ಜಿಲ್ಲೆಗಳು

25 ವರ್ಷಗಳಿಂದ ಅರಮನೆ ಪೂಜಾ ಸೇವೆ : ಅರ್ಚಕ ಪ್ರಹ್ಲಾದ್ ರಾವ್‌ಗೆ ಅಭಿನಂದನೆ

ಮೈಸೂರು: ನಾಡಹಬ್ಬ ದಸರಾದಲ್ಲಿ ಭಾಗವಹಿಸುವ ಆನೆಗಳ ಹಾಗೂ ಅಂಬಾರಿಯಲ್ಲಿ ಪ್ರತಿಷ್ಠಾಪಿಸುವ ಚಾಮುಂಡೇಶ್ವರಿಯ ಪೂಜೆಯನ್ನು ಸತತವಾಗಿ ೨೫ವರ್ಷಗಳಿಂದ ಪೂಜಾ ಕೈಕರ್ಯಗಳನ್ನು ನೆರವೇರಿಸುತ್ತಿರುವ ಅರಮನೆ ಆರ್ಚಕ ಪ್ರಹ್ಲಾದ್ ರಾವ್ ಅವರನ್ನು ಅಭಿನಂದಿಸಲಾಯಿತು.

ನಗರದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಮೈಸೂರು ರಕ್ಷಣಾ ವೇದಿಕೆ ಹಾಗೂ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಸಹಯೋಗದಲ್ಲಿ ಅಭಿನಂದಿಸಲಾಯಿತು.

ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ ಗೌಡ ಮಾತನಾಡಿ, ಕಳೆದ ೨೫ವರ್ಷಗಳಿಂದ ನಾಡಹಬ್ಬ ದಸರಾ ಸಂಧರ್ಭದಲ್ಲಿ ಜಂಬೂಸವಾರಿ ಹೊರಡುವ ಸಂದರ್ಭದಲ್ಲಿ ಅಂಬಾರಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಧಾರ್ಮಿಕ ಸೇವೆಯನ್ನು ಸಲ್ಲಿಸಿಕೊಂಡು ಬರುತ್ತಿದ್ದು, ಜಿಲ್ಲಾಡಳಿತ ಪುರೋಹಿತ ಪ್ರಹಲ್ಲಾದ್ ಅವರ ಸೇವೆಯನ್ನ ಪರಿಗಣಿಸಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲು ಮುಂದಾಗಲಿ ಎಂದು ಹೇಳಿದರು.

ಅರಮನೆ ಪುರೋಹಿತರಾದ ಪ್ರಹಲ್ಲಾದ್ ಮಾತನಾಡಿ, ಎನ್.ಬೇಗೂರು ಗ್ರಾಮದಲ್ಲಿ ತಂದೆ ವಾಸುದೇವರಾವ್ ಅವರು ಅರಣ್ಯ ಇಲಾಖೆಯಲ್ಲಿ ವಲಯ ಅರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾಗ ಕುಟುಂಬದವರೆಲ್ಲರೂ ಆನೆಯ ಒಡನಾಟದಲ್ಲಿಯೇ ಬೆಳೆದೆವು. ಪ್ರತಿದಿನ ಆನೆಗಳ ಭಾಷೆಗಳನ್ನು ಅರಿತು ಭಾಂದವ್ಯ ಬೆಳೆಯಿತು. ಆನೆಗಳು ಕಂಡರೆ ಸಾಕು ಪ್ರೀತಿ ಮಮತೆ ತೋರಿಸುತ್ತವೆ ಪೂಜಾ ಕೈಂಕರ್ಯ ಸಲ್ಲಿಸುವಾಗ ಮಂತ್ರಗಳನ್ನು ಹೇಳುವ ಸಂದರ್ಭದಲ್ಲಿ ಆನೆಯ ಭಾಷೆಗಳ ಮೂಲಕ ಮಾತನಾಡಿಸಿದಾಗ ಗಜಪಡೆ ಬಹಳ ಶಾಂತಿಯಿಂದ ಭಕ್ತಿಪೂರ್ವಕವಾಗಿ ಭಾಗವಹಿಸುತ್ತವೆ ಎಂದರು.

ಅರ್ಚಕರ ಸಂಘದ ಅಧ್ಯಕ್ಷ ವಿದ್ವಾನ್ ಕೃಷ್ಣಮೂರ್ತಿ, ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್‌, ಮೈಸೂರು ರಕ್ಷಣಾ ವೇದಿಕೆಯ ಕಾರ್ಯದರ್ಶಿ ರಾಕೇಶ್ ಭಟ್, ಅಜಯ್‌ ಶಾಸ್ತ್ರಿ , ಎಸ್.ಎನ್. ರಾಜೇಶ್, ರಾಕೇಶ್ ಕುಂಚಿಟಿಗ, ಸತೀಶ್, ಶರತ್, ಲಿಂಗರಾಜು ಮುಂತಾದವರು ಹಾಜರಿದ್ದರು.

ಮೈಸೂರಿನ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಮೈಸೂರು ರಕ್ಷಣಾ ವೇದಿಕೆ ಹಾಗೂ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಸಹಯೋಗದಲ್ಲಿ ಅಂಬಾರಿಯಲ್ಲಿ ಪ್ರತಿಷ್ಠಾಪಿಸುವ ಚಾಮುಂಡೇಶ್ವರಿಯ ಪೂಜಾ ಕೈಕರ್ಯಗಳನ್ನು ನೆರವೇರಿಸುವ ಪ್ರಹ್ಲಾದ್ ರಾವ್ ಅವರನ್ನು ಅಭಿನಂದಿಸಲಾಯಿತು.

 

andolana

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

9 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

9 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

11 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago