ಸರಗೂರು: ಸ್ನೇಹಿತರೊಂದಿಗೆ ಈಜಲು ಹೋದ ಯುವಕನೋರ್ವ ಕಪಿಲ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತುಂಬಸೋಗೆ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಮೈಸೂರಿನ ರಾಘವೇಂದ್ರನಗರದ ನಿವಾಸಿ ಕೃಷ್ಣ ಎಂಬುವರ ಪುತ್ರ ಹರೀಶ್ (34) ಮೃತ ದುರ್ದೈವಿ. ಈತ ಸ್ನೇಹಿತ ಗಣೇಶನೊಡನೆ ಆಟೋದಲ್ಲಿ ಸುತ್ತಾಡಿ ಬರುವುದಾಗಿ ಮೈಸೂರಿನಿಂದ ಬಂದಿದ್ದಾರೆ ಎನ್ನಲಾಗಿದ್ದು, ಸಮೀಪದ ತುಂಬಸೋಗೆ ಗ್ರಾಮದ ಬಳಿ ಇರುವ ಕಪಿಲ ನದಿ ಸೇತುವೆ ಎಡ ಭಾಗದ ನದಿ ದಡದಲ್ಲಿ ಆಟೋ ನಿಲ್ಲಿಸಿದ್ದಾರೆ. ನಂತರ ಗಣೇಶ ಬಹಿರ್ದೆಸೆಗೆ ಹೋಗಿದ್ದು, ಹರೀಶ್ ನದಿಯಲ್ಲಿ ಈಜಲು ಮುಂದಾಗಿದ್ದಾರೆ.
ನದಿ ಆಳವಾಗಿದ್ದರಿಂದ ಈಜಲಾಗದೆ ಮುಳುಗಿ ಸಾವನ್ನಪಿದ್ದಾನೆ. ಘಟನಾ ಸ್ಥಳದ ಪಕ್ಕದಲ್ಲೇ ಬಟ್ಟೆ ತೊಳೆಯುತ್ತಿದ್ದ ಮಹಿಳೆಯರು ವಿಷಯ ತಿಳಿದು ಜೋರಾಗಿ ಕೂಗಿಕೊಂಡಿದ್ದಾರೆ.
ವಿಷಯ ತಿಳಿದು ಗ್ರಾಮಸ್ಥರು, ಪೊಲೀಸರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಅಗ್ನಿ ಶಾಮಕ ದಳದ ಸಿಬ್ಬಂದಿ, ಈಜು ತಜ್ಞರ ಸಹಾಯದಿಂದ ಮೃತದೇಹವನ್ನು ಹೊರ ತೆಗೆದಿದ್ದು, ಸರಗೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಇರಿಸಲಾಗಿದೆ ಎಂದು ಅಪರಾಧ ವಿಭಾಗದ ಇನ್ಸ್ಪೆಕ್ಟರ್ ಗೋಪಾಲ್ ತಿಳಿಸಿದ್ದಾರೆ. ಈ ಕುರಿತು ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು, ಬಿಸಿಲಿನ ಅಲೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಬೆಂಗಳೂರು: ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಕೆಲವು ಭಾಗದಲ್ಲಿ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…
ಬೆಂಗಳೂರು: ರೈತರ ವಿರೋಧದ ನಡುವೆಯೂ ಇಂದಿನಿಂದ ಬಂಡೀಪುರ ಹಾಗೂ ನಾಗರಹೊಳೆಯಲ್ಲಿ ಸಫಾರಿ ಪುನರಾರಂಭ ಮಾಡಲಾಗಿದೆ. ಕಾಡಂಚಿನ ಗ್ರಾಮಗಳಲ್ಲಿ ಹುಲಿ ದಾಳಿಗೆ…
ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತದೇಹ ಪತ್ತೆ…
ಕಾಡುವುದು ಅನುಮಾನ! ಈಗ ಎಲ್ಲೆಲ್ಲೂ ಕೃತಕ ಬುದ್ಧಿಮತ್ತೆಯದೆ ಸುದ್ದಿ! ಕೃತಕ ಬುದ್ಧಿಮತ್ತೆಗೆ ನೈಜ ಬುದ್ಧಿಮತ್ತೆ ಮೂಲವಾದರೂ ಕಾಡುವುದು ಅನುಮಾನ ಕೃತಕ…