ಜಿಲ್ಲೆಗಳು

ಕುಟುಂಬ ವೈದ್ಯರ 3ನೇ ರಾಜ್ಯಮಟ್ಟದ ಸಮ್ಮೇಳನ

ಮೈಸೂರು: ಅಕಾಡೆಮಿ ಆಫ್ ಫ್ಯಾಮಿಲಿ ಫಿಸಿಶಿಯನ್ಸ್ ಆಫ್ ಇಂಡಿಯಾದ ವತಿಯಿಂದ ಡಿ.೧೦ ಮತ್ತು ೧೧ರಂದು ಮೈಸೂರಿನಲ್ಲಿ ೩ನೇ ರಾಜ್ಯಮಟ್ಟದ ಸಮ್ಮೇಳನ ಆಯೋಜಿಸಲಾಗಿದೆ ಎಂದು ಸಮ್ಮೇಳನದ ಸಂಯೋಜಕ ಡಾ.ರವಿಕುಮಾರ್ ಕುಲಕರ್ಣಿ ತಿಳಿಸಿದರು.

ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಎಸ್‌ಎಸ್ ಆಸ್ಪತ್ರೆಯ ಶ್ರೀ ಶಿವರಾತ್ರಿ ರಾಜೇಂದ್ರ ಶತಮಾನೋತ್ಸವ ಸಭಾಂಗಣದಲ್ಲಿ ಎರಡು ದಿನಗಳವರೆಗೆ ನಡೆಯಲಿರುವ ಸಮ್ಮೇಳನದಲ್ಲಿ ೨೦೦ಕ್ಕೂ ಹೆಚ್ಚು ವೈದ್ಯರು ಭಾಗವಹಿಸಲಿದ್ದಾರೆ. ವೈದ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ನೀತಿ ನಿರೂಪಕರುಗಳಿಗೆ ಗುಣಮಟ್ಟದ ಫ್ಯಾಮಿಲಿ ಮೆಡಿಸಿನ್ ಅಪ್‌ಡೇಟ್ ಆಗಿ ಕಾರ್ಯನಿರ್ವಹಿಸುತ್ತದೆ. ಉಪನ್ಯಾಸ, ಕಾರ್ಯಾಗಾರ, ರೋಲ್ ಪ್ಲೇ, ಪ್ಯಾನಲ್ ಚರ್ಚೆ, ರಸಪ್ರಶ್ನೆ ಮತ್ತು ನೀತಿ ಚರ್ಚೆಗಳು ನಡೆಯಲಿವೆ ಎಂದು ವಿವರಿಸಿದರು.

ಡಿ.೧೦ರಂದು ಮಧ್ಯಾಹ್ನ ೧೨ಕ್ಕೆ ಯುವ ವೈದ್ಯರ ಸಮಾವೇಶವನ್ನು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಕೆ.ರವಿ ಉದ್ಘಾಟಿಸಲಿದ್ದಾರೆ. ಜೆಎಸ್‌ಎಸ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಬಸವನಗೌಡಪ್ಪ, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ.ಕೆ.ಆರ್.ದಾಕ್ಷಾಯಿಣಿ, ಎಎಫ್‌ಪಿಐ ರಾಷ್ಟ್ರೀಯ ಅಧ್ಯಕ್ಷ ಡಾ.ರಮಣ ಕುಮಾರ್, ಚುನಾಯಿತ ಅಧ್ಯಕ್ಷ ಡಾ.ಮೋಹನ್ ಕುಬೇಂದ್ರ ಭಾಗವಹಿಸಲಿದ್ದಾರೆ. ಡಿ.೧೧ರಂದು ಮಧ್ಯಾಹ್ನ ೧೨ಕ್ಕೆ ೩ನೇ ರಾಜ್ಯಮಟ್ಟದ ಸಮ್ಮೇಳನವನ್ನು ಜೆಎಸ್‌ಎಸ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಸಿ.ಪಿ.ಮಧು ಉದ್ಘಾಟಿಸಲಿದ್ದು, ಡಾ.ಆರ್.ಬಾಲಸುಬ್ರಹ್ಮಣ್ಯಂ, ಡಾ.ಎಚ್.ಕೆ.ಪ್ರಸಾದ್, ಡಾ.ಕೆ.ನಾಗೇಂದ್ರ ಪ್ರಸಾದ್, ಡಾ.ವೈ.ಎಂ.ಶಿವಕುಮಾರ್, ಎಎಫ್‌ಪಿಐ ರಾಷ್ಟ್ರೀಯ ಅಧ್ಯಕ್ಷ ಡಾ.ರಮಣ ಕುಮಾರ್ ಭಾಗವಹಿಸಲಿದ್ದಾರೆ ಎಂದು ಹೇಳಿದರು. ಸಂಘದ ಕಾರ್ಯದರ್ಶಿ ಡಾ.ಜಿ.ಎನ್.ಇಂಪನ, ಖಜಾಂಚಿ ಡಾ.ವೀಣಾ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

 

 

andolana

Recent Posts

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

3 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

3 hours ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

3 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಮೂಳೆಗಳು ಮುರಿಯುತ್ತಿದ್ದರೂ ಬದುಕು ಕಟ್ಟಿಕೊಂಡ ರಾಧಿಕಾ

ಪಂಜುಗಂಗೊಳ್ಳಿ  ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…

3 hours ago

ಪಣ್ಣೇದೊಡ್ಡಿ ಡೇರಿ ಆಡಳಿತ-ಹಾಲು ಉತ್ಪಾದಕರ ಮಾರಾಮಾರಿ

ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…

3 hours ago