ಜಿಲ್ಲೆಗಳು

ರಾಜ್ಯದ 14 ಆನೆಗಳನ್ನು ಭೋಪಾಲ್‌ ಗೆ ಕಳುಹಿಸುತ್ತಿರುವುದೇಕೇ ?

ದೇಶದಲ್ಲಿಯೇ ಅತಿ ಹೆಚ್ಚು ಆನೆಗಳಿರುವ ಕರ್ನಾಟಕ ದೂರದ ಮಧ್ಯಪ್ರದೇಶಕ್ಕೆ ತನ್ನ 14 ಸಾಕಾನೆಗಳನ್ನು ಕಳುಹಿಸಿಕೊಡುತ್ತಿದೆ. 

ಕೊಡಗು : ಕೊಡಗಿನ ದುಬಾರೆ ಆನೆ ಶಿಬಿರದಿಂದ ಹೊರಟ ಐದು ಆನೆಗಳು ಈಗಾಗಲೇ ಭೋಪಾಲ್‌ ತಲುಪಿವೆ. ಆನೆಗಳ ಜತೆ ಮಾವುತರು, ಉಸ್ತುವಾರಿಗಳೂ ತೆರಳಿದ್ದು, ಅಲ್ಲಿನ ಸಿಬ್ಬಂದಿಗೆ ತರಬೇತಿ ನೀಡಿದ ಬಳಿಕ ರಾಜ್ಯಕ್ಕೆ ವಾಪಸ್ಸಾಗಲಿದ್ದಾರೆ. ಬಂಡೀಪುರದ ರಾಮಾಪುರ ಶಿಬಿರದಿಂದ ಐದು, ಶಿವಮೊಗ್ಗದಲ್ಲಿರುವ ಸಕ್ಕರೆ ಬೈಲು ಆನೆ ಶಿಬಿರದಿಂದ ನಾಲ್ಕು ಆನೆಗಳು ಸದ್ಯದಲ್ಲಿಯೇ ಮಧ್ಯಪ್ರದೇಶಕ್ಕೆ ಹೊರಡಲಿವೆ.

ಆದರೆ ತಾವು ಮಕ್ಕಳಂತೆ ಪೋಷಿಸಿ, ಬೆಳೆಸಿದ ಆನೆಗಳನ್ನು ಅನ್ಯ ರಾಜ್ಯಕ್ಕೆ ಸ್ಥಳಾಂತರಿಸುವ ಈ ಯೋಜನೆಗೆ ಮಾವುತರು, ಕಾವಾಡಿಗಳ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ರಾಜ್ಯದ ಆನೆ ಶಿಬಿರಗಳಲ್ಲಿ ಆನೆಗಳ ಅಸಹಜ ಸಾವಿನ ಬಗ್ಗೆ ತನಿಖೆ ನಡೆಸಲು ಕೋರ್ಟ್‌ ನೇಮಿಸಿದ್ದ ತಜ್ಞರ ಸಮಿತಿ ದುಬಾರೆ ಸಾಕಾನೆ ಶಿಬಿರಕ್ಕೆ ಭೇಟಿ ನೀಡಿದ್ದ ವೇಳೆ ಇಲ್ಲಿ 32 ಆನೆಗಳು ಇರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿತ್ತು. ಒಂದು ಶಿಬಿರದಲ್ಲಿ 15ಕ್ಕೂ ಹೆಚ್ಚು ಆನೆಗಳು ಇರುವಂತಿಲ್ಲ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿತ್ತು.
ಈ ಬಳಿಕ ಕುಶಾಲನಗರದ ಹಾರಂಗಿ ಜಲಾಶಯದ ಹಿನ್ನೀರು ಪ್ರದೇಶದ ಬಳಿ ಹೊಸ ಆನೆ ಶಿಬಿರ ಆರಂಭಿಸಿ ಅಲ್ಲಿಗೆ ಒಂದಷ್ಟು ಆನೆಗಳನ್ನು ಸ್ಥಳಾಂತರಿಸಲಾಗಿತ್ತು.


ರಾಜ್ಯದಲ್ಲಿ ಸದ್ಯ 10 ಆನೆ ಶಿಬಿರಗಳಿದ್ದು ಹೆಚ್ಚಿನ ಶಿಬಿರಗಳಲ್ಲಿ 15ಕ್ಕಿಂತ ಹೆಚ್ಚು ಆನೆಗಳಿವೆ. ಒಂದಷ್ಟು ಸಾಕಾನೆಗಳನ್ನು ಆನೆಗಳ ಕೊರತೆ ಇರುವ ಮಧ್ಯಪ್ರದೇಶಕ್ಕೆ ಕಳುಹಿಸಿಕೊಟ್ಟರೆ ಹೊಸದಾಗಿ ಆನೆ ಶಿಬಿರ ತೆರೆಯುವ ಅಗತ್ಯ ಇರುವುದಿಲ್ಲ ಎನ್ನುವುದು ಸರಕಾರದ ಯೋಚನೆ. ಕರ್ನಾಟಕದಂತೆ ಮಧ್ಯಪ್ರದೇಶದಲ್ಲೂ ವನ್ಯಮೃಗಗಳ ಹಾವಳಿ ವಿಪರೀತವಾಗಿದೆ. ಆನೆ, ಹುಲಿ, ಚಿರತೆ ಹಿಡಿಯುವ ಕಾರ್ಯಾಚರಣೆಗೆ ಆ ರಾಜ್ಯಕ್ಕೂ ಪಳಗಿದ ಆನೆಗಳ ಅವಶ್ಯಕತೆ ಇದೆ.

ಉಭಯ ರಾಜ್ಯಗಳ ಅವಶ್ಯಕತೆಯನ್ನು ಮನಗಂಡು ದಸರಾ ಮೆರವಣಿಗೆ, ಹುಲಿ ಮತ್ತು ಕಾಡಾನೆ ಕಾರ್ಯಾಚರಣೆಗೆ ಬಳಸುವ ಆನೆಗಳನ್ನು ಹೊರತುಪಡಿಸಿ 14 ಸಾಕಾನೆಗಳನ್ನು ಮಧ್ಯಪ್ರದೇಶಕ್ಕೆ ಕಳುಹಿಸಲು ರಾಜ್ಯ ಸರಕಾರ ಒಪ್ಪಿಗೆ ಸೂಚಿಸಿದೆ. ಎರಡೂ ರಾಜ್ಯಗಳ ಹಿರಿಯ ಅಧಿಕಾರಿಗಳ ತಂಡ ಶಿಬಿರಗಳಿಗೆ ಭೇಟಿ ನೀಡಿ ಹಸ್ತಾಂತರ ಮಾಡಬೇಕಾದ ಸಾಕಾನೆಗಳನ್ನು ಪಟ್ಟಿ ಮಾಡಿ, ಆರೋಗ್ಯ ಪರಿಶೀಲನೆ ನಡೆಸಿದ ಬಳಿಕ ಸಾಗಾಟ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಒಂದು ತಿಂಗಳೊಳಗೆ ಎಲ್ಲ 14 ಆನೆಗಳು ಭೋಪಾಲ್‌ ಸೇರಲಿವೆ.

ಕೊಡಗಿನ ದುಬಾರೆ ಹಾಗೂ ಹಾರಂಗಿ ಸಾಕಾನೆ ಶಿಬಿರದಲ್ಲಿಒಟ್ಟು 32 ಆನೆಗಳಿದ್ದವು. ಇದರಲ್ಲಿಗಂಡಾನೆಗಳಾದ ಜನರಲ್‌ ತಿಮ್ಮಯ್ಯ (8), ಜನರಲ್‌ ಕಾರ್ಯಪ್ಪ (8), ವಲ್ಲಿ (40), ಲವ (21), ಮಾರುತಿ (20) ಮಧ್ಯಪ್ರದೇಶಕ್ಕೆ ಹೊರಟಿವೆ. ಈಗ ಎರಡೂ ಶಿಬಿರಗಳಲ್ಲಿ 27 ಆನೆಗಳಿವೆ.

ಬಂಡಿಪುರದ ರಾಮಾಪುರ ಆನೆ ಶಿಬಿರದಲ್ಲಿ19 ಆನೆಗಳಿದ್ದು ಇವುಗಳಲ್ಲಿಐದು ಆನೆಗಳಾದ ಗಣೇಶ (17), ಕೃಷ್ಣ (21), ಗಜ (7), ಮರ್ಸಿಯ(7- ಹೆಣ್ಣು) ಪೂಜಾ (9-ಹೆಣ್ಣು) ಸ್ಥಳಾಂತರಗೊಂಡರೆ ಶಿಬಿರದಲ್ಲಿ ಕೇವಲ 14 ಆನೆಗಳು ಉಳಿದುಕೊಳ್ಳಲಿವೆ.

ಶಿವಮೊಗ್ಗದ ಸಕ್ರೆಬೈಲಿನಲ್ಲಿ ಪ್ರಸ್ತುತ 19 ಆನೆಗಳಿದ್ದು, ಇವುಗಳಲ್ಲಿ ನಾಲ್ಕು ಆನೆಗಳಾದ ರವಿ (25), ಶಿವ (6), ಮಣಿಕಂಠ (35), ಬೆಂಗಳೂರು ಗಣೇಶ (36) ಸ್ಥಳಾಂತರಗೊಳ್ಳಲಿವೆ. ಒಟ್ಟು 14 ಆನೆಗಳಲ್ಲಿ 12 ಗಂಡು ಮತ್ತು ಎರಡು ಹೆಣ್ಣಾನೆಗಳು ಮಧ್ಯಪ್ರದೇಶಕ್ಕೆ ಪಯಣ ಬೆಳಸಲಿವೆ.

andolanait

Recent Posts

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

2 hours ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

4 hours ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

7 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

7 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

7 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

10 hours ago