ಮಂಡ್ಯ: ಪ್ರತಿ ಟನ್ ಕಬ್ಬಿಗೆ ೪,೫೦೦ ರೂ. ಹಾಗೂ ಪ್ರತಿ ಲೀಟರ್ ಹಾಲಿಗೆ ೪೦ ರೂ. ನಿಗದಿಗೆ ಒತ್ತಾಯಿಸಿ ಸರ್ ಎಂ.ವಿ.ಪ್ರತಿಮೆ ಎದುರು ರೈತ ಸಂಘದಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಗುರುವಾರ ೨೫ನೇ ದಿನ ಪೂರೈಸಿತು.
ಈ ಹೋರಾಟಕ್ಕೆ ಮದ್ದೂರು ತಾಲ್ಲೂಕು ರೈತ ಸಂಘದ ಜತೆಗೆ ಈಚಗೆರೆ, ಹೊಡಾಘಟ್ಟ, ಉಪ್ಪಾರಕನಹಳ್ಳಿ ಗ್ರಾಮಸ್ಥರು ಬೆಂಬಲ ಸೂಚಿಸಿದರು. ಮಾತ್ರವಲ್ಲದೆ, ಪ್ರತಿದಿನ ಭಾಗವಹಿಸುವವರು ಒಂದರಂತೆ ಪುಟ್ಟ ಗುಡಿಸಲು ನಿರ್ಮಾಣ ಮಾಡುವ ಮೂಲಕ ವಿಭಿನ್ನವಾಗಿ ಹೋರಾಟ ನಡೆಸಿದರು.
ಈ ವೇಳೆ ರಾಜ್ಯ ರೈತ ಸಂಘದ ಸಂಘಟನಾ ಕಾರ್ಯದರ್ಶಿ ಎಸ್.ಸಿ.ಮಧುಚಂದನ್ ಮಾತನಾಡಿ, ನಾವು ಹೆಚ್ಚುವರಿ ಹಣ ಕೊಡುವಂತೆ ಕೇಳುತ್ತಿಲ್ಲ. ನ್ಯಾಯಯುತವಾದ ಬೆಲೆ ಕೊಡುವಂತೆ ಒತ್ತಾಯಿಸುತ್ತಿದ್ದೇವೆ. ಡಾ.ಸ್ವಾಮಿನಾಥನ್ ಆಯೋಗ ವರದಿ ಪ್ರಕಾರ ಪ್ರತಿ ಟನ್ ಕಬ್ಬಿಗೆ ಐದು ಮುಕ್ಕಾಲು ಸಾವಿರ ರೂ. ಕೊಡಬೇಕಾಗುತ್ತದೆ. ಪ್ರಸ್ತುತ ಪ್ರತಿ ಟನ್ ಕಬ್ಬು ಬೆಳೆಯಲು ಮೂರು ಮುಕ್ಕಾಲು ಸಾವಿರ ವೆಚ್ಚವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದರೂ ಸರ್ಕಾರ ಗಮನ ಕೊಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧ್ಯಕ್ಷೃ ಎ.ಎಲ್.ಕೆಂಪೂಗೌಡ, ವಿನೋದ್ ಬಾಬು, ಸಿದ್ದೇಗೌಡ, ಶಂಕರ, ವರದಪ್ಪ, ಅಶೋಕ್, ರಾಮಣ್ಣ, ಬೋರೇಗೌಡ, ಲಿಂಗಪ್ಪಾಜಿ, ಕುಮಾರ, ಚಂದ್ರು, ಅಶ್ವಿನಿ, ಅನುಸೂಯಮ್ಮ, ಕೆಂಪಮ್ಮ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…