ಮೈಸೂರು: ‘ಅರಿವು ರಂಗ’ ವತಿಯಿಂದ ‘ಸಲೀಂ ಅಲಿ – ಪಕ್ಷಿಲೋಕದ ಬೆರಗು’ ನಾಟಕ ಪ್ರದರ್ಶನವನ್ನು ಡಿ. 24ರಂದು ಸಂಜೆ ೬6.30ಕ್ಕೆ ನಗರದ ಕಲಾಮಂದಿರ ಆವರಣದಲ್ಲಿರುವ ಕಿರು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.
ಭಾರತದ ಹೆಸರಾಂತ ಪಕ್ಷಿತಜ್ಞ, ಪದ್ಮಭೂಷಣ ಡಾ. ಸಲೀಂ ಅಲಿ ಅವರ ಜೀವನಾಧಾರಿತ ನಾಟಕ ಇದಾಗಿದ್ದು, ಡಾ. ಎಂ.ಸಿ.ಮನೋಹರ ರಚಿಸಿದ್ದಾರೆ. ಬರ್ಟಿ ಒಲಿವೇರಾ ನಿರ್ದೇಶನದ ಈ ನಾಟಕಕ್ಕೆ ಸಾಯಿಶಿವ್ ಸಂಗೀತ, ಯತೀಶ್ ಎನ್. ಕೊಳ್ಳೇಗಾಲ ರಂಗವಿನ್ಯಾಸ-ಬೆಳಕು, ಕಾಜು ರಂಗ ಪರಿಕರ, ರಜನಿ ವಸ್ತ್ರವಿನ್ಯಾಸ, ಎಂ.ಸಿ.ಗಿರಿಧರ ಸಂಗೀತ ನಿರ್ವಹಣೆ, ರಂಗನಾಥ್ ಪ್ರಸಾಧನ ಮಾಡಿದ್ದಾರೆ. ಎಚ್.ತೇಜಸ್, ಡಾ.ಎಂ.ಸಿ.ಮನೋಹರ, ಡಾ.ಆರ್.ಚಲಪತಿ, ಬರ್ಟಿ ಒಲಿವೆರಾ, ಸರಳಾ ನಟರಾಜ್, ಬಿ.ಸೀಮಂತಿನಿ, ನಾಗರಾಜ್ ಮೈಸೂರು, ಪ್ರಸಾದ್ ಬಾಬು ನಟಿಸಿದ್ದಾರೆ.
ಸಲೀಂ ಅಲಿ ಅವರ ಕುರಿತು ಭಾರತದಲ್ಲಿ ಇದೇ ಮೊದಲ ಬಾರಿಗೆ, ಅದರಲ್ಲೂ ಕನ್ನಡದಲ್ಲಿ ಪೂರ್ಣ ಪ್ರಮಾಣದ ನಾಟಕ ಪ್ರದರ್ಶಿತವಾಗುತ್ತಿರುವುದು ವಿಶೇಷ. ಈ ನಾಟಕದಲ್ಲಿ ಬಾಲ್ಯ, ಯೌವ್ವನ, ಅಂತಿಮ ದಿನಗಳು ಸೇರಿದಂತೆ ಸಲೀಂ ಅಲಿ ಅವರ ಜೀವನ ಮತ್ತು ಸಾಧನೆಗಳ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ಮಾಡಲಾಗಿದೆ.
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…