ಜಿಲ್ಲೆಗಳು

ಡಿ. 24ರಂದು ‘ಸಲೀಂ ಅಲಿ – ಪಕ್ಷಿಲೋಕದ ಬೆರಗು’ ನಾಟಕ ಪ್ರದರ್ಶನ

ಮೈಸೂರು: ‘ಅರಿವು ರಂಗ’ ವತಿಯಿಂದ ‘ಸಲೀಂ ಅಲಿ – ಪಕ್ಷಿಲೋಕದ ಬೆರಗು’ ನಾಟಕ ಪ್ರದರ್ಶನವನ್ನು ಡಿ. 24ರಂದು ಸಂಜೆ ೬6.30ಕ್ಕೆ ನಗರದ ಕಲಾಮಂದಿರ ಆವರಣದಲ್ಲಿರುವ ಕಿರು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.
ಭಾರತದ ಹೆಸರಾಂತ ಪಕ್ಷಿತಜ್ಞ, ಪದ್ಮಭೂಷಣ ಡಾ. ಸಲೀಂ ಅಲಿ ಅವರ ಜೀವನಾಧಾರಿತ ನಾಟಕ ಇದಾಗಿದ್ದು, ಡಾ. ಎಂ.ಸಿ.ಮನೋಹರ ರಚಿಸಿದ್ದಾರೆ. ಬರ್ಟಿ ಒಲಿವೇರಾ ನಿರ್ದೇಶನದ ಈ ನಾಟಕಕ್ಕೆ ಸಾಯಿಶಿವ್ ಸಂಗೀತ, ಯತೀಶ್ ಎನ್. ಕೊಳ್ಳೇಗಾಲ ರಂಗವಿನ್ಯಾಸ-ಬೆಳಕು, ಕಾಜು ರಂಗ ಪರಿಕರ, ರಜನಿ ವಸ್ತ್ರವಿನ್ಯಾಸ, ಎಂ.ಸಿ.ಗಿರಿಧರ ಸಂಗೀತ ನಿರ್ವಹಣೆ, ರಂಗನಾಥ್ ಪ್ರಸಾಧನ ಮಾಡಿದ್ದಾರೆ. ಎಚ್.ತೇಜಸ್, ಡಾ.ಎಂ.ಸಿ.ಮನೋಹರ, ಡಾ.ಆರ್.ಚಲಪತಿ, ಬರ್ಟಿ ಒಲಿವೆರಾ, ಸರಳಾ ನಟರಾಜ್, ಬಿ.ಸೀಮಂತಿನಿ, ನಾಗರಾಜ್ ಮೈಸೂರು, ಪ್ರಸಾದ್ ಬಾಬು ನಟಿಸಿದ್ದಾರೆ.
ಸಲೀಂ ಅಲಿ ಅವರ ಕುರಿತು ಭಾರತದಲ್ಲಿ ಇದೇ ಮೊದಲ ಬಾರಿಗೆ, ಅದರಲ್ಲೂ ಕನ್ನಡದಲ್ಲಿ ಪೂರ್ಣ ಪ್ರಮಾಣದ ನಾಟಕ ಪ್ರದರ್ಶಿತವಾಗುತ್ತಿರುವುದು ವಿಶೇಷ. ಈ ನಾಟಕದಲ್ಲಿ ಬಾಲ್ಯ, ಯೌವ್ವನ, ಅಂತಿಮ ದಿನಗಳು ಸೇರಿದಂತೆ ಸಲೀಂ ಅಲಿ ಅವರ ಜೀವನ ಮತ್ತು ಸಾಧನೆಗಳ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ಮಾಡಲಾಗಿದೆ.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

3 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

11 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

11 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

11 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

14 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

14 hours ago