ಜಿಲ್ಲೆಗಳು

ಡಿ. 24ರಂದು ‘ಸಲೀಂ ಅಲಿ – ಪಕ್ಷಿಲೋಕದ ಬೆರಗು’ ನಾಟಕ ಪ್ರದರ್ಶನ

ಮೈಸೂರು: ‘ಅರಿವು ರಂಗ’ ವತಿಯಿಂದ ‘ಸಲೀಂ ಅಲಿ – ಪಕ್ಷಿಲೋಕದ ಬೆರಗು’ ನಾಟಕ ಪ್ರದರ್ಶನವನ್ನು ಡಿ. 24ರಂದು ಸಂಜೆ ೬6.30ಕ್ಕೆ ನಗರದ ಕಲಾಮಂದಿರ ಆವರಣದಲ್ಲಿರುವ ಕಿರು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.
ಭಾರತದ ಹೆಸರಾಂತ ಪಕ್ಷಿತಜ್ಞ, ಪದ್ಮಭೂಷಣ ಡಾ. ಸಲೀಂ ಅಲಿ ಅವರ ಜೀವನಾಧಾರಿತ ನಾಟಕ ಇದಾಗಿದ್ದು, ಡಾ. ಎಂ.ಸಿ.ಮನೋಹರ ರಚಿಸಿದ್ದಾರೆ. ಬರ್ಟಿ ಒಲಿವೇರಾ ನಿರ್ದೇಶನದ ಈ ನಾಟಕಕ್ಕೆ ಸಾಯಿಶಿವ್ ಸಂಗೀತ, ಯತೀಶ್ ಎನ್. ಕೊಳ್ಳೇಗಾಲ ರಂಗವಿನ್ಯಾಸ-ಬೆಳಕು, ಕಾಜು ರಂಗ ಪರಿಕರ, ರಜನಿ ವಸ್ತ್ರವಿನ್ಯಾಸ, ಎಂ.ಸಿ.ಗಿರಿಧರ ಸಂಗೀತ ನಿರ್ವಹಣೆ, ರಂಗನಾಥ್ ಪ್ರಸಾಧನ ಮಾಡಿದ್ದಾರೆ. ಎಚ್.ತೇಜಸ್, ಡಾ.ಎಂ.ಸಿ.ಮನೋಹರ, ಡಾ.ಆರ್.ಚಲಪತಿ, ಬರ್ಟಿ ಒಲಿವೆರಾ, ಸರಳಾ ನಟರಾಜ್, ಬಿ.ಸೀಮಂತಿನಿ, ನಾಗರಾಜ್ ಮೈಸೂರು, ಪ್ರಸಾದ್ ಬಾಬು ನಟಿಸಿದ್ದಾರೆ.
ಸಲೀಂ ಅಲಿ ಅವರ ಕುರಿತು ಭಾರತದಲ್ಲಿ ಇದೇ ಮೊದಲ ಬಾರಿಗೆ, ಅದರಲ್ಲೂ ಕನ್ನಡದಲ್ಲಿ ಪೂರ್ಣ ಪ್ರಮಾಣದ ನಾಟಕ ಪ್ರದರ್ಶಿತವಾಗುತ್ತಿರುವುದು ವಿಶೇಷ. ಈ ನಾಟಕದಲ್ಲಿ ಬಾಲ್ಯ, ಯೌವ್ವನ, ಅಂತಿಮ ದಿನಗಳು ಸೇರಿದಂತೆ ಸಲೀಂ ಅಲಿ ಅವರ ಜೀವನ ಮತ್ತು ಸಾಧನೆಗಳ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ಮಾಡಲಾಗಿದೆ.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

10 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

11 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

12 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

18 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

18 hours ago