ಹನೂರು: ಕಾವೇರಿ ನದಿಯಲ್ಲಿ ಅಕ್ರಮವಾಗಿ ಮೀನು ಹಿಡಿದು ಮಾರಾಟ ಮಾಡಲು ಸಾಗಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಇಬ್ಬರನ್ನು ಬಂಧಿಸಿರುವ ಘಟನೆ ಶನಿವಾರ ( ಫೆಬ್ರವರಿ 3 ) ಜರುಗಿದೆ.
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜಾಗೇರಿ ಸಮೀಪದ ಅಂತೋಣಿ, ಟಿ ಜಿ ದೊಡ್ಡಿ ಗ್ರಾಮದ ರಾಜ ಬಂಧಿತ ಆರೋಪಿಗಳಾಗಿದ್ದಾರೆ.
ಘಟನೆ ವಿವರ: ಕೊಳ್ಳೇಗಾಲ ಬಫರ್ ವಲಯದ ಸತ್ತೇಗಾಲ ಜಾಗೇರಿ ಶಾಖೆಯ ಶಿಲುಬೆಪುರ ಗಸ್ತಿನ ಕಣಿವೆ ಹಳ್ಳ ಅರಣ್ಯ ಪ್ರದೇಶದಲ್ಲಿ ವಲಯ ಅರಣ್ಯಾಧಿಕಾರಿ ಭರತ್ ಹಾಗೂ ಉಪ ವಲಯ ಅರಣ್ಯಾಧಿಕಾರಿ ನಂದೀಶ್ ಗಸ್ತಿನಲ್ಲಿದ್ದಾಗ ಇಬ್ಬರು ವ್ಯಕ್ತಿಗಳು ಮೀನುಗಳನ್ನು ಹಿಡಿದು ಮಾರಾಟ ಮಾಡಲು ತೆರಳುತ್ತಿರುವುದು ಕಂಡು ಬಂದಿದೆ. ತಕ್ಷಣ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ಸಾಗಾಟ ಮಾಡುತ್ತಿದ್ದ 40 ಕೆಜಿ ಮೀನುಗಳನ್ನು ವಶಕ್ಕೆ ಪಡೆದು ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಡಾ ಸಂತೋಷ್ ಕುಮಾರ್ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಶಶಿಧರ್ ಬಿಎಸ್ ರವರ ಮಾರ್ಗದರ್ಶನದಲ್ಲಿ ಇಬ್ಬರು ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…
ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…