ಜಿಲ್ಲೆಗಳು

ಅಕ್ರಮವಾಗಿ ಮೀನು‌ ಹಿಡಿದು ಸಾಗಿಸುತ್ತಿದ್ದ ಇಬ್ಬರ ಬಂಧನ

ಹನೂರು: ಕಾವೇರಿ ನದಿಯಲ್ಲಿ ಅಕ್ರಮವಾಗಿ ಮೀನು ಹಿಡಿದು ಮಾರಾಟ ಮಾಡಲು ಸಾಗಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಇಬ್ಬರನ್ನು ಬಂಧಿಸಿರುವ ಘಟನೆ ಶನಿವಾರ ( ಫೆಬ್ರವರಿ 3 ) ಜರುಗಿದೆ.

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜಾಗೇರಿ ಸಮೀಪದ ಅಂತೋಣಿ, ಟಿ ಜಿ ದೊಡ್ಡಿ ಗ್ರಾಮದ ರಾಜ ಬಂಧಿತ ಆರೋಪಿಗಳಾಗಿದ್ದಾರೆ.

ಘಟನೆ ವಿವರ: ಕೊಳ್ಳೇಗಾಲ ಬಫರ್ ವಲಯದ ಸತ್ತೇಗಾಲ ಜಾಗೇರಿ ಶಾಖೆಯ ಶಿಲುಬೆಪುರ ಗಸ್ತಿನ ಕಣಿವೆ ಹಳ್ಳ ಅರಣ್ಯ ಪ್ರದೇಶದಲ್ಲಿ ವಲಯ ಅರಣ್ಯಾಧಿಕಾರಿ ಭರತ್ ಹಾಗೂ ಉಪ ವಲಯ ಅರಣ್ಯಾಧಿಕಾರಿ ನಂದೀಶ್ ಗಸ್ತಿನಲ್ಲಿದ್ದಾಗ ಇಬ್ಬರು ವ್ಯಕ್ತಿಗಳು ಮೀನುಗಳನ್ನು ಹಿಡಿದು ಮಾರಾಟ ಮಾಡಲು ತೆರಳುತ್ತಿರುವುದು ಕಂಡು ಬಂದಿದೆ. ತಕ್ಷಣ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ಸಾಗಾಟ ಮಾಡುತ್ತಿದ್ದ 40 ಕೆಜಿ ಮೀನುಗಳನ್ನು ವಶಕ್ಕೆ ಪಡೆದು ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಡಾ ಸಂತೋಷ್ ಕುಮಾರ್ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಶಶಿಧರ್ ಬಿಎಸ್ ರವರ ಮಾರ್ಗದರ್ಶನದಲ್ಲಿ ಇಬ್ಬರು ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

11 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

15 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

15 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

15 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

16 hours ago