ಮೈಸೂರು: ಮೈಸೂರು ತಾಲೂಕಿನ ಆಯರಹಳ್ಳಿಯ ದ್ಯಾವಣ್ಣ ಎಂಬ ರೈತನಿಗೆ ಸೇರಿದ ಜಮೀನಿನಲ್ಲಿ 3 ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ. ಈ ಪೈಕಿ ಒಂದು ಕಪ್ಪು ಚಿರತೆ ಮರಿಯಾಗಿದೆ. ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಕಟಾವು ಮಾಡುವ ವೇಳೆ ಈ ಮರಿಗಳು ಪತ್ತೆಯಾಗಿವೆ ಎಂದು ದ್ಯಾವಣ್ಣ ತಿಳಿಸಿದ್ದು, ಸುದ್ದಿ ತಿಳಿದ ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ದಾವಿಸಿ ಮರಿಗಳನ್ನು ವಶಕ್ಕೆ ಪಡೆದಿದ್ದಾರೆ.
ಮರಿಗಳ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಇನ್ನು ಅರಣ್ಯ ಅಧಿಕಾರಿಗಳು ಮರಿಗಳನ್ನೇನೋ ವಶಕ್ಕೆ ಪಡೆದಿದ್ದಾರೆ. ಆದರೆ ಮರಿಗಳ ತಾಯಿಯದ್ದೇ ಇದೀಗ ಸಮಸ್ಯೆಯಾಗಿ ಪರಿಣಮಿಸಿದೆ. ಹೌದು, ತಾಯಿ ಚಿರತೆ ಮರಿಗಳು ಇದ್ದ ಸ್ಥಳಕ್ಕೆ ಹಾಲುಣಿಸಲು ಬರಲಿದ್ದು ತನ್ನ ಮರಿಗಳು ಕಾಣದಿದ್ದಾಗ ತೀವ್ರ ಆಕ್ರೋಶಗೊಳ್ಳುವ ಸಾಧ್ಯತೆ ಇದೆ.
ಇದರಿಂದ ಚಿರತೆ ಅತಿರೇಕದಿಂದ ವರ್ತಿಸಿ ಹಾನಿಯುಂಟುಮಾಡುವ ಸಾಧ್ಯತೆಗಳಿದ್ದು, ಅರಣ್ಯ ಅಧಿಕಾರಿಗಳು ತಾಯಿ ಚಿರತೆಯನ್ನು ಸೆರೆ ಹಿಡಿಯಲು ಯೋಜನೆ ರಚಿಸಿದ್ದಾರೆ ಎಂದು ತಿಳಿದುಬಂದಿದೆ.
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸುತ್ತದೆ. ಈ…
ಮೈಸೂರು: ಚಾಮುಂಡಿಬೆಟ್ಟದ ಸುತ್ತಮುತ್ತ ಇದೀಗ ಬೆಟ್ಟದ ಅಸ್ತಿತ್ವಕ್ಕೆ ಗಂಡಾಂತರ ತರುವ ರೀತಿಯಲ್ಲಿ ಸುಮಾರು ೮ ಅಂತಸ್ತಿನ ಕಾಂಕ್ರೀಟ್ ಕಟ್ಟಡಗಳು ತಲೆ…
ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ…
ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…
ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…
ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…