ಜಿಲ್ಲೆಗಳು

15,16ರಂದು ನಗರದ ಕೆಲ ಭಾಗಗಳಿಗೆ ನೀರು ಸರಬರಾಜು ವ್ಯತ್ಯಯ

ಮೈಸೂರು: ನಗರಕ್ಕೆ ಕಾವೇರಿ ನೀರು ಸರಬರಾಜು ಮಾಡುವ ಹೊಂಗಳ್ಳಿ ೨ ಹಾಗೂ ೩ನೇ ಹಂತದ ಯಂತ್ರಾಗಾರಕ್ಕೆ ವಿದ್ಯುತ್ ಸರಬರಾಜು ಮಾಡುವ ಬೆಳಗೊಳ ೬೬/೧೧ ಕೆ.ವಿ. ಸಬ್‌ಸ್ಟೇಷನ್‌ನಲ್ಲಿ ಕೆಪಿಟಿಸಿಎಲ್ ಇಲಾಖೆಯ ತ್ರೈಮಾಸಿಕ ಕಾರ್ಯನಿರ್ವಹಣೆ ನಿಮಿತ್ತ ವಿದ್ಯುತ್ ಸರಬರಾಜಿನಲ್ಲಿ ನಿಲುಗಡೆಯಾಗುವ ಹಿನ್ನೆಲೆಯಲ್ಲಿ ನ.೧೫ ಮತ್ತು ೧೬ರಂದು ನಗರದ ಕೆಲ ಭಾಗಗಳಿಗೆ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಾರ್ಡ್ ನಂ.೧ ರಿಂದ ೭, ವಾರ್ಡ್ ನಂ.೨೦, ೨೩, ೩೮ ವಾರ್ಡ್ ನಂ. ೪೨ ರಿಂದ ೪೫, ವಾರ್ಡ್ ನಂ.೪೭ ಇದಕ್ಕೆ ಸಂಬಂಧಪಟ್ಟ ಡಿಎಂಎ ಪ್ರದೇಶಗಳಾದ ಹೆಬ್ಬಾಳ, ಕುಂಬಾರಕೊಪ್ಪಲು, ಮಂಚೇಗೌಡನ ಕೊಪ್ಪಲು, ಕೆ.ಜಿ.ಕೊಪ್ಪಲು, ಮೇಟಗಳ್ಳಿ, ಲೋಕನಾಯಕನಗರ, ಬೃಂದಾವನ ಬಡಾವಣೆ, ಒಂಟಿ ಕೊಪ್ಪಲು, ಪಡುವಾರಹಳ್ಳಿ, ವಿನಾಯಕನಗರ, ಮಂಡಿ ಮೊಹಲ್ಲಾ, ಲಷ್ಕರ್ ಮೊಹಲ್ಲಾ, ಶಾರದಾದೇವಿ ನಗರ, ಸರಸ್ವತಿಪುರಂ, ಬೋಗಾದಿ, ವಿಜಯನಗರ ೧,೩ನೇ ಹಂತ, ಗೋಕುಲಂ ೧,೨, ೩ನೇ ಹಂತ ಹಾಗೂ ಹೊರ ವಲಯಗಳಾದ ಆರ್‌ಎಂಪಿ, ಬಿಇಎಂಎಲ್, ಯಾದವಗಿರಿ, ಬನ್ನಿಮಂಟಪ, ಎಬಿಸಿ ಬಡಾವಣೆ, ಈರನಗೆರೆ, ಸಿದ್ದಿಖಿನಗರ, ಶಿವರಾತ್ರೀಶ್ವರ ನಗರ, ತಿಲಕ್ ನಗರ, ಬಡೇಮಕಾನ್, ಹಲೀಂನಗರ.

ದೇವರಾಜ ಮೊಹಲ್ಲಾ ಭಾಗಶಃ, ಎನ್.ಆರ್.ಮೊಹಲ್ಲಾ ಭಾಗಶಃ ಪ್ರದೇಶಗಳು, ನಜರ್‌ಬಾದ್ ಮೊಹಲ್ಲಾ, ವಿದ್ಯಾರಣ್ಯಪುರಂ, ಕೃಷ್ಣಮೂರ್ತಿಪುರಂ, ಜನತಾ ನಗರ, ಕೆಎಚ್‌ಬಿ ಕಾಲೋನಿ, ಹೂಟಗಳ್ಳಿ, ವಿಜಯನಗರ ೩ನೇ ಹಂತ ಇತ್ಯಾದಿ ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಹೀಗಾಗಿ ಸಾರ್ವಜನಿಕರು ನೀರು ಬಂದ ವೇಳೆಯಲ್ಲಿ ನೀರನ್ನು ಶೇಖರಿಸಿಕೊಂಡು ನಗರಪಾಲಿಕೆಯೊಂದಿಗೆ ಸಹಕರಿಸಬೇಕು ಎಂದು ನೀರು ಸರಬರಾಜು ಮತ್ತು ಒಳಚರಂಡಿ ಪಶ್ಚಿಮ ವಿಭಾಗದ ಕಾರ್ಯಪಾಲಕ ಇಂಜಿನಿಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

andolanait

Recent Posts

ನೀರಿಗಿಳಿಯುವ ಮುನ್ನ ಇರಲಿ ಎಚ್ಚರ !

ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…

2 hours ago

ಸರಳ, ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ

ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು  ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…

2 hours ago

ಬಿಸಿಲಿಗೆ ಪರ್ಯಾಯ ಈಜುಕೊಳಗಳು

ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್‌ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…

2 hours ago

ಗ್ರಾಪಂ ಅಧಿಕಾರಿಗಳ ನಿಗಾಕ್ಕೆ ಜಿಪಿಎಸ್ ಸಿಸ್ಟಂ

ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…

2 hours ago

ಕೈ ಸುಡುತ್ತಿದೆ ಎಳನೀರು ಬೆಲೆ

ಪ್ರಶಾಂತ್ ಎಸ್. ಮೈಸೂರು: ಎಲ್ಲೆಡೆ ಬಿರು ಬಿಸಿಲು ಜನರನ್ನು ಹೈರಾಣಾಗಿಸುತ್ತಿದೆ. ಬಿಸಿಲ ಬೇಗೆಯಿಂದ ದಾಹ ನೀಗಿಸಿಕೊಳ್ಳಲು ಜನರು ಎಳನೀರು ಮೊರೆ…

2 hours ago

ಸಿದ್ದರಾಮಯ್ಯ ನಾಯಕತ್ವಕ್ಕೆ ಬಲ

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಸಮರದಲ್ಲಿ ಕೈ ಜಯಭೇರಿ ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ…

3 hours ago