ಜಿಲ್ಲೆಗಳು

ಕುಟುಂಬ ವೈದ್ಯರ 3ನೇ ರಾಜ್ಯಮಟ್ಟದ ಸಮ್ಮೇಳನ

ಮೈಸೂರು: ಅಕಾಡೆಮಿ ಆಫ್ ಫ್ಯಾಮಿಲಿ ಫಿಸಿಶಿಯನ್ಸ್ ಆಫ್ ಇಂಡಿಯಾದ ವತಿಯಿಂದ ಡಿ.೧೦ ಮತ್ತು ೧೧ರಂದು ಮೈಸೂರಿನಲ್ಲಿ ೩ನೇ ರಾಜ್ಯಮಟ್ಟದ ಸಮ್ಮೇಳನ ಆಯೋಜಿಸಲಾಗಿದೆ ಎಂದು ಸಮ್ಮೇಳನದ ಸಂಯೋಜಕ ಡಾ.ರವಿಕುಮಾರ್ ಕುಲಕರ್ಣಿ ತಿಳಿಸಿದರು.

ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಎಸ್‌ಎಸ್ ಆಸ್ಪತ್ರೆಯ ಶ್ರೀ ಶಿವರಾತ್ರಿ ರಾಜೇಂದ್ರ ಶತಮಾನೋತ್ಸವ ಸಭಾಂಗಣದಲ್ಲಿ ಎರಡು ದಿನಗಳವರೆಗೆ ನಡೆಯಲಿರುವ ಸಮ್ಮೇಳನದಲ್ಲಿ ೨೦೦ಕ್ಕೂ ಹೆಚ್ಚು ವೈದ್ಯರು ಭಾಗವಹಿಸಲಿದ್ದಾರೆ. ವೈದ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ನೀತಿ ನಿರೂಪಕರುಗಳಿಗೆ ಗುಣಮಟ್ಟದ ಫ್ಯಾಮಿಲಿ ಮೆಡಿಸಿನ್ ಅಪ್‌ಡೇಟ್ ಆಗಿ ಕಾರ್ಯನಿರ್ವಹಿಸುತ್ತದೆ. ಉಪನ್ಯಾಸ, ಕಾರ್ಯಾಗಾರ, ರೋಲ್ ಪ್ಲೇ, ಪ್ಯಾನಲ್ ಚರ್ಚೆ, ರಸಪ್ರಶ್ನೆ ಮತ್ತು ನೀತಿ ಚರ್ಚೆಗಳು ನಡೆಯಲಿವೆ ಎಂದು ವಿವರಿಸಿದರು.

ಡಿ.೧೦ರಂದು ಮಧ್ಯಾಹ್ನ ೧೨ಕ್ಕೆ ಯುವ ವೈದ್ಯರ ಸಮಾವೇಶವನ್ನು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಕೆ.ರವಿ ಉದ್ಘಾಟಿಸಲಿದ್ದಾರೆ. ಜೆಎಸ್‌ಎಸ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಬಸವನಗೌಡಪ್ಪ, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ.ಕೆ.ಆರ್.ದಾಕ್ಷಾಯಿಣಿ, ಎಎಫ್‌ಪಿಐ ರಾಷ್ಟ್ರೀಯ ಅಧ್ಯಕ್ಷ ಡಾ.ರಮಣ ಕುಮಾರ್, ಚುನಾಯಿತ ಅಧ್ಯಕ್ಷ ಡಾ.ಮೋಹನ್ ಕುಬೇಂದ್ರ ಭಾಗವಹಿಸಲಿದ್ದಾರೆ. ಡಿ.೧೧ರಂದು ಮಧ್ಯಾಹ್ನ ೧೨ಕ್ಕೆ ೩ನೇ ರಾಜ್ಯಮಟ್ಟದ ಸಮ್ಮೇಳನವನ್ನು ಜೆಎಸ್‌ಎಸ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಸಿ.ಪಿ.ಮಧು ಉದ್ಘಾಟಿಸಲಿದ್ದು, ಡಾ.ಆರ್.ಬಾಲಸುಬ್ರಹ್ಮಣ್ಯಂ, ಡಾ.ಎಚ್.ಕೆ.ಪ್ರಸಾದ್, ಡಾ.ಕೆ.ನಾಗೇಂದ್ರ ಪ್ರಸಾದ್, ಡಾ.ವೈ.ಎಂ.ಶಿವಕುಮಾರ್, ಎಎಫ್‌ಪಿಐ ರಾಷ್ಟ್ರೀಯ ಅಧ್ಯಕ್ಷ ಡಾ.ರಮಣ ಕುಮಾರ್ ಭಾಗವಹಿಸಲಿದ್ದಾರೆ ಎಂದು ಹೇಳಿದರು. ಸಂಘದ ಕಾರ್ಯದರ್ಶಿ ಡಾ.ಜಿ.ಎನ್.ಇಂಪನ, ಖಜಾಂಚಿ ಡಾ.ವೀಣಾ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

 

 

andolana

Recent Posts

ಮಹಿಳೆ ಮೇಲೆ ಹಲ್ಲೆ, ದೌರ್ಜನ್ಯ : ಆರೋಪಿ ಬಂಧನಕ್ಕೆ ದಸಂಸ ಆಗ್ರಹ

ಮಂಡ್ಯ : ತಾಲ್ಲೂಕಿನ ಕಚ್ಚಿಗೆರೆ ಗ್ರಾಮದ ದಲಿತ ಮಹಿಳೆ ರಜನಿ ಎಂಬವರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿರುವ ಆರೋಪಿಗಳನ್ನು…

46 mins ago

ಉತ್ತಮ ಕೃಷಿಗೆ ಜೈವಿಕ ಗೊಬ್ಬರ ಬಳಸಿ : ತೋಟಗಾರಿಕೆ ವಿ.ವಿ ಕುಲಪತಿ ವಿಷ್ಣವರ್ಧನ ಸಲಹೆ

ಮೈಸೂರು : ಕೃಷಿ ಪದ್ಧತಿಯಲ್ಲಿ ರಾಸಾಯನಿಕ ಗೊಬ್ಬರದ ಬಳಕೆ ಕಡಿಮೆ ಮಾಡಿ ಹಸಿರೆಲೆ ಹಾಗೂ ಜೈವಿಕ ಗೊಬ್ಬರಗಳನ್ನು ಸರಿಯಾದ ರೀತಿಯಲ್ಲಿ…

52 mins ago

ರಂಗಭೂಮಿ ಧರ್ಮಾತೀತ,ಜಾತ್ಯತೀತವಾದದ್ದು : ಹಿರಿಯ ರಂಗಕರ್ಮಿ ಸಿ.ಬಸವಲಿಂಗಯ್ಯ ಬಣ್ಣನೆ

ಮೈಸೂರು : ರಂಗಭೂಮಿ ಎಂಬುದು ಧರ್ಮಾತೀತ, ಜಾತ್ಯತೀತ ಅಲ್ಲದೇ ದೇಶಾತೀತ ಎಂದು ಹಿರಿಯ ರಂಗಕರ್ಮಿ ಸಿ.ಬಸವಲಿಂಗಯ್ಯ ಬಣ್ಣಿಸಿದರು. ನಗರದ ಜೆಎಲ್‌ಬಿ…

1 hour ago

ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿ : ರಘುನಾಥ್‌ ಚ.ಹ, ಪ್ರಕಾಶ್‌ರಾಜ್‌ ಕೃತಿ ಆಯ್ಕೆ

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2020 ಹಾಗೂ 2021ನೇ ಸಾಲಿನ ರಾಜ್ಯ ಚಲನಚಿತ್ರ ವಾರ್ಷಿಕ ಸಾಹಿತ್ಯ…

2 hours ago

ಕೊಲೆ ಪ್ರಕರಣ | ಪವಿತ್ರಾ ಗೌಡಗೆ ಕೊನೆಗೂ ಸಿಕ್ತು ಗುಡ್‌ ನ್ಯೂಸ್‌

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡಗೆ ಮನೆಯಿಂದ ಊಟ ತರಿಸಿಕೊಳ್ಳಲು ಅಂತಿಮವಾಗಿ…

3 hours ago

ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ : ತಂದೆ ನೆನೆದು ಸಚಿವ ಖಂಡ್ರೆ ಭಾವುಕ

ಬೀದರ್:‌ ನಮ್ಮ ತಂದೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಸತತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ…

4 hours ago