ಜಿಲ್ಲೆಗಳು

2023ರ ಕೇಂದ್ರ ಬಜೆಟ್‌ ಎಲ್ಲಾ ವರ್ಗದ ನಿರೀಕ್ಷೆಯನ್ನು ಪೂರೈಸಲಿದೆ : ಸಚಿವ ಎಸ್‌ ಟಿ ಸೋಮಶೇಖರ್‌

ಮೈಸೂರು : ಇಂದು ಮಂಡನೆಯಾದ 2023ರ ಕೇಂದ್ರ ಬಜೆಟ್‌ ಕುರಿತು ಜಿಲ್ಲೆಯ ಉಸ್ತುವಾರಿ ಸಚಿವರಾದ ಎಸ್‌ ಟಿ ಸೋಮಶೇಖರ್‌ ರವರು ಕೇಂದ್ರ ಸರ್ಕಾರದ ಈ ಸಾಲಿನ ಬಜೆಟ್‌, ಜನಪರ ಬಜೆಟ್. ಸಮಾಜದ ಎಲ್ಲ ವರ್ಗಗಳ ನಿರೀಕ್ಷೆಯನ್ನು ಪೂರೈಸಲಿದೆ. ಎಲ್ಲರನ್ನೂ ಗಮನದಲ್ಲಿಟ್ಟುಕೊಂಡು ರೂಪಿಸಿದ ಬಜೆಟ್ ಇದಾಗಿದೆ ಎಂದರು. ಮುಂದುವರಿದು ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಅನುದಾನ ಘೋಷಣೆ ಮಾಡಲಾಗಿದೆ. ಇದರಿಂದ ಮಧ್ಯ ಕರ್ನಾಟಕದ ಭಾಗದ ಜಿಲ್ಲೆಗಳಿಗೆ ವರದಾನವಾಗಲಿದೆ. ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ, ವಿತ್ತ ಸಚಿವರಾದ ನಿರ್ಮಲಾ ರವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. 7 ಲಕ್ಷದವರೆಗೆ ವೈಯಕ್ತಿಕ ತೆರಿಗೆ ವಿನಾಯ್ತಿ, ಕೃಷಿ ಸಾಲಕ್ಕೆ 20 ಲಕ್ಷ ಕೋಟಿ ರೂ. ಮಿಸಲು, 50 ಹೊಸ ಏರ್ ಪೋರ್ಟ್ ಗಳ ಸ್ಥಾಪನೆ, ರಾಷ್ಟ್ರೀಯ ಡಿಜಿಟಲ್ ಗ್ರಂಥಾಲಯಗಳ ಸ್ಥಾಪನೆ ಸೇರಿದಂತೆ ಹತ್ತು ಹಲವು ಯೋಜನೆಗಳ ಘೋಷಣೆ ಮಾಡಲಾಗಿದೆ. ಒಟ್ಟಾರೆ ಈ ಬಜೆಟ್ ಎಲ್ಲಾ ವರ್ಗದ ಜನತೆಯನ್ನು ಒಳಗೊಂಡ ಜನಪರ ಬಜೆಟ್ ಎಂದರು.

andolanait

Recent Posts

ಮಂಡ್ಯ | 60 ಲಕ್ಷ ಲಂಚಕ್ಕೆ ಬೇಡಿಕೆ ; ಅಬಕಾರಿ ಉಪ ಆಯುಕ್ತ ಅಮಾನತು

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…

1 hour ago

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

1 hour ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

2 hours ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

3 hours ago

ಮಾ.18ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ : ಮೇ 8ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.…

3 hours ago

ಮೈಸೂರಿನ ಹೊರವಲಯದಲ್ಲಿ ಹುಲಿ ಸಂಚಾರ : ಮುಂದುವರೆದ ಕಾರ್ಯಾಚರಣೆ

ಮೈಸೂರು : ಬೋಗಾದಿಯ ಗದ್ದಿಗೆ ರಸ್ತೆಯಲ್ಲಿರುವ ಜೆಟ್ಟಿಹುಂಡಿ ಗ್ರಾಮದ ತೋಟವೊಂದರಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಮಂಗಳವಾರ ರೈತರೊಬ್ಬರು ನೀಡಿದ ಮಾಹಿತಿ…

3 hours ago