ಜಿಲ್ಲೆಗಳು

ಗುಡಿಸಲು ನಿರ್ಮಿಸಿ ರೈತರಿಂದ ವಿಭಿನ್ನ ಧರಣಿ

ಮಂಡ್ಯ: ಪ್ರತಿ ಟನ್ ಕಬ್ಬಿಗೆ ೪,೫೦೦ ರೂ. ಹಾಗೂ ಪ್ರತಿ ಲೀಟರ್ ಹಾಲಿಗೆ ೪೦ ರೂ. ನಿಗದಿಗೆ ಒತ್ತಾಯಿಸಿ ಸರ್ ಎಂ.ವಿ.ಪ್ರತಿಮೆ ಎದುರು ರೈತ ಸಂಘದಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಗುರುವಾರ ೨೫ನೇ ದಿನ ಪೂರೈಸಿತು.

ಈ ಹೋರಾಟಕ್ಕೆ ಮದ್ದೂರು ತಾಲ್ಲೂಕು ರೈತ ಸಂಘದ ಜತೆಗೆ ಈಚಗೆರೆ, ಹೊಡಾಘಟ್ಟ, ಉಪ್ಪಾರಕನಹಳ್ಳಿ ಗ್ರಾಮಸ್ಥರು ಬೆಂಬಲ ಸೂಚಿಸಿದರು. ಮಾತ್ರವಲ್ಲದೆ, ಪ್ರತಿದಿನ ಭಾಗವಹಿಸುವವರು ಒಂದರಂತೆ ಪುಟ್ಟ ಗುಡಿಸಲು ನಿರ್ಮಾಣ ಮಾಡುವ ಮೂಲಕ ವಿಭಿನ್ನವಾಗಿ ಹೋರಾಟ ನಡೆಸಿದರು.

ಈ ವೇಳೆ ರಾಜ್ಯ ರೈತ ಸಂಘದ ಸಂಘಟನಾ ಕಾರ್ಯದರ್ಶಿ ಎಸ್.ಸಿ.ಮಧುಚಂದನ್ ಮಾತನಾಡಿ, ನಾವು ಹೆಚ್ಚುವರಿ ಹಣ ಕೊಡುವಂತೆ ಕೇಳುತ್ತಿಲ್ಲ. ನ್ಯಾಯಯುತವಾದ  ಬೆಲೆ ಕೊಡುವಂತೆ ಒತ್ತಾಯಿಸುತ್ತಿದ್ದೇವೆ. ಡಾ.ಸ್ವಾಮಿನಾಥನ್ ಆಯೋಗ ವರದಿ ಪ್ರಕಾರ ಪ್ರತಿ ಟನ್ ಕಬ್ಬಿಗೆ ಐದು ಮುಕ್ಕಾಲು ಸಾವಿರ ರೂ. ಕೊಡಬೇಕಾಗುತ್ತದೆ. ಪ್ರಸ್ತುತ ಪ್ರತಿ ಟನ್ ಕಬ್ಬು ಬೆಳೆಯಲು ಮೂರು ಮುಕ್ಕಾಲು ಸಾವಿರ ವೆಚ್ಚವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದರೂ ಸರ್ಕಾರ ಗಮನ ಕೊಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧ್ಯಕ್ಷೃ ಎ.ಎಲ್.ಕೆಂಪೂಗೌಡ, ವಿನೋದ್ ಬಾಬು, ಸಿದ್ದೇಗೌಡ, ಶಂಕರ, ವರದಪ್ಪ, ಅಶೋಕ್, ರಾಮಣ್ಣ, ಬೋರೇಗೌಡ, ಲಿಂಗಪ್ಪಾಜಿ, ಕುಮಾರ, ಚಂದ್ರು, ಅಶ್ವಿನಿ, ಅನುಸೂಯಮ್ಮ, ಕೆಂಪಮ್ಮ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

andolanait

Recent Posts

ವಿಧಾನಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ಹಾಗೂ ಬಿಹಾರ ವಿಧಾನಪರಿಷತ್‌ನ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಸ್ಥಾನಗಳಿಗೆ ದ್ವೈವಾರ್ಷಿಕ…

18 seconds ago

ಮೇಕೆದಾಟು ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಗಣಿಗ ರವಿಕುಮಾರ್‌

ಮಂಡ್ಯ: ವಿಜಯ್‌ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು…

52 mins ago

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

6 hours ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

6 hours ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

6 hours ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

6 hours ago