ಜಿಲ್ಲೆಗಳು

ಗುಡಿಸಲು ನಿರ್ಮಿಸಿ ರೈತರಿಂದ ವಿಭಿನ್ನ ಧರಣಿ

ಮಂಡ್ಯ: ಪ್ರತಿ ಟನ್ ಕಬ್ಬಿಗೆ ೪,೫೦೦ ರೂ. ಹಾಗೂ ಪ್ರತಿ ಲೀಟರ್ ಹಾಲಿಗೆ ೪೦ ರೂ. ನಿಗದಿಗೆ ಒತ್ತಾಯಿಸಿ ಸರ್ ಎಂ.ವಿ.ಪ್ರತಿಮೆ ಎದುರು ರೈತ ಸಂಘದಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಗುರುವಾರ ೨೫ನೇ ದಿನ ಪೂರೈಸಿತು.

ಈ ಹೋರಾಟಕ್ಕೆ ಮದ್ದೂರು ತಾಲ್ಲೂಕು ರೈತ ಸಂಘದ ಜತೆಗೆ ಈಚಗೆರೆ, ಹೊಡಾಘಟ್ಟ, ಉಪ್ಪಾರಕನಹಳ್ಳಿ ಗ್ರಾಮಸ್ಥರು ಬೆಂಬಲ ಸೂಚಿಸಿದರು. ಮಾತ್ರವಲ್ಲದೆ, ಪ್ರತಿದಿನ ಭಾಗವಹಿಸುವವರು ಒಂದರಂತೆ ಪುಟ್ಟ ಗುಡಿಸಲು ನಿರ್ಮಾಣ ಮಾಡುವ ಮೂಲಕ ವಿಭಿನ್ನವಾಗಿ ಹೋರಾಟ ನಡೆಸಿದರು.

ಈ ವೇಳೆ ರಾಜ್ಯ ರೈತ ಸಂಘದ ಸಂಘಟನಾ ಕಾರ್ಯದರ್ಶಿ ಎಸ್.ಸಿ.ಮಧುಚಂದನ್ ಮಾತನಾಡಿ, ನಾವು ಹೆಚ್ಚುವರಿ ಹಣ ಕೊಡುವಂತೆ ಕೇಳುತ್ತಿಲ್ಲ. ನ್ಯಾಯಯುತವಾದ  ಬೆಲೆ ಕೊಡುವಂತೆ ಒತ್ತಾಯಿಸುತ್ತಿದ್ದೇವೆ. ಡಾ.ಸ್ವಾಮಿನಾಥನ್ ಆಯೋಗ ವರದಿ ಪ್ರಕಾರ ಪ್ರತಿ ಟನ್ ಕಬ್ಬಿಗೆ ಐದು ಮುಕ್ಕಾಲು ಸಾವಿರ ರೂ. ಕೊಡಬೇಕಾಗುತ್ತದೆ. ಪ್ರಸ್ತುತ ಪ್ರತಿ ಟನ್ ಕಬ್ಬು ಬೆಳೆಯಲು ಮೂರು ಮುಕ್ಕಾಲು ಸಾವಿರ ವೆಚ್ಚವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದರೂ ಸರ್ಕಾರ ಗಮನ ಕೊಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧ್ಯಕ್ಷೃ ಎ.ಎಲ್.ಕೆಂಪೂಗೌಡ, ವಿನೋದ್ ಬಾಬು, ಸಿದ್ದೇಗೌಡ, ಶಂಕರ, ವರದಪ್ಪ, ಅಶೋಕ್, ರಾಮಣ್ಣ, ಬೋರೇಗೌಡ, ಲಿಂಗಪ್ಪಾಜಿ, ಕುಮಾರ, ಚಂದ್ರು, ಅಶ್ವಿನಿ, ಅನುಸೂಯಮ್ಮ, ಕೆಂಪಮ್ಮ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

andolanait

Recent Posts

ಈಶಾ ಫೌಂಡೇಶನ್‌ ಬಳಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ

ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್‌ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ…

6 mins ago

ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಮತ್ತೆ ವಾಗ್ದಾಳಿ

ನವದೆಹಲಿ: ಭಾರತ-ಅಮೇರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕ…

12 mins ago

ಬಾಂಗ್ಲಾ ನೂತನ ಪ್ರಧಾನಿ ಪ್ರಮಾಣ ವಚನಕ್ಕೆ ಭಾರತದ ಪ್ರತಿನಿಧಿಯಾಗಿ ಸ್ಪೀಕರ್‌ ಓಂ ಬಿರ್ಲಾ

ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್‌ ರೆಹಮಾನ್‌ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್‌…

19 mins ago

ಕೆನಡಾದಲ್ಲಿ ಹತ್ಯೆಯಾಗಿದ್ದ ಐಟಿ ಉದ್ಯೋಗಿ ಚಂದನ್‌ ಮೃತದೇಹ ಸ್ವಗ್ರಾಮಕ್ಕೆ

ಬೆಂಗಳೂರು: ಕೆನಡಾದಲ್ಲಿ ಐಟಿ ಉದ್ಯೋಗಿ ಚಂದನ್‌ ಕುಮಾರ್‌ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ವಗ್ರಾಮ ತ್ಯಾಮಗೊಂಡ್ಲುಗೆ ಚಂದನ್‌…

27 mins ago

ಕೋಲಾರದಲ್ಲಿ ನಾಳೆ ಟಾಟಾ ಹೆಲಿಕಾಪ್ಟರ್‌ ಘಟಕ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್‌ನಲ್ಲಿ ಟಾಟಾ ಏರ್‌ಬಸ್‌ ಲಘು ಹೆಲಿಕಾಪ್ಟರ್‌ ಅಂತಿಮ ಜೋಡಣೆ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ…

32 mins ago

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

9 hours ago