ಹನೂರು: ಕಾವೇರಿ ನದಿಯಲ್ಲಿ ಅಕ್ರಮವಾಗಿ ಮೀನು ಹಿಡಿದು ಮಾರಾಟ ಮಾಡಲು ಸಾಗಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಇಬ್ಬರನ್ನು ಬಂಧಿಸಿರುವ ಘಟನೆ ಶನಿವಾರ ( ಫೆಬ್ರವರಿ 3 ) ಜರುಗಿದೆ.
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜಾಗೇರಿ ಸಮೀಪದ ಅಂತೋಣಿ, ಟಿ ಜಿ ದೊಡ್ಡಿ ಗ್ರಾಮದ ರಾಜ ಬಂಧಿತ ಆರೋಪಿಗಳಾಗಿದ್ದಾರೆ.
ಘಟನೆ ವಿವರ: ಕೊಳ್ಳೇಗಾಲ ಬಫರ್ ವಲಯದ ಸತ್ತೇಗಾಲ ಜಾಗೇರಿ ಶಾಖೆಯ ಶಿಲುಬೆಪುರ ಗಸ್ತಿನ ಕಣಿವೆ ಹಳ್ಳ ಅರಣ್ಯ ಪ್ರದೇಶದಲ್ಲಿ ವಲಯ ಅರಣ್ಯಾಧಿಕಾರಿ ಭರತ್ ಹಾಗೂ ಉಪ ವಲಯ ಅರಣ್ಯಾಧಿಕಾರಿ ನಂದೀಶ್ ಗಸ್ತಿನಲ್ಲಿದ್ದಾಗ ಇಬ್ಬರು ವ್ಯಕ್ತಿಗಳು ಮೀನುಗಳನ್ನು ಹಿಡಿದು ಮಾರಾಟ ಮಾಡಲು ತೆರಳುತ್ತಿರುವುದು ಕಂಡು ಬಂದಿದೆ. ತಕ್ಷಣ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ಸಾಗಾಟ ಮಾಡುತ್ತಿದ್ದ 40 ಕೆಜಿ ಮೀನುಗಳನ್ನು ವಶಕ್ಕೆ ಪಡೆದು ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಡಾ ಸಂತೋಷ್ ಕುಮಾರ್ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಶಶಿಧರ್ ಬಿಎಸ್ ರವರ ಮಾರ್ಗದರ್ಶನದಲ್ಲಿ ಇಬ್ಬರು ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…