ಕೊಳ್ಳೇಗಾಲ: ಪಟ್ಟಣದಲ್ಲಿ ಕಳೆದ ವಾರ ಪಾನಿಪೂರಿ ವ್ಯಾಪಾರಿಯೊಬ್ಬನಿಗೆ ಫೋನ್ ಪೇ ಮಾಡುವ ನೆಪದಲ್ಲಿ ಅಂಗಡಿಯವನ ಮೊಬೈಲ್ ಪಡೆದು ತನ್ನ ಖಾತೆಗೆ 30 ಸಾವಿರ ರೂ.ಗಳನ್ನು ವರ್ಗಾವಣೆ ಮಾಡಿಕೊಂಡು ಕಾಲ್ಕಿತ್ತಿದ್ದ ಬೆಂಗಳೂರಿನ ವಿಶಾಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮೋಸ ಹೋಗಿದ್ದ ಪಾನಿಪೂರಿ ವ್ಯಾಪಾರಿ ಮರುದಿನ ಬ್ಯಾಂಕ್ನಲ್ಲಿ ಹಣ ಪಡೆಯಲು ಯತ್ನಿಸಿದಾಗ 30 ಸಾವಿರ ರೂ. ಫೋನ್ ಪೇ ಮುಖಾಂತರ ಬೆಂಗಳೂರಿನ ವಿಶಾಲ್ ಅಕೌಂಟ್ಗೆ ಜಮೆಯಾಗಿರುವುದು ತಿಳಿದುಬಂದಿತ್ತು. ತಕ್ಷಣ ಪೊಲೀಸರಿಗೆ ದೂರು ಸಲ್ಲಿಸಿದ್ದರು. ದೂರು ದಾಖಲಿಸಿಕೊಂಡಿದ್ದ ಪಟ್ಟಣ ಠಾಣೆಯ ಪೊಲೀಸರು ಈ ಪ್ರಕರಣವನ್ನು ಸೈಬರ್ ಕ್ರೈಂ ಬ್ರಾಂಚ್ಗೆ ವರ್ಗಾಯಿಸಿದರು. ತನಿಖೆ ನಡೆಸಿದ ಸೈಬರ್ ಪೊಲೀಸರು ಬೆಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಿ ಈತನಿಂದ 30 ಸಾವಿರ ರೂ. ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…