ಕಳೆದ ಕೆಲ ದಿನಗಳ ಹಿಂದೆ ಮಂಡ್ಯದಲ್ಲಿ ಭ್ರೂಣಹತ್ಯೆಯ ದೊಡ್ಡ ಜಾಲ ಪತ್ತೆಯಾದ ಬೆನ್ನಲ್ಲೇ ಇದೀಗ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಸಮೀಪದ ದಳವಾಯಿ ಕೆರೆಯಲ್ಲಿ ನವಜಾತ ಹೆಣ್ಣು ಶಿಶುವೊಂದರ ಶವ ಪತ್ತೆಯಾಗಿದೆ. ಕರುಳಬಳ್ಳಿಯ ಸಮೇತ ಶವ ದೊರಕಿದೆ.
ಕಳೆದ ಎರಡು ದಿನಗಳ ಹಿಂದೆ ಜನಿಸಿರುವ ಮಗು ಇದಾಗಿದ್ದು, ಹೆಣ್ಣು ಎಂಬ ಕಾರಣಕ್ಕೆ ಕೊಂದು ಬಿಸಾಡಿದ್ದಾರಾ ಎಂಬ ಸಂಶಯ ಶುರುವಾಗಿದೆ. ಶಿಶುವಿನ ಮೃತದೇಹವನ್ನು ಪೇಪರ್ನಿಂದ ಸುತ್ತಿರುವ ಕಿಡಿಗೇಡಿಗಳು ಕೆರೆ ಸಮೀಪ ಎಸೆದು ಹೋಗಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪಾಂಡವಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೃತ್ಯ ಎಸಗಿದವರ ಬಂಧನಕ್ಕೆ ಮುಂದಾಗಿದ್ದಾರೆ. ಸದ್ಯ ಮಗುವಿನ ಶವವನ್ನು ತಾಲೂಕು ಆಸ್ಪತ್ರೆ ಶವಾಗಾರಕ್ಕೆ ಕಳುಹಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಯಿಂದ ಸಾವಿನ ಹಿಂದಿನ ಕಾರಣ ತಿಳಿದುಬರಬೇಕಿದೆ.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…