ಜಿಲ್ಲೆಗಳು

15 ಲಕ್ಷ ಪ್ರವಾಸಿಗರು ವಸ್ತು ಪ್ರದರ್ಶನಕ್ಕೆ ಭೇಟಿ – ಶ್ರೀವತ್ಸ

ಮೈಸೂರು :  90 ದಿನಗಳ ದಸರಾ ವಸ್ತು ಪ್ರದರ್ಶನಕ್ಕೆ ಸುಮಾರು 15 ಲಕ್ಷ ಜನ ಬೇಟಿ ನೀಡಿದ್ದು, ದಸರಾ ವಸ್ತು ಪ್ರದರ್ಶನ ಯಶಸ್ವಿಯಾಗಿದೆ ಎಂದು ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀವತ್ಸ ಅವರು ತಿಳಿಸಿದರು.

ಇಂದು ವಸ್ತು ಪ್ರದರ್ಶನ ಆವರಣದಲ್ಲಿ ಹಮ್ಮಿಕೊಂಡಿದ್ದ ವಸ್ತು ಪ್ರದರ್ಶನದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದಸರಾ ವಸ್ತು ಪ್ರದರ್ಶನ ಈ ಬಾರಿ 90 ದಿನಗಳ ಕಾಲ ಯಶಸ್ವಿಯಾಗಿ ನಡೆದಿದೆ. ದಸರಾ ವಸ್ತು ಪ್ರದರ್ಶನಕ್ಕೆ ಹೆಸರು ವಾಸಿ.

ಆವರಣದಲ್ಲಿ ವ್ಯಾಪಾರ ವಹಿವಾಟು ಉತ್ತಮವಾಗಿ ನಡೆದಿದೆ. ದೇಶದ ಮೂಲೆ ಮೂಲೆಯಿಂದ ಜನರು ವಸ್ತು ಪ್ರದರ್ಶನಕ್ಕೆ ಬೇಟಿ ನೀಡಿದ್ದಾರೆ. ಇಲ್ಲಿ 90 ದಿನಗಳಿಂದ ಮಳಿಗೆ ತೆರೆದಿರುವ ಮಳಿಗೆದಾರರು ಆದಾಯವನ್ನು ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.

2023 ರ ದಸರಾ ವಸ್ತು ಪ್ರದರ್ಶನದಲ್ಲಿ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ, ನಿಗಮ ಮಂಡಳಿಗಳು ಹಾಗೂ ಜಿಲ್ಲಾ ಪಂಚಾಯತ್ ಗಳಿಂದ ತೆರೆದ ಮಳಿಗೆಗಳಲ್ಲಿ ಬಹುಮಾನಕ್ಕೆ ಆಯ್ಕೆಯಾದ ಮಳಿಗೆಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಉತ್ತಮವಾಗಿ ಚಿತ್ರ ಬಿಡಿಸಿದ ಮಕ್ಕಳಿಗೆ, ವಿಶೇಷ ವಿಭಾಗದಲ್ಲಿ ಕಲಾಕೃತಿ ನಿರ್ಮಾಣ, ಪೆನ್ಸಿಲ್ ಶೇಡಿಂಗ್ ವಿಭಾಗದಲ್ಲಿ ಬಹುಮಾನ ವಿತರಣೆ,ಮಹಿಳಾ ವಿಭಾಗದ ಸಾಂಪ್ರದಾಯಿಕ ಕಲೆ, ಪ್ರಕೃತಿ ಚಿತ್ರಣ ವಿಭಾಗದಲ್ಲಿ ಉತ್ತಮ ಕಲೆ ಪ್ರದರ್ಶಿಸಿದವರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಾಜೇಶ್ ಗೌಡ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಲವಂತ ರಾವ್ ಪಾಟೀಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

andolanait

Recent Posts

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

2 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

4 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

4 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

5 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

9 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

9 hours ago