ಜಿಲ್ಲೆಗಳು

ಶೇ.10 ಮೀಸಲಾತಿಯಿಂದ ಸಾಮಾಜಿಕ ನ್ಯಾಯಕ್ಕೆ ಧಕ್ಕೆ : ನಟ ಚೇತನ್‌ ಅಹಿಂಸಾ ಅಸಮಾಧಾನ

ಚಿತ್ರನಟ ಚೇತನದ ಅಹಿಂಸಾ ಅಸಮಾಧಾನ

ಚಾಮರಾಜನಗರ: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.೧೦ ಮೀಸಲಾತಿ ನೀಡುವುದು ಸಾಮಾಜಿಕ ನ್ಯಾಯಕ್ಕೆ ಧಕ್ಕೆಯಾಗಿದೆ. ಆದ್ದರಿಂದ ಇದರ ವಿರುದ್ದ ಶೋಷಿತರು ಹೋರಾಟ ನಡೆಸಬೇಕಾಗಿದೆ ಎಂದು ಚೇತನ್ ಅಹಿಂಸಾ ಸಲಹೆ ನೀಡಿದರು.
ನಗರದ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಭಾನುವಾರ ಬಹುಜನ್ ವಾಲೆಂಟಿಯರ್ ಫೋರ್ಸ್ ಜಿಲ್ಲಾ ಘಟಕದಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ೬೬ನೇ ಪರಿನಿಬ್ಬಾಣ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಮೀಸಲಾತಿ ಪ್ರಾತಿನಿಧ್ಯವೋ-ಆರ್ಥಿಕ ಸಬಲೀಕರಣವೋ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.
೮ ಲಕ್ಷ ರೂ. ಆದಾಯದೊಳಗಿನವರು ಶೇ.೧೦ ಮೀಸಲಾತಿಗೆ ಅರ್ಹರು ಎಂದು ಹೇಳಲಾಗಿದೆ. ಈ ಮಾನದಂಡ ಸರಿಯೇ ಎಂದು ಪ್ರಶ್ನಿಸಿದ ಅವರು, ಆರ್ಥಿಕವಾಗಿ ಹಿಂದುಳಿದವರ ಸಬಲೀಕರಣಕ್ಕೆ ಆರ್ಥಿಕ ನೀತಿಗಳನ್ನು ರೂಪಿಸಲಿ. ಅದನ್ನು ಬಿಟ್ಟು ಮೀಸಲಾತಿ ನೀಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮೀಸಲಾತಿಯು ಪ್ರಾತಿನಿಧ್ಯವೇ ಹೊರತು ಆರ್ಥಿಕ ಸಬಲೀಕರಣ ಅಲ್ಲವೇ ಅಲ್ಲ. ಶೋಷಿತ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ, ಉದ್ಯೋಗ, ರಾಜಕೀಯ, ಭೌಗೋಳಿಕವಾಗಿ ಪ್ರಾಧ್ಯಾನ್ಯತೆ ನೀಡುವ ಪ್ರಯತ್ನವೇ ಮೀಸಲಾತಿ ಎಂದು ತಿಳಿಸಿದರು.
ಪ್ರಸನ್ನಾನಂದ ಶ್ರೀಗಳ ಹೋರಾಟ ಹಾಗೂ ನಾಗಮೋಹನ್ ದಾಸ್ ವರದಿಯಂತೆ ಪರಿಶಿಷ್ಟರಿಗೆ ಮೀಸಲಾತಿ ಹೆಚ್ಚಳ ಮಾಡಿದೆ ಹೊರತು ರಾಜಕೀಯ ಲಾಭವಿಲ್ಲ. ಒಕ್ಕಲಿಗರು ಮೀಸಲಾತಿ ಹೆಚ್ಚಿಸಿ ಎಂದು ಹೋರಾಟಕ್ಕೆ ಸಜ್ಜಾಗಿರುವುದು ಸಮಂಜಸವಾಗಿದೆ. ಪಂಚಮಸಾಲಿಗಳು ೨ಎಗೆ ಸೇರಿಸಬೇಕು ಎಂದು ಹೋರಾಟ ಮಾಡುವುದು ಸ್ವಾರ್ಥದಿಂದ ಕೂಡಿದೆ ಎಂದು ತಿಳಿಸಿದರು.
ನ್ಯಾ.ಸದಾಶಿವ ಆಯೋಗದ ಶಿಫಾರಸ್ಸಿನಂತೆ ಒಳಮೀಸಲಾತಿ ನ್ಯಾಯಯುತವಾಗಿದೆ. ಸರೋಜಿನಿ ಮಹಿಷಿ ವರದಿಯಂತೆ ಕನ್ನಡಗರಿಗೆ ಉದ್ಯೋಗಾವಕಾಶ ನೀಡಬೇಕು. ಶಿಕ್ಷಣ, ಉದ್ಯೋಗದಲ್ಲಿ ಶೋಷಿತರಿಗೆ ಸಂಪೂರ್ಣ ನ್ಯಾಯ ಸಿಗುವ ತನಕ ಮೀಸಲಾತಿ ಇರಲೇಬೇಕು. ಜನಸಂಖ್ಯೆ ಆಧಾರವಾಗಿ ಮತ್ತು ಖಾಸಗಿ ರಂಗದಲ್ಲೂ ಮೀಸಲಾತಿ ನೀಡುವುದು ನ್ಯಾಯವಾಗಿದೆ ಎಂದರು.

andolanait

Recent Posts

ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್‌ ಮತ್ತು ಸಿಪಿಎಂ…

22 mins ago

ಸಭೆ ನಡೆಸುತ್ತಿರುವಾಗಲೇ ತೀವ್ರ ಅಸ್ವಸ್ಥ ; ಡಿಸಿಎಂ ಪವನ್‌ ಕಲ್ಯಾಣ್‌ಗೆ ದಿಢೀರ್‌ ಶಸ್ತ್ರ ಚಿಕಿತ್ಸೆ,

ಹೈದರಾಬಾದ್ : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಅವರಿಗೆ ಹೈದರಾಬಾದ್‌ನಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ…

51 mins ago

ಸರ್ವಾಧಿಕಾರಿ ಬಿಜೆಪಿಯೇ ಮಹಿಳಾ ವಿರೋಧಿ : ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ

ಬೆಂಗಳೂರು : ಮಹಿಳಾ ಮೀಸಲಾತಿ ಪರಿಕಲ್ಪನೆ ಕಾಂಗ್ರೆಸ್‌ನ ಕೂಸು. ಮಸೂದೆಗೆ ಸೋಲಾಗಲಿದೆ ಎಂದು ಗೊತ್ತಿದ್ದರೂ ಸರ್ವಾಧಿಕಾರಿಯಂತೆ ಯಾವುದೇ ಚರ್ಚೆ ಮಾಡದೆ,…

1 hour ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಲೆ ಪ್ರಕರಣ : ಎಸ್‌.ಪಿ.ಮಲ್ಲಿಕಾರ್ಜುನ ಹೇಳಿದ್ದೇನು?

ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ…

2 hours ago

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

ರೋಮ್‌ : ಇಟಲಿಯ ಬರ್ಗಾಮೊ ಪ್ರಾಂತ್ಯದ ಕೊವೊದಲ್ಲಿ ಇಬ್ಬರು ಭಾರತೀಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೊವೊ ನಿವಾಸಿ ರಾಗಿಂದರ್ ಸಿಂಗ್…

2 hours ago

ಮೈಸೂರು | ಪಬ್‌ನಲ್ಲಿ ಗಲಾಟೆ ; ಓರ್ವ ಯುವಕನ ಕೊಲೆ

ಮೈಸೂರು : ಪಬ್‌ನಲ್ಲಿ ನಡೆದ ಗಲಾಟೆ ಪರಿಣಾಮ ಓರ್ವ ಯುವಕ ಕೊಲೆಯಾಗಿರುವ ಘಟನೆ ಮೈಸೂರಿನ ವಿಜಯನಗರದ ಎರಡನೇ ಹಂತದ ರೆಸ್ಟೋರೆಂಟ್‌ನಲ್ಲಿ…

2 hours ago