ಜಿಲ್ಲೆಗಳು

ಸ್ನೇಹಿತರೊಂದಿಗೆ ಈಜಲು ಹೋದ ಯುವಕ ನೀರುಪಾಲು

ಸರಗೂರು: ಸ್ನೇಹಿತರೊಂದಿಗೆ ಈಜಲು ಹೋದ ಯುವಕನೋರ್ವ ಕಪಿಲ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತುಂಬಸೋಗೆ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಮೈಸೂರಿನ ರಾಘವೇಂದ್ರನಗರದ ನಿವಾಸಿ ಕೃಷ್ಣ ಎಂಬುವರ ಪುತ್ರ ಹರೀಶ್ (34) ಮೃತ ದುರ್ದೈವಿ. ಈತ ಸ್ನೇಹಿತ ಗಣೇಶನೊಡನೆ ಆಟೋದಲ್ಲಿ ಸುತ್ತಾಡಿ ಬರುವುದಾಗಿ ಮೈಸೂರಿನಿಂದ ಬಂದಿದ್ದಾರೆ ಎನ್ನಲಾಗಿದ್ದು, ಸಮೀಪದ ತುಂಬಸೋಗೆ ಗ್ರಾಮದ ಬಳಿ ಇರುವ ಕಪಿಲ ನದಿ ಸೇತುವೆ ಎಡ ಭಾಗದ ನದಿ ದಡದಲ್ಲಿ ಆಟೋ ನಿಲ್ಲಿಸಿದ್ದಾರೆ. ನಂತರ ಗಣೇಶ ಬಹಿರ್ದೆಸೆಗೆ ಹೋಗಿದ್ದು, ಹರೀಶ್ ನದಿಯಲ್ಲಿ ಈಜಲು ಮುಂದಾಗಿದ್ದಾರೆ.

ನದಿ ಆಳವಾಗಿದ್ದರಿಂದ ಈಜಲಾಗದೆ ಮುಳುಗಿ ಸಾವನ್ನಪಿದ್ದಾನೆ. ಘಟನಾ ಸ್ಥಳದ ಪಕ್ಕದಲ್ಲೇ ಬಟ್ಟೆ ತೊಳೆಯುತ್ತಿದ್ದ ಮಹಿಳೆಯರು ವಿಷಯ ತಿಳಿದು ಜೋರಾಗಿ ಕೂಗಿಕೊಂಡಿದ್ದಾರೆ.

ವಿಷಯ ತಿಳಿದು ಗ್ರಾಮಸ್ಥರು, ಪೊಲೀಸರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಅಗ್ನಿ ಶಾಮಕ ದಳದ ಸಿಬ್ಬಂದಿ, ಈಜು ತಜ್ಞರ ಸಹಾಯದಿಂದ ಮೃತದೇಹವನ್ನು ಹೊರ ತೆಗೆದಿದ್ದು, ಸರಗೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಇರಿಸಲಾಗಿದೆ ಎಂದು ಅಪರಾಧ ವಿಭಾಗದ ಇನ್ಸ್ಪೆಕ್ಟರ್ ಗೋಪಾಲ್ ತಿಳಿಸಿದ್ದಾರೆ. ಈ ಕುರಿತು ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

andolana

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

9 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

9 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

9 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

9 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

10 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

10 hours ago