ಕಳೆದ ಕೆಲ ದಿನಗಳ ಹಿಂದೆ ಮಂಡ್ಯದಲ್ಲಿ ಭ್ರೂಣಹತ್ಯೆಯ ದೊಡ್ಡ ಜಾಲ ಪತ್ತೆಯಾದ ಬೆನ್ನಲ್ಲೇ ಇದೀಗ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಸಮೀಪದ ದಳವಾಯಿ ಕೆರೆಯಲ್ಲಿ ನವಜಾತ ಹೆಣ್ಣು ಶಿಶುವೊಂದರ ಶವ ಪತ್ತೆಯಾಗಿದೆ. ಕರುಳಬಳ್ಳಿಯ ಸಮೇತ ಶವ ದೊರಕಿದೆ.
ಕಳೆದ ಎರಡು ದಿನಗಳ ಹಿಂದೆ ಜನಿಸಿರುವ ಮಗು ಇದಾಗಿದ್ದು, ಹೆಣ್ಣು ಎಂಬ ಕಾರಣಕ್ಕೆ ಕೊಂದು ಬಿಸಾಡಿದ್ದಾರಾ ಎಂಬ ಸಂಶಯ ಶುರುವಾಗಿದೆ. ಶಿಶುವಿನ ಮೃತದೇಹವನ್ನು ಪೇಪರ್ನಿಂದ ಸುತ್ತಿರುವ ಕಿಡಿಗೇಡಿಗಳು ಕೆರೆ ಸಮೀಪ ಎಸೆದು ಹೋಗಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪಾಂಡವಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೃತ್ಯ ಎಸಗಿದವರ ಬಂಧನಕ್ಕೆ ಮುಂದಾಗಿದ್ದಾರೆ. ಸದ್ಯ ಮಗುವಿನ ಶವವನ್ನು ತಾಲೂಕು ಆಸ್ಪತ್ರೆ ಶವಾಗಾರಕ್ಕೆ ಕಳುಹಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಯಿಂದ ಸಾವಿನ ಹಿಂದಿನ ಕಾರಣ ತಿಳಿದುಬರಬೇಕಿದೆ.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…