ಮಂಡ್ಯ: ಪ್ರತಿ ಟನ್ ಕಬ್ಬಿಗೆ ೪,೫೦೦ ರೂ. ಹಾಗೂ ಪ್ರತಿ ಲೀಟರ್ ಹಾಲಿಗೆ ೪೦ ರೂ. ನಿಗದಿಗೆ ಒತ್ತಾಯಿಸಿ ಸರ್ ಎಂ.ವಿ.ಪ್ರತಿಮೆ ಎದುರು ರೈತ ಸಂಘದಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಗುರುವಾರ ೨೫ನೇ ದಿನ ಪೂರೈಸಿತು.
ಈ ಹೋರಾಟಕ್ಕೆ ಮದ್ದೂರು ತಾಲ್ಲೂಕು ರೈತ ಸಂಘದ ಜತೆಗೆ ಈಚಗೆರೆ, ಹೊಡಾಘಟ್ಟ, ಉಪ್ಪಾರಕನಹಳ್ಳಿ ಗ್ರಾಮಸ್ಥರು ಬೆಂಬಲ ಸೂಚಿಸಿದರು. ಮಾತ್ರವಲ್ಲದೆ, ಪ್ರತಿದಿನ ಭಾಗವಹಿಸುವವರು ಒಂದರಂತೆ ಪುಟ್ಟ ಗುಡಿಸಲು ನಿರ್ಮಾಣ ಮಾಡುವ ಮೂಲಕ ವಿಭಿನ್ನವಾಗಿ ಹೋರಾಟ ನಡೆಸಿದರು.
ಈ ವೇಳೆ ರಾಜ್ಯ ರೈತ ಸಂಘದ ಸಂಘಟನಾ ಕಾರ್ಯದರ್ಶಿ ಎಸ್.ಸಿ.ಮಧುಚಂದನ್ ಮಾತನಾಡಿ, ನಾವು ಹೆಚ್ಚುವರಿ ಹಣ ಕೊಡುವಂತೆ ಕೇಳುತ್ತಿಲ್ಲ. ನ್ಯಾಯಯುತವಾದ ಬೆಲೆ ಕೊಡುವಂತೆ ಒತ್ತಾಯಿಸುತ್ತಿದ್ದೇವೆ. ಡಾ.ಸ್ವಾಮಿನಾಥನ್ ಆಯೋಗ ವರದಿ ಪ್ರಕಾರ ಪ್ರತಿ ಟನ್ ಕಬ್ಬಿಗೆ ಐದು ಮುಕ್ಕಾಲು ಸಾವಿರ ರೂ. ಕೊಡಬೇಕಾಗುತ್ತದೆ. ಪ್ರಸ್ತುತ ಪ್ರತಿ ಟನ್ ಕಬ್ಬು ಬೆಳೆಯಲು ಮೂರು ಮುಕ್ಕಾಲು ಸಾವಿರ ವೆಚ್ಚವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದರೂ ಸರ್ಕಾರ ಗಮನ ಕೊಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧ್ಯಕ್ಷೃ ಎ.ಎಲ್.ಕೆಂಪೂಗೌಡ, ವಿನೋದ್ ಬಾಬು, ಸಿದ್ದೇಗೌಡ, ಶಂಕರ, ವರದಪ್ಪ, ಅಶೋಕ್, ರಾಮಣ್ಣ, ಬೋರೇಗೌಡ, ಲಿಂಗಪ್ಪಾಜಿ, ಕುಮಾರ, ಚಂದ್ರು, ಅಶ್ವಿನಿ, ಅನುಸೂಯಮ್ಮ, ಕೆಂಪಮ್ಮ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…
ಬೆಂಗಳೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST)…
ಮೈಸೂರು : ಫುಟ್ಪಾತ್ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5…