ಮೈಸೂರು: ಮೈಸೂರು ತಾಲೂಕಿನ ಆಯರಹಳ್ಳಿಯ ದ್ಯಾವಣ್ಣ ಎಂಬ ರೈತನಿಗೆ ಸೇರಿದ ಜಮೀನಿನಲ್ಲಿ 3 ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ. ಈ ಪೈಕಿ ಒಂದು ಕಪ್ಪು ಚಿರತೆ ಮರಿಯಾಗಿದೆ. ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಕಟಾವು ಮಾಡುವ ವೇಳೆ ಈ ಮರಿಗಳು ಪತ್ತೆಯಾಗಿವೆ ಎಂದು ದ್ಯಾವಣ್ಣ ತಿಳಿಸಿದ್ದು, ಸುದ್ದಿ ತಿಳಿದ ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ದಾವಿಸಿ ಮರಿಗಳನ್ನು ವಶಕ್ಕೆ ಪಡೆದಿದ್ದಾರೆ.
ಮರಿಗಳ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಇನ್ನು ಅರಣ್ಯ ಅಧಿಕಾರಿಗಳು ಮರಿಗಳನ್ನೇನೋ ವಶಕ್ಕೆ ಪಡೆದಿದ್ದಾರೆ. ಆದರೆ ಮರಿಗಳ ತಾಯಿಯದ್ದೇ ಇದೀಗ ಸಮಸ್ಯೆಯಾಗಿ ಪರಿಣಮಿಸಿದೆ. ಹೌದು, ತಾಯಿ ಚಿರತೆ ಮರಿಗಳು ಇದ್ದ ಸ್ಥಳಕ್ಕೆ ಹಾಲುಣಿಸಲು ಬರಲಿದ್ದು ತನ್ನ ಮರಿಗಳು ಕಾಣದಿದ್ದಾಗ ತೀವ್ರ ಆಕ್ರೋಶಗೊಳ್ಳುವ ಸಾಧ್ಯತೆ ಇದೆ.
ಇದರಿಂದ ಚಿರತೆ ಅತಿರೇಕದಿಂದ ವರ್ತಿಸಿ ಹಾನಿಯುಂಟುಮಾಡುವ ಸಾಧ್ಯತೆಗಳಿದ್ದು, ಅರಣ್ಯ ಅಧಿಕಾರಿಗಳು ತಾಯಿ ಚಿರತೆಯನ್ನು ಸೆರೆ ಹಿಡಿಯಲು ಯೋಜನೆ ರಚಿಸಿದ್ದಾರೆ ಎಂದು ತಿಳಿದುಬಂದಿದೆ.
ಹನೂರು : ಉಡುತೊರೆ ಹಳ್ಳ ಜಲಾಶಯದಲ್ಲಿ ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಆನೆಗಳನ್ನು ಸುಮಾರು 17 ಗಂಟೆಗಳ…
ನವದೆಹಲಿ : ಜಾತ್ಯತೀತ ಜನತಾದಳದ ಜೊತೆಗೆ ಯಾವ ರಾಜಕೀಯ ನಾಯಕರೂ ಸಂಪರ್ಕ ಸಾಧಿಸಿಲ್ಲ. ಈ ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ…
ನವದೆಹಲಿ : ತಮಿಳುನಾಡಿನ ಡಿಎಂಕೆ ರಾಜಕೀಯ ಸ್ವಾರ್ಥಕ್ಕೆ ದಕ್ಷಿಣದ ರಾಜ್ಯಗಳ ಹಿತ ಬಲಿಯಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು…
ಮಂಡ್ಯ : ಬೇಸಿಗೆ ರಜೆಯ ಸಮಯದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಮತ್ತು ಎಡಮುರಿ ಪ್ರವಾಸಿ…
ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್ ಮತ್ತು ಸಿಪಿಎಂ…
ಹೈದರಾಬಾದ್ : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಅವರಿಗೆ ಹೈದರಾಬಾದ್ನಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ…