ಜಿಲ್ಲೆಗಳು

ರಾಜ್ಯದ 14 ಆನೆಗಳನ್ನು ಭೋಪಾಲ್‌ ಗೆ ಕಳುಹಿಸುತ್ತಿರುವುದೇಕೇ ?

ದೇಶದಲ್ಲಿಯೇ ಅತಿ ಹೆಚ್ಚು ಆನೆಗಳಿರುವ ಕರ್ನಾಟಕ ದೂರದ ಮಧ್ಯಪ್ರದೇಶಕ್ಕೆ ತನ್ನ 14 ಸಾಕಾನೆಗಳನ್ನು ಕಳುಹಿಸಿಕೊಡುತ್ತಿದೆ. 

ಕೊಡಗು : ಕೊಡಗಿನ ದುಬಾರೆ ಆನೆ ಶಿಬಿರದಿಂದ ಹೊರಟ ಐದು ಆನೆಗಳು ಈಗಾಗಲೇ ಭೋಪಾಲ್‌ ತಲುಪಿವೆ. ಆನೆಗಳ ಜತೆ ಮಾವುತರು, ಉಸ್ತುವಾರಿಗಳೂ ತೆರಳಿದ್ದು, ಅಲ್ಲಿನ ಸಿಬ್ಬಂದಿಗೆ ತರಬೇತಿ ನೀಡಿದ ಬಳಿಕ ರಾಜ್ಯಕ್ಕೆ ವಾಪಸ್ಸಾಗಲಿದ್ದಾರೆ. ಬಂಡೀಪುರದ ರಾಮಾಪುರ ಶಿಬಿರದಿಂದ ಐದು, ಶಿವಮೊಗ್ಗದಲ್ಲಿರುವ ಸಕ್ಕರೆ ಬೈಲು ಆನೆ ಶಿಬಿರದಿಂದ ನಾಲ್ಕು ಆನೆಗಳು ಸದ್ಯದಲ್ಲಿಯೇ ಮಧ್ಯಪ್ರದೇಶಕ್ಕೆ ಹೊರಡಲಿವೆ.

ಆದರೆ ತಾವು ಮಕ್ಕಳಂತೆ ಪೋಷಿಸಿ, ಬೆಳೆಸಿದ ಆನೆಗಳನ್ನು ಅನ್ಯ ರಾಜ್ಯಕ್ಕೆ ಸ್ಥಳಾಂತರಿಸುವ ಈ ಯೋಜನೆಗೆ ಮಾವುತರು, ಕಾವಾಡಿಗಳ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ರಾಜ್ಯದ ಆನೆ ಶಿಬಿರಗಳಲ್ಲಿ ಆನೆಗಳ ಅಸಹಜ ಸಾವಿನ ಬಗ್ಗೆ ತನಿಖೆ ನಡೆಸಲು ಕೋರ್ಟ್‌ ನೇಮಿಸಿದ್ದ ತಜ್ಞರ ಸಮಿತಿ ದುಬಾರೆ ಸಾಕಾನೆ ಶಿಬಿರಕ್ಕೆ ಭೇಟಿ ನೀಡಿದ್ದ ವೇಳೆ ಇಲ್ಲಿ 32 ಆನೆಗಳು ಇರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿತ್ತು. ಒಂದು ಶಿಬಿರದಲ್ಲಿ 15ಕ್ಕೂ ಹೆಚ್ಚು ಆನೆಗಳು ಇರುವಂತಿಲ್ಲ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿತ್ತು.
ಈ ಬಳಿಕ ಕುಶಾಲನಗರದ ಹಾರಂಗಿ ಜಲಾಶಯದ ಹಿನ್ನೀರು ಪ್ರದೇಶದ ಬಳಿ ಹೊಸ ಆನೆ ಶಿಬಿರ ಆರಂಭಿಸಿ ಅಲ್ಲಿಗೆ ಒಂದಷ್ಟು ಆನೆಗಳನ್ನು ಸ್ಥಳಾಂತರಿಸಲಾಗಿತ್ತು.


ರಾಜ್ಯದಲ್ಲಿ ಸದ್ಯ 10 ಆನೆ ಶಿಬಿರಗಳಿದ್ದು ಹೆಚ್ಚಿನ ಶಿಬಿರಗಳಲ್ಲಿ 15ಕ್ಕಿಂತ ಹೆಚ್ಚು ಆನೆಗಳಿವೆ. ಒಂದಷ್ಟು ಸಾಕಾನೆಗಳನ್ನು ಆನೆಗಳ ಕೊರತೆ ಇರುವ ಮಧ್ಯಪ್ರದೇಶಕ್ಕೆ ಕಳುಹಿಸಿಕೊಟ್ಟರೆ ಹೊಸದಾಗಿ ಆನೆ ಶಿಬಿರ ತೆರೆಯುವ ಅಗತ್ಯ ಇರುವುದಿಲ್ಲ ಎನ್ನುವುದು ಸರಕಾರದ ಯೋಚನೆ. ಕರ್ನಾಟಕದಂತೆ ಮಧ್ಯಪ್ರದೇಶದಲ್ಲೂ ವನ್ಯಮೃಗಗಳ ಹಾವಳಿ ವಿಪರೀತವಾಗಿದೆ. ಆನೆ, ಹುಲಿ, ಚಿರತೆ ಹಿಡಿಯುವ ಕಾರ್ಯಾಚರಣೆಗೆ ಆ ರಾಜ್ಯಕ್ಕೂ ಪಳಗಿದ ಆನೆಗಳ ಅವಶ್ಯಕತೆ ಇದೆ.

ಉಭಯ ರಾಜ್ಯಗಳ ಅವಶ್ಯಕತೆಯನ್ನು ಮನಗಂಡು ದಸರಾ ಮೆರವಣಿಗೆ, ಹುಲಿ ಮತ್ತು ಕಾಡಾನೆ ಕಾರ್ಯಾಚರಣೆಗೆ ಬಳಸುವ ಆನೆಗಳನ್ನು ಹೊರತುಪಡಿಸಿ 14 ಸಾಕಾನೆಗಳನ್ನು ಮಧ್ಯಪ್ರದೇಶಕ್ಕೆ ಕಳುಹಿಸಲು ರಾಜ್ಯ ಸರಕಾರ ಒಪ್ಪಿಗೆ ಸೂಚಿಸಿದೆ. ಎರಡೂ ರಾಜ್ಯಗಳ ಹಿರಿಯ ಅಧಿಕಾರಿಗಳ ತಂಡ ಶಿಬಿರಗಳಿಗೆ ಭೇಟಿ ನೀಡಿ ಹಸ್ತಾಂತರ ಮಾಡಬೇಕಾದ ಸಾಕಾನೆಗಳನ್ನು ಪಟ್ಟಿ ಮಾಡಿ, ಆರೋಗ್ಯ ಪರಿಶೀಲನೆ ನಡೆಸಿದ ಬಳಿಕ ಸಾಗಾಟ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಒಂದು ತಿಂಗಳೊಳಗೆ ಎಲ್ಲ 14 ಆನೆಗಳು ಭೋಪಾಲ್‌ ಸೇರಲಿವೆ.

ಕೊಡಗಿನ ದುಬಾರೆ ಹಾಗೂ ಹಾರಂಗಿ ಸಾಕಾನೆ ಶಿಬಿರದಲ್ಲಿಒಟ್ಟು 32 ಆನೆಗಳಿದ್ದವು. ಇದರಲ್ಲಿಗಂಡಾನೆಗಳಾದ ಜನರಲ್‌ ತಿಮ್ಮಯ್ಯ (8), ಜನರಲ್‌ ಕಾರ್ಯಪ್ಪ (8), ವಲ್ಲಿ (40), ಲವ (21), ಮಾರುತಿ (20) ಮಧ್ಯಪ್ರದೇಶಕ್ಕೆ ಹೊರಟಿವೆ. ಈಗ ಎರಡೂ ಶಿಬಿರಗಳಲ್ಲಿ 27 ಆನೆಗಳಿವೆ.

ಬಂಡಿಪುರದ ರಾಮಾಪುರ ಆನೆ ಶಿಬಿರದಲ್ಲಿ19 ಆನೆಗಳಿದ್ದು ಇವುಗಳಲ್ಲಿಐದು ಆನೆಗಳಾದ ಗಣೇಶ (17), ಕೃಷ್ಣ (21), ಗಜ (7), ಮರ್ಸಿಯ(7- ಹೆಣ್ಣು) ಪೂಜಾ (9-ಹೆಣ್ಣು) ಸ್ಥಳಾಂತರಗೊಂಡರೆ ಶಿಬಿರದಲ್ಲಿ ಕೇವಲ 14 ಆನೆಗಳು ಉಳಿದುಕೊಳ್ಳಲಿವೆ.

ಶಿವಮೊಗ್ಗದ ಸಕ್ರೆಬೈಲಿನಲ್ಲಿ ಪ್ರಸ್ತುತ 19 ಆನೆಗಳಿದ್ದು, ಇವುಗಳಲ್ಲಿ ನಾಲ್ಕು ಆನೆಗಳಾದ ರವಿ (25), ಶಿವ (6), ಮಣಿಕಂಠ (35), ಬೆಂಗಳೂರು ಗಣೇಶ (36) ಸ್ಥಳಾಂತರಗೊಳ್ಳಲಿವೆ. ಒಟ್ಟು 14 ಆನೆಗಳಲ್ಲಿ 12 ಗಂಡು ಮತ್ತು ಎರಡು ಹೆಣ್ಣಾನೆಗಳು ಮಧ್ಯಪ್ರದೇಶಕ್ಕೆ ಪಯಣ ಬೆಳಸಲಿವೆ.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

3 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago