ಮಂಡ್ಯ: ಪ್ರತಿ ಟನ್ ಕಬ್ಬಿಗೆ ೪,೫೦೦ ರೂ. ಹಾಗೂ ಪ್ರತಿ ಲೀಟರ್ ಹಾಲಿಗೆ ೪೦ ರೂ. ನಿಗದಿಗೆ ಒತ್ತಾಯಿಸಿ ಸರ್ ಎಂ.ವಿ.ಪ್ರತಿಮೆ ಎದುರು ರೈತ ಸಂಘದಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಗುರುವಾರ ೨೫ನೇ ದಿನ ಪೂರೈಸಿತು.
ಈ ಹೋರಾಟಕ್ಕೆ ಮದ್ದೂರು ತಾಲ್ಲೂಕು ರೈತ ಸಂಘದ ಜತೆಗೆ ಈಚಗೆರೆ, ಹೊಡಾಘಟ್ಟ, ಉಪ್ಪಾರಕನಹಳ್ಳಿ ಗ್ರಾಮಸ್ಥರು ಬೆಂಬಲ ಸೂಚಿಸಿದರು. ಮಾತ್ರವಲ್ಲದೆ, ಪ್ರತಿದಿನ ಭಾಗವಹಿಸುವವರು ಒಂದರಂತೆ ಪುಟ್ಟ ಗುಡಿಸಲು ನಿರ್ಮಾಣ ಮಾಡುವ ಮೂಲಕ ವಿಭಿನ್ನವಾಗಿ ಹೋರಾಟ ನಡೆಸಿದರು.
ಈ ವೇಳೆ ರಾಜ್ಯ ರೈತ ಸಂಘದ ಸಂಘಟನಾ ಕಾರ್ಯದರ್ಶಿ ಎಸ್.ಸಿ.ಮಧುಚಂದನ್ ಮಾತನಾಡಿ, ನಾವು ಹೆಚ್ಚುವರಿ ಹಣ ಕೊಡುವಂತೆ ಕೇಳುತ್ತಿಲ್ಲ. ನ್ಯಾಯಯುತವಾದ ಬೆಲೆ ಕೊಡುವಂತೆ ಒತ್ತಾಯಿಸುತ್ತಿದ್ದೇವೆ. ಡಾ.ಸ್ವಾಮಿನಾಥನ್ ಆಯೋಗ ವರದಿ ಪ್ರಕಾರ ಪ್ರತಿ ಟನ್ ಕಬ್ಬಿಗೆ ಐದು ಮುಕ್ಕಾಲು ಸಾವಿರ ರೂ. ಕೊಡಬೇಕಾಗುತ್ತದೆ. ಪ್ರಸ್ತುತ ಪ್ರತಿ ಟನ್ ಕಬ್ಬು ಬೆಳೆಯಲು ಮೂರು ಮುಕ್ಕಾಲು ಸಾವಿರ ವೆಚ್ಚವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದರೂ ಸರ್ಕಾರ ಗಮನ ಕೊಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧ್ಯಕ್ಷೃ ಎ.ಎಲ್.ಕೆಂಪೂಗೌಡ, ವಿನೋದ್ ಬಾಬು, ಸಿದ್ದೇಗೌಡ, ಶಂಕರ, ವರದಪ್ಪ, ಅಶೋಕ್, ರಾಮಣ್ಣ, ಬೋರೇಗೌಡ, ಲಿಂಗಪ್ಪಾಜಿ, ಕುಮಾರ, ಚಂದ್ರು, ಅಶ್ವಿನಿ, ಅನುಸೂಯಮ್ಮ, ಕೆಂಪಮ್ಮ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…