ಜಿಲ್ಲೆಗಳು

15 ಲಕ್ಷ ಪ್ರವಾಸಿಗರು ವಸ್ತು ಪ್ರದರ್ಶನಕ್ಕೆ ಭೇಟಿ – ಶ್ರೀವತ್ಸ

ಮೈಸೂರು :  90 ದಿನಗಳ ದಸರಾ ವಸ್ತು ಪ್ರದರ್ಶನಕ್ಕೆ ಸುಮಾರು 15 ಲಕ್ಷ ಜನ ಬೇಟಿ ನೀಡಿದ್ದು, ದಸರಾ ವಸ್ತು ಪ್ರದರ್ಶನ ಯಶಸ್ವಿಯಾಗಿದೆ ಎಂದು ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀವತ್ಸ ಅವರು ತಿಳಿಸಿದರು.

ಇಂದು ವಸ್ತು ಪ್ರದರ್ಶನ ಆವರಣದಲ್ಲಿ ಹಮ್ಮಿಕೊಂಡಿದ್ದ ವಸ್ತು ಪ್ರದರ್ಶನದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದಸರಾ ವಸ್ತು ಪ್ರದರ್ಶನ ಈ ಬಾರಿ 90 ದಿನಗಳ ಕಾಲ ಯಶಸ್ವಿಯಾಗಿ ನಡೆದಿದೆ. ದಸರಾ ವಸ್ತು ಪ್ರದರ್ಶನಕ್ಕೆ ಹೆಸರು ವಾಸಿ.

ಆವರಣದಲ್ಲಿ ವ್ಯಾಪಾರ ವಹಿವಾಟು ಉತ್ತಮವಾಗಿ ನಡೆದಿದೆ. ದೇಶದ ಮೂಲೆ ಮೂಲೆಯಿಂದ ಜನರು ವಸ್ತು ಪ್ರದರ್ಶನಕ್ಕೆ ಬೇಟಿ ನೀಡಿದ್ದಾರೆ. ಇಲ್ಲಿ 90 ದಿನಗಳಿಂದ ಮಳಿಗೆ ತೆರೆದಿರುವ ಮಳಿಗೆದಾರರು ಆದಾಯವನ್ನು ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.

2023 ರ ದಸರಾ ವಸ್ತು ಪ್ರದರ್ಶನದಲ್ಲಿ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ, ನಿಗಮ ಮಂಡಳಿಗಳು ಹಾಗೂ ಜಿಲ್ಲಾ ಪಂಚಾಯತ್ ಗಳಿಂದ ತೆರೆದ ಮಳಿಗೆಗಳಲ್ಲಿ ಬಹುಮಾನಕ್ಕೆ ಆಯ್ಕೆಯಾದ ಮಳಿಗೆಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಉತ್ತಮವಾಗಿ ಚಿತ್ರ ಬಿಡಿಸಿದ ಮಕ್ಕಳಿಗೆ, ವಿಶೇಷ ವಿಭಾಗದಲ್ಲಿ ಕಲಾಕೃತಿ ನಿರ್ಮಾಣ, ಪೆನ್ಸಿಲ್ ಶೇಡಿಂಗ್ ವಿಭಾಗದಲ್ಲಿ ಬಹುಮಾನ ವಿತರಣೆ,ಮಹಿಳಾ ವಿಭಾಗದ ಸಾಂಪ್ರದಾಯಿಕ ಕಲೆ, ಪ್ರಕೃತಿ ಚಿತ್ರಣ ವಿಭಾಗದಲ್ಲಿ ಉತ್ತಮ ಕಲೆ ಪ್ರದರ್ಶಿಸಿದವರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಾಜೇಶ್ ಗೌಡ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಲವಂತ ರಾವ್ ಪಾಟೀಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

andolanait

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

2 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

2 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

3 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

3 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

3 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago