ಕಳೆದ ಕೆಲ ದಿನಗಳ ಹಿಂದೆ ಮಂಡ್ಯದಲ್ಲಿ ಭ್ರೂಣಹತ್ಯೆಯ ದೊಡ್ಡ ಜಾಲ ಪತ್ತೆಯಾದ ಬೆನ್ನಲ್ಲೇ ಇದೀಗ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಸಮೀಪದ ದಳವಾಯಿ ಕೆರೆಯಲ್ಲಿ ನವಜಾತ ಹೆಣ್ಣು ಶಿಶುವೊಂದರ ಶವ ಪತ್ತೆಯಾಗಿದೆ. ಕರುಳಬಳ್ಳಿಯ ಸಮೇತ ಶವ ದೊರಕಿದೆ.
ಕಳೆದ ಎರಡು ದಿನಗಳ ಹಿಂದೆ ಜನಿಸಿರುವ ಮಗು ಇದಾಗಿದ್ದು, ಹೆಣ್ಣು ಎಂಬ ಕಾರಣಕ್ಕೆ ಕೊಂದು ಬಿಸಾಡಿದ್ದಾರಾ ಎಂಬ ಸಂಶಯ ಶುರುವಾಗಿದೆ. ಶಿಶುವಿನ ಮೃತದೇಹವನ್ನು ಪೇಪರ್ನಿಂದ ಸುತ್ತಿರುವ ಕಿಡಿಗೇಡಿಗಳು ಕೆರೆ ಸಮೀಪ ಎಸೆದು ಹೋಗಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪಾಂಡವಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೃತ್ಯ ಎಸಗಿದವರ ಬಂಧನಕ್ಕೆ ಮುಂದಾಗಿದ್ದಾರೆ. ಸದ್ಯ ಮಗುವಿನ ಶವವನ್ನು ತಾಲೂಕು ಆಸ್ಪತ್ರೆ ಶವಾಗಾರಕ್ಕೆ ಕಳುಹಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಯಿಂದ ಸಾವಿನ ಹಿಂದಿನ ಕಾರಣ ತಿಳಿದುಬರಬೇಕಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…