ಮೈಸೂರು: ‘ಅರಿವು ರಂಗ’ ವತಿಯಿಂದ ‘ಸಲೀಂ ಅಲಿ – ಪಕ್ಷಿಲೋಕದ ಬೆರಗು’ ನಾಟಕ ಪ್ರದರ್ಶನವನ್ನು ಡಿ. 24ರಂದು ಸಂಜೆ ೬6.30ಕ್ಕೆ ನಗರದ ಕಲಾಮಂದಿರ ಆವರಣದಲ್ಲಿರುವ ಕಿರು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.
ಭಾರತದ ಹೆಸರಾಂತ ಪಕ್ಷಿತಜ್ಞ, ಪದ್ಮಭೂಷಣ ಡಾ. ಸಲೀಂ ಅಲಿ ಅವರ ಜೀವನಾಧಾರಿತ ನಾಟಕ ಇದಾಗಿದ್ದು, ಡಾ. ಎಂ.ಸಿ.ಮನೋಹರ ರಚಿಸಿದ್ದಾರೆ. ಬರ್ಟಿ ಒಲಿವೇರಾ ನಿರ್ದೇಶನದ ಈ ನಾಟಕಕ್ಕೆ ಸಾಯಿಶಿವ್ ಸಂಗೀತ, ಯತೀಶ್ ಎನ್. ಕೊಳ್ಳೇಗಾಲ ರಂಗವಿನ್ಯಾಸ-ಬೆಳಕು, ಕಾಜು ರಂಗ ಪರಿಕರ, ರಜನಿ ವಸ್ತ್ರವಿನ್ಯಾಸ, ಎಂ.ಸಿ.ಗಿರಿಧರ ಸಂಗೀತ ನಿರ್ವಹಣೆ, ರಂಗನಾಥ್ ಪ್ರಸಾಧನ ಮಾಡಿದ್ದಾರೆ. ಎಚ್.ತೇಜಸ್, ಡಾ.ಎಂ.ಸಿ.ಮನೋಹರ, ಡಾ.ಆರ್.ಚಲಪತಿ, ಬರ್ಟಿ ಒಲಿವೆರಾ, ಸರಳಾ ನಟರಾಜ್, ಬಿ.ಸೀಮಂತಿನಿ, ನಾಗರಾಜ್ ಮೈಸೂರು, ಪ್ರಸಾದ್ ಬಾಬು ನಟಿಸಿದ್ದಾರೆ.
ಸಲೀಂ ಅಲಿ ಅವರ ಕುರಿತು ಭಾರತದಲ್ಲಿ ಇದೇ ಮೊದಲ ಬಾರಿಗೆ, ಅದರಲ್ಲೂ ಕನ್ನಡದಲ್ಲಿ ಪೂರ್ಣ ಪ್ರಮಾಣದ ನಾಟಕ ಪ್ರದರ್ಶಿತವಾಗುತ್ತಿರುವುದು ವಿಶೇಷ. ಈ ನಾಟಕದಲ್ಲಿ ಬಾಲ್ಯ, ಯೌವ್ವನ, ಅಂತಿಮ ದಿನಗಳು ಸೇರಿದಂತೆ ಸಲೀಂ ಅಲಿ ಅವರ ಜೀವನ ಮತ್ತು ಸಾಧನೆಗಳ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ಮಾಡಲಾಗಿದೆ.
ಟಿ.ನರಸೀಪುರ: ಹೊಸ ವರ್ಷದ ಸಂಭ್ರಮಾಚರಣೆ ಆಚರಿಸಲು ಐತಿಹಾಸಿಕ ಪಂಚಲಿಂಗಗಳ ಪುಣ್ಯಕ್ಷೇತ್ರ ತಲಕಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕಳೆದ ಮೂರು…
ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್ಗಳ ತೆರವು ಪ್ರಕರಣವನ್ನು ಖಂಡಿಸಿ ಟ್ವೀಟ್ ಮಾಡಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್ ವಿರುದ್ಧ…
ಚಾಮರಾಜನಗರ: ಕರ್ತವ್ಯ ಮುಗಿಸಿ ಮನೆಗೆ ಬದ ತಕ್ಷಣ ಹೃದಯಾಘಾತ ಸಂಭವಿಸಿ ಎಎಸ್ಐ ಮೃತಪಟ್ಟಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ.…
ಹುಣಸೂರು: ಇಲ್ಲಿನ ಜ್ಯುವೆಲ್ಲರಿ ಶಾಪ್ನಲ್ಲಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಯೊಂದು ಲಭ್ಯವಾಗಿದ್ದು, ದರೋಡೆಕೋರರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.…
ಬೀದರ್: 99 ಲಕ್ಷ ಸಾಲ ಹಿಂತಿರುಗಿಸದ ಆರೋಪದ ಮೇರೆಗೆ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ಎಫ್ಐಆರ್…
ಮೈಸೂರು: ಯುವತಿಯ ಪ್ರೀತಿ ವಿಚಾರವಾಗಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದ್ದು, ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೈಸೂರು ಜಿಲ್ಲೆ ಟಿ.ನರಸೀಪುರ…