾ ಸಲಹೆ ನೀಡಿದರು.
ನಗರದ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಭಾನುವಾರ ಬಹುಜನ್ ವಾಲೆಂಟಿಯರ್ ಫೋರ್ಸ್ ಜಿಲ್ಲಾ ಘಟಕದಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ೬೬ನೇ ಪರಿನಿಬ್ಬಾಣ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಮೀಸಲಾತಿ ಪ್ರಾತಿನಿಧ್ಯವೋ-ಆರ್ಥಿಕ ಸಬಲೀಕರಣವೋ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.
೮ ಲಕ್ಷ ರೂ. ಆದಾಯದೊಳಗಿನವರು ಶೇ.೧೦ ಮೀಸಲಾತಿಗೆ ಅರ್ಹರು ಎಂದು ಹೇಳಲಾಗಿದೆ. ಈ ಮಾನದಂಡ ಸರಿಯೇ ಎಂದು ಪ್ರಶ್ನಿಸಿದ ಅವರು, ಆರ್ಥಿಕವಾಗಿ ಹಿಂದುಳಿದವರ ಸಬಲೀಕರಣಕ್ಕೆ ಆರ್ಥಿಕ ನೀತಿಗಳನ್ನು ರೂಪಿಸಲಿ. ಅದನ್ನು ಬಿಟ್ಟು ಮೀಸಲಾತಿ ನೀಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮೀಸಲಾತಿಯು ಪ್ರಾತಿನಿಧ್ಯವೇ ಹೊರತು ಆರ್ಥಿಕ ಸಬಲೀಕರಣ ಅಲ್ಲವೇ ಅಲ್ಲ. ಶೋಷಿತ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ, ಉದ್ಯೋಗ, ರಾಜಕೀಯ, ಭೌಗೋಳಿಕವಾಗಿ ಪ್ರಾಧ್ಯಾನ್ಯತೆ ನೀಡುವ ಪ್ರಯತ್ನವೇ ಮೀಸಲಾತಿ ಎಂದು ತಿಳಿಸಿದರು.
ಪ್ರಸನ್ನಾನಂದ ಶ್ರೀಗಳ ಹೋರಾಟ ಹಾಗೂ ನಾಗಮೋಹನ್ ದಾಸ್ ವರದಿಯಂತೆ ಪರಿಶಿಷ್ಟರಿಗೆ ಮೀಸಲಾತಿ ಹೆಚ್ಚಳ ಮಾಡಿದೆ ಹೊರತು ರಾಜಕೀಯ ಲಾಭವಿಲ್ಲ. ಒಕ್ಕಲಿಗರು ಮೀಸಲಾತಿ ಹೆಚ್ಚಿಸಿ ಎಂದು ಹೋರಾಟಕ್ಕೆ ಸಜ್ಜಾಗಿರುವುದು ಸಮಂಜಸವಾಗಿದೆ. ಪಂಚಮಸಾಲಿಗಳು ೨ಎಗೆ ಸೇರಿಸಬೇಕು ಎಂದು ಹೋರಾಟ ಮಾಡುವುದು ಸ್ವಾರ್ಥದಿಂದ ಕೂಡಿದೆ ಎಂದು ತಿಳಿಸಿದರು.
ನ್ಯಾ.ಸದಾಶಿವ ಆಯೋಗದ ಶಿಫಾರಸ್ಸಿನಂತೆ ಒಳಮೀಸಲಾತಿ ನ್ಯಾಯಯುತವಾಗಿದೆ. ಸರೋಜಿನಿ ಮಹಿಷಿ ವರದಿಯಂತೆ ಕನ್ನಡಗರಿಗೆ ಉದ್ಯೋಗಾವಕಾಶ ನೀಡಬೇಕು. ಶಿಕ್ಷಣ, ಉದ್ಯೋಗದಲ್ಲಿ ಶೋಷಿತರಿಗೆ ಸಂಪೂರ್ಣ ನ್ಯಾಯ ಸಿಗುವ ತನಕ ಮೀಸಲಾತಿ ಇರಲೇಬೇಕು. ಜನಸಂಖ್ಯೆ ಆಧಾರವಾಗಿ ಮತ್ತು ಖಾಸಗಿ ರಂಗದಲ್ಲೂ ಮೀಸಲಾತಿ ನೀಡುವುದು ನ್ಯಾಯವಾಗಿದೆ ಎಂದರು.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

2 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

2 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

2 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

3 hours ago