ಜಿಲ್ಲೆಗಳು

ರಾಜ್ಯದ 14 ಆನೆಗಳನ್ನು ಭೋಪಾಲ್‌ ಗೆ ಕಳುಹಿಸುತ್ತಿರುವುದೇಕೇ ?

ದೇಶದಲ್ಲಿಯೇ ಅತಿ ಹೆಚ್ಚು ಆನೆಗಳಿರುವ ಕರ್ನಾಟಕ ದೂರದ ಮಧ್ಯಪ್ರದೇಶಕ್ಕೆ ತನ್ನ 14 ಸಾಕಾನೆಗಳನ್ನು ಕಳುಹಿಸಿಕೊಡುತ್ತಿದೆ. 

ಕೊಡಗು : ಕೊಡಗಿನ ದುಬಾರೆ ಆನೆ ಶಿಬಿರದಿಂದ ಹೊರಟ ಐದು ಆನೆಗಳು ಈಗಾಗಲೇ ಭೋಪಾಲ್‌ ತಲುಪಿವೆ. ಆನೆಗಳ ಜತೆ ಮಾವುತರು, ಉಸ್ತುವಾರಿಗಳೂ ತೆರಳಿದ್ದು, ಅಲ್ಲಿನ ಸಿಬ್ಬಂದಿಗೆ ತರಬೇತಿ ನೀಡಿದ ಬಳಿಕ ರಾಜ್ಯಕ್ಕೆ ವಾಪಸ್ಸಾಗಲಿದ್ದಾರೆ. ಬಂಡೀಪುರದ ರಾಮಾಪುರ ಶಿಬಿರದಿಂದ ಐದು, ಶಿವಮೊಗ್ಗದಲ್ಲಿರುವ ಸಕ್ಕರೆ ಬೈಲು ಆನೆ ಶಿಬಿರದಿಂದ ನಾಲ್ಕು ಆನೆಗಳು ಸದ್ಯದಲ್ಲಿಯೇ ಮಧ್ಯಪ್ರದೇಶಕ್ಕೆ ಹೊರಡಲಿವೆ.

ಆದರೆ ತಾವು ಮಕ್ಕಳಂತೆ ಪೋಷಿಸಿ, ಬೆಳೆಸಿದ ಆನೆಗಳನ್ನು ಅನ್ಯ ರಾಜ್ಯಕ್ಕೆ ಸ್ಥಳಾಂತರಿಸುವ ಈ ಯೋಜನೆಗೆ ಮಾವುತರು, ಕಾವಾಡಿಗಳ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ರಾಜ್ಯದ ಆನೆ ಶಿಬಿರಗಳಲ್ಲಿ ಆನೆಗಳ ಅಸಹಜ ಸಾವಿನ ಬಗ್ಗೆ ತನಿಖೆ ನಡೆಸಲು ಕೋರ್ಟ್‌ ನೇಮಿಸಿದ್ದ ತಜ್ಞರ ಸಮಿತಿ ದುಬಾರೆ ಸಾಕಾನೆ ಶಿಬಿರಕ್ಕೆ ಭೇಟಿ ನೀಡಿದ್ದ ವೇಳೆ ಇಲ್ಲಿ 32 ಆನೆಗಳು ಇರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿತ್ತು. ಒಂದು ಶಿಬಿರದಲ್ಲಿ 15ಕ್ಕೂ ಹೆಚ್ಚು ಆನೆಗಳು ಇರುವಂತಿಲ್ಲ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿತ್ತು.
ಈ ಬಳಿಕ ಕುಶಾಲನಗರದ ಹಾರಂಗಿ ಜಲಾಶಯದ ಹಿನ್ನೀರು ಪ್ರದೇಶದ ಬಳಿ ಹೊಸ ಆನೆ ಶಿಬಿರ ಆರಂಭಿಸಿ ಅಲ್ಲಿಗೆ ಒಂದಷ್ಟು ಆನೆಗಳನ್ನು ಸ್ಥಳಾಂತರಿಸಲಾಗಿತ್ತು.


ರಾಜ್ಯದಲ್ಲಿ ಸದ್ಯ 10 ಆನೆ ಶಿಬಿರಗಳಿದ್ದು ಹೆಚ್ಚಿನ ಶಿಬಿರಗಳಲ್ಲಿ 15ಕ್ಕಿಂತ ಹೆಚ್ಚು ಆನೆಗಳಿವೆ. ಒಂದಷ್ಟು ಸಾಕಾನೆಗಳನ್ನು ಆನೆಗಳ ಕೊರತೆ ಇರುವ ಮಧ್ಯಪ್ರದೇಶಕ್ಕೆ ಕಳುಹಿಸಿಕೊಟ್ಟರೆ ಹೊಸದಾಗಿ ಆನೆ ಶಿಬಿರ ತೆರೆಯುವ ಅಗತ್ಯ ಇರುವುದಿಲ್ಲ ಎನ್ನುವುದು ಸರಕಾರದ ಯೋಚನೆ. ಕರ್ನಾಟಕದಂತೆ ಮಧ್ಯಪ್ರದೇಶದಲ್ಲೂ ವನ್ಯಮೃಗಗಳ ಹಾವಳಿ ವಿಪರೀತವಾಗಿದೆ. ಆನೆ, ಹುಲಿ, ಚಿರತೆ ಹಿಡಿಯುವ ಕಾರ್ಯಾಚರಣೆಗೆ ಆ ರಾಜ್ಯಕ್ಕೂ ಪಳಗಿದ ಆನೆಗಳ ಅವಶ್ಯಕತೆ ಇದೆ.

ಉಭಯ ರಾಜ್ಯಗಳ ಅವಶ್ಯಕತೆಯನ್ನು ಮನಗಂಡು ದಸರಾ ಮೆರವಣಿಗೆ, ಹುಲಿ ಮತ್ತು ಕಾಡಾನೆ ಕಾರ್ಯಾಚರಣೆಗೆ ಬಳಸುವ ಆನೆಗಳನ್ನು ಹೊರತುಪಡಿಸಿ 14 ಸಾಕಾನೆಗಳನ್ನು ಮಧ್ಯಪ್ರದೇಶಕ್ಕೆ ಕಳುಹಿಸಲು ರಾಜ್ಯ ಸರಕಾರ ಒಪ್ಪಿಗೆ ಸೂಚಿಸಿದೆ. ಎರಡೂ ರಾಜ್ಯಗಳ ಹಿರಿಯ ಅಧಿಕಾರಿಗಳ ತಂಡ ಶಿಬಿರಗಳಿಗೆ ಭೇಟಿ ನೀಡಿ ಹಸ್ತಾಂತರ ಮಾಡಬೇಕಾದ ಸಾಕಾನೆಗಳನ್ನು ಪಟ್ಟಿ ಮಾಡಿ, ಆರೋಗ್ಯ ಪರಿಶೀಲನೆ ನಡೆಸಿದ ಬಳಿಕ ಸಾಗಾಟ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಒಂದು ತಿಂಗಳೊಳಗೆ ಎಲ್ಲ 14 ಆನೆಗಳು ಭೋಪಾಲ್‌ ಸೇರಲಿವೆ.

ಕೊಡಗಿನ ದುಬಾರೆ ಹಾಗೂ ಹಾರಂಗಿ ಸಾಕಾನೆ ಶಿಬಿರದಲ್ಲಿಒಟ್ಟು 32 ಆನೆಗಳಿದ್ದವು. ಇದರಲ್ಲಿಗಂಡಾನೆಗಳಾದ ಜನರಲ್‌ ತಿಮ್ಮಯ್ಯ (8), ಜನರಲ್‌ ಕಾರ್ಯಪ್ಪ (8), ವಲ್ಲಿ (40), ಲವ (21), ಮಾರುತಿ (20) ಮಧ್ಯಪ್ರದೇಶಕ್ಕೆ ಹೊರಟಿವೆ. ಈಗ ಎರಡೂ ಶಿಬಿರಗಳಲ್ಲಿ 27 ಆನೆಗಳಿವೆ.

ಬಂಡಿಪುರದ ರಾಮಾಪುರ ಆನೆ ಶಿಬಿರದಲ್ಲಿ19 ಆನೆಗಳಿದ್ದು ಇವುಗಳಲ್ಲಿಐದು ಆನೆಗಳಾದ ಗಣೇಶ (17), ಕೃಷ್ಣ (21), ಗಜ (7), ಮರ್ಸಿಯ(7- ಹೆಣ್ಣು) ಪೂಜಾ (9-ಹೆಣ್ಣು) ಸ್ಥಳಾಂತರಗೊಂಡರೆ ಶಿಬಿರದಲ್ಲಿ ಕೇವಲ 14 ಆನೆಗಳು ಉಳಿದುಕೊಳ್ಳಲಿವೆ.

ಶಿವಮೊಗ್ಗದ ಸಕ್ರೆಬೈಲಿನಲ್ಲಿ ಪ್ರಸ್ತುತ 19 ಆನೆಗಳಿದ್ದು, ಇವುಗಳಲ್ಲಿ ನಾಲ್ಕು ಆನೆಗಳಾದ ರವಿ (25), ಶಿವ (6), ಮಣಿಕಂಠ (35), ಬೆಂಗಳೂರು ಗಣೇಶ (36) ಸ್ಥಳಾಂತರಗೊಳ್ಳಲಿವೆ. ಒಟ್ಟು 14 ಆನೆಗಳಲ್ಲಿ 12 ಗಂಡು ಮತ್ತು ಎರಡು ಹೆಣ್ಣಾನೆಗಳು ಮಧ್ಯಪ್ರದೇಶಕ್ಕೆ ಪಯಣ ಬೆಳಸಲಿವೆ.

andolanait

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

13 mins ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

18 mins ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

1 hour ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

2 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

2 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

2 hours ago