ಜಿಲ್ಲೆಗಳು

ಕುಟುಂಬ ವೈದ್ಯರ 3ನೇ ರಾಜ್ಯಮಟ್ಟದ ಸಮ್ಮೇಳನ

ಮೈಸೂರು: ಅಕಾಡೆಮಿ ಆಫ್ ಫ್ಯಾಮಿಲಿ ಫಿಸಿಶಿಯನ್ಸ್ ಆಫ್ ಇಂಡಿಯಾದ ವತಿಯಿಂದ ಡಿ.೧೦ ಮತ್ತು ೧೧ರಂದು ಮೈಸೂರಿನಲ್ಲಿ ೩ನೇ ರಾಜ್ಯಮಟ್ಟದ ಸಮ್ಮೇಳನ ಆಯೋಜಿಸಲಾಗಿದೆ ಎಂದು ಸಮ್ಮೇಳನದ ಸಂಯೋಜಕ ಡಾ.ರವಿಕುಮಾರ್ ಕುಲಕರ್ಣಿ ತಿಳಿಸಿದರು.

ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಎಸ್‌ಎಸ್ ಆಸ್ಪತ್ರೆಯ ಶ್ರೀ ಶಿವರಾತ್ರಿ ರಾಜೇಂದ್ರ ಶತಮಾನೋತ್ಸವ ಸಭಾಂಗಣದಲ್ಲಿ ಎರಡು ದಿನಗಳವರೆಗೆ ನಡೆಯಲಿರುವ ಸಮ್ಮೇಳನದಲ್ಲಿ ೨೦೦ಕ್ಕೂ ಹೆಚ್ಚು ವೈದ್ಯರು ಭಾಗವಹಿಸಲಿದ್ದಾರೆ. ವೈದ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ನೀತಿ ನಿರೂಪಕರುಗಳಿಗೆ ಗುಣಮಟ್ಟದ ಫ್ಯಾಮಿಲಿ ಮೆಡಿಸಿನ್ ಅಪ್‌ಡೇಟ್ ಆಗಿ ಕಾರ್ಯನಿರ್ವಹಿಸುತ್ತದೆ. ಉಪನ್ಯಾಸ, ಕಾರ್ಯಾಗಾರ, ರೋಲ್ ಪ್ಲೇ, ಪ್ಯಾನಲ್ ಚರ್ಚೆ, ರಸಪ್ರಶ್ನೆ ಮತ್ತು ನೀತಿ ಚರ್ಚೆಗಳು ನಡೆಯಲಿವೆ ಎಂದು ವಿವರಿಸಿದರು.

ಡಿ.೧೦ರಂದು ಮಧ್ಯಾಹ್ನ ೧೨ಕ್ಕೆ ಯುವ ವೈದ್ಯರ ಸಮಾವೇಶವನ್ನು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಕೆ.ರವಿ ಉದ್ಘಾಟಿಸಲಿದ್ದಾರೆ. ಜೆಎಸ್‌ಎಸ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಬಸವನಗೌಡಪ್ಪ, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ.ಕೆ.ಆರ್.ದಾಕ್ಷಾಯಿಣಿ, ಎಎಫ್‌ಪಿಐ ರಾಷ್ಟ್ರೀಯ ಅಧ್ಯಕ್ಷ ಡಾ.ರಮಣ ಕುಮಾರ್, ಚುನಾಯಿತ ಅಧ್ಯಕ್ಷ ಡಾ.ಮೋಹನ್ ಕುಬೇಂದ್ರ ಭಾಗವಹಿಸಲಿದ್ದಾರೆ. ಡಿ.೧೧ರಂದು ಮಧ್ಯಾಹ್ನ ೧೨ಕ್ಕೆ ೩ನೇ ರಾಜ್ಯಮಟ್ಟದ ಸಮ್ಮೇಳನವನ್ನು ಜೆಎಸ್‌ಎಸ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಸಿ.ಪಿ.ಮಧು ಉದ್ಘಾಟಿಸಲಿದ್ದು, ಡಾ.ಆರ್.ಬಾಲಸುಬ್ರಹ್ಮಣ್ಯಂ, ಡಾ.ಎಚ್.ಕೆ.ಪ್ರಸಾದ್, ಡಾ.ಕೆ.ನಾಗೇಂದ್ರ ಪ್ರಸಾದ್, ಡಾ.ವೈ.ಎಂ.ಶಿವಕುಮಾರ್, ಎಎಫ್‌ಪಿಐ ರಾಷ್ಟ್ರೀಯ ಅಧ್ಯಕ್ಷ ಡಾ.ರಮಣ ಕುಮಾರ್ ಭಾಗವಹಿಸಲಿದ್ದಾರೆ ಎಂದು ಹೇಳಿದರು. ಸಂಘದ ಕಾರ್ಯದರ್ಶಿ ಡಾ.ಜಿ.ಎನ್.ಇಂಪನ, ಖಜಾಂಚಿ ಡಾ.ವೀಣಾ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

 

 

andolana

Recent Posts

ಹಿರಿಯ ಪತ್ರಕರ್ತ ರಾಜಕುಮಾರ್‌ ಬಾಹುಸಾರ್‌ ಇನ್ನಿಲ್ಲ

ಮೈಸೂರು : ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಪತ್ರಕರ್ತ ರಾಜಕುಮಾರ್ ಬಾಹುಸಾರ್(64) ಅವರು ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಸಂಜೆ…

40 mins ago

ಬಹುಮಹಡಿ ಕಟ್ಟಡ, ಮನೆ ನಿರ್ಮಾಣಕ್ಕೆ ಕಡಿವಾಣ ಹಾಕಿ : ಚಾಮುಂಡಿಬೆಟ್ಟ ಸಂರಕ್ಷಣೆಗಾಗಿ ನಾಗರಿಕರ ಆಗ್ರಹ

ಮೈಸೂರು : ಚಾಮುಂಡಿ ಬೆಟ್ಟ ಉಳಿಸಿ ಎಂಬ ಆಶಯದಲ್ಲಿ ಹಲವು ಸಂಘಟನೆಗಳು ಹಾಗೂ ನಾಗರಿಕರು ಸೇರಿ ‘ಚಾಮುಂಡಿಬೆಟ್ಟ ಸಂರಕ್ಷಣೆಗಾಗಿ ನಡಿಗೆ’…

2 hours ago

ಬೆಂಗಳೂರು ಅಭಿವೃದ್ಧಿಗೆ 1.5 ಲಕ್ಷ ಕೋಟಿ ರೂ ಹೂಡಿಕೆ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಬೆಂಗಳೂರು ನಗರದ ಜನಸಂಖ್ಯೆ ಮುಂದಿನ 20 ರಿಂದ 25 ವರ್ಷಗಳಲ್ಲಿನ ದ್ವಿಗುಣಗೊಳ್ಳಲಿದ್ದು, ನಗರದ ಮೂಲ ಸೌಕರ್ಯ ಕೊರತೆ…

2 hours ago

ಮೈಸೂರು | ರೈಲಿಗೆ ತಲೆಕೊಟ್ಟು ನಿವೃತ್ತ ಎಎಸ್‌ಐ ಸಾವು

ಮೈಸೂರು : ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಕುಕ್ಕರಹಳ್ಳಿ ರೈಲ್ವೆ ಗೇಟ್‌ ಬಳಿ ನಡೆದಿದೆ.ಜ…

3 hours ago

ರಂಜಿತಾ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ : ಕಾಡಿನಲ್ಲಿ ಆರೋಪಿ ಶವ ಪತ್ತೆ!

ಶಿರಸಿ : ಇಲ್ಲಿನ ಯಲ್ಲಾಪುರದಲ್ಲಿ ನಡೆದ ವಿವಾಹಿತೆ ರಂಜಿತಾ ಹತ್ಯೆ ಕೇಸ್‌ಗೆ ಬಿಗ್‌ ಟ್ವೀಸ್ಟ್‌ ಸಿಕ್ಕಿದ್ದು, ಹತ್ಯೆ ಆರೋಪಿ ರಫೀಕ್‌…

3 hours ago

ಸಮುದಾಯದ ಸಂಘಟನೆ ಅಗತ್ಯ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಿಂದುಳಿದವರು ಸಂಘಟಿಸಿದರೆ ಜಾತೀಯತೆಯಾಗುವುದಿಲ್ಲ. ಉಪಜಾತಿಗಳಲ್ಲಿ ವಿಭಜಿಸದೇ ಒಂದೇ ಶಕ್ತಿಯಾಗಿ ಸಂಘಟಿತರಾಗಿ ಎಂದು ಸಮುದಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ…

3 hours ago