ಜಿಲ್ಲೆಗಳು

ಡಿ.3ರಂದು ಶರಣ ಸಾಹಿತ್ಯ ಪರಿಷತ್‌ ವತಿಯಿಂದ ಪ್ರಶಸ್ತಿ, ಪ್ರತಿಭಾ ಪುರಸ್ಕಾರ ಪ್ರದಾನ

ಸುದ್ದಿಗೋಷ್ಠಿಯಲ್ಲಿ ವಿ.ಮಲ್ಲಿಕಾರ್ಜುನಸ್ವಾಮಿ ದುಗ್ಗಹಟ್ಟಿ ವಿವರಣೆ

ಚಾಮರಾಜನಗರ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವತಿಯಿಂದ ಶ್ರೀ ಶಿವರಾತ್ರಿ ರಾಜೇಂದ್ರ ಸೇವಾ ಪ್ರಶಸ್ತಿ, ಕೆ.ಸಿ.ಚಿಕ್ಕವೀರಯ್ಯ ಶಿಕ್ಷಕ ಪ್ರಶಸ್ತಿ, ಕೆ.ಸಿ.ಶಿವಪ್ಪ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭವನ್ನು ಡಿ.೩ ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್‌ನ ಜಿಲ್ಲಾಧ್ಯಕ್ಷ ವಿ.ಮಲ್ಲಿಕಾರ್ಜುನಸ್ವಾಮಿ ದುಗ್ಗಹಟ್ಟಿ ಅವರು ತಿಳಿಸಿದರು.
ಅಮೇರಿಕಾದದಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿರುವ ರವಿಕಾಗಲವಾಡಿ ಅವರು ತಮ್ಮ ತಂದೆ ಹಾಗೂ ತಾಲ್ಲೂಕಿನ ಕಾಗಲವಾಡಿ ಗ್ರಾಮದವರಾದ ಸಾಹಿತಿ ಕೆ.ಸಿ.ಶಿವಪ್ಪ ಹೆಸರಿನಲ್ಲಿ ದತ್ತಿಯನ್ನು ಸ್ಥಾಪಿಸಲು ಶರಣ ಸಾಹಿತ್ಯ ಪರಿಷತ್‌ಗೆ ೮ ಲಕ್ಷ ರೂ. ನೀಡಿದ್ದಾರೆ. ಇದರ ಬಡ್ಡಿ ಹಣದಿಂದ ೩ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಶ್ರೀ ಶಿವರಾತ್ರಿ ರಾಜೇಂದ್ರ ಸೇವಾ ಪ್ರಶಸ್ತಿಯನ್ನು ಜಿಲ್ಲೆಯಲ್ಲಿ ಶೈಕ್ಷಣಿಕ, ಸಾಂಸ್ಕೃತಿಕ, ಆಧ್ಯಾತ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ನೀಡಲಾಗುತ್ತದೆ. ಈ ಬಾರಿ ಪ್ರಶಸ್ತಿಗೆ ಬಡ ಮಕ್ಕಳ ಬಾಳಿಗೆ ಬೆಳಕಾಗಿರುವ ದೀನಬಂಧು ಸಂಸ್ಥೆಯ ಜಿ.ಎಸ್.ಜಯದೇವ ಅವರನ್ನು ಆಯ್ಕೆ ಮಾಡಲಾಗಿದೆ ಎಂದರು.
ಸಾಹಿತಿ ಕೆ.ಸಿ.ಶಿವಪ್ಪ ಅವರ ತಂದೆಯಾದ ಕೆ.ಪಿ.ಚಿಕ್ಕವೀರಯ್ಯ ಅವರು ಜಿಲ್ಲೆಯ ಶಾಲೆಗಳಲ್ಲಿ ೩೫ ವರ್ಷ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಹೆಸರಿನಲ್ಲಿ ಕೆ.ಸಿ.ಚಿಕ್ಕವೀರಯ್ಯ ಶಿಕ್ಷಕ ಪ್ರಶಸ್ತಿಯನ್ನು ಶಿವಪ್ಪ ಸ್ಥಾಪಿಸಿದ್ದಾರೆ. ೩ ದಶಕಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿ ವಿದ್ಯಾರ್ಥಿಗಳು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿರುವ ಹೊಂಗಳ್ಳಿ ಶಾಲೆಯ ಮುಖ್ಯ ಶಿಕ್ಷಕ ಬಿ.ಮಹದೇಶ್ವರಸ್ವಾಮಿ ಅವರನ್ನು ಈ ಪ್ರಶಸ್ತಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ಶಾಲೆಗಳಲ್ಲಿ ಚೆನ್ನಾಗಿ ಓದಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಕೆ.ಸಿ.ಶಿವಪ್ಪ ಪ್ರತಿಭಾ ಪುರಸ್ಕಾರ ಪ್ರಶಸ್ತಿಯನ್ನು ನೀಡಲಾಗುವುದು. ಕಳೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೬೨೧ ಅಂಕಗಳಿಸಿದ ಕಲ್ಪುರ ಗ್ರಾಮದ ವಿದ್ಯಾರ್ಥಿನಿ ಸ್ಪೂರ್ತಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.
ಡಿ.೩ ರಂದು ಸಂಜೆ ೫ ಗಂಟೆಗೆ ನಗರದ ಜೆಎಸ್‌ಎಸ್ ಕಾಲೇಜು ಸಭಾಂಗಣದಲ್ಲಿ ಸಮಾರಂಭವು ನಡೆಯಲಿದ್ದು, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಮುಕ್ತಿದಾನಂದಜಿ ಮಹರಾಜ್ ಸಾನಿಧ್ಯ ವಹಿಸುವರು. ಪರಿಷತ್‌ನ ಅಧ್ಯಕ್ಷ ಮಲೆಯೂರು ಗುರುಸ್ವಾಮಿ ಅಧ್ಯಕ್ಷತೆ ವಹಿಸುವರು ಎಂದರು.
ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್, ಖ್ಯಾತ ವಾಗ್ಮಿ ಪ್ರೊ.ಎಂ.ಕೃಷ್ಣೇಗೌಡ, ಆಧ್ಯಾತ್ಮ ಚಿಂತಕ ಶಂಕರದೇವನೂರು ಅತಿಥಿಗಳಾಗಿ ಭಾಗವಹಿಸುವರು. ದತ್ತಿ ಪ್ರಾಯೋಜಕರಾದ ಕೆ.ಸಿ.ಶಿವಪ್ಪ ಉಪಸ್ಥಿತರಿರುವರು ಎಂದು ತಿಳಿಸಿದರು.

andolanait

Recent Posts

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ಇ.ಡಿ ದಾಳಿ

ತಿರುವನಂತಪುರ: ಸಿಎಂಆರ್‌ಎಲ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…

29 mins ago

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುವ…

1 hour ago

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

5 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಆಸಿಡ್ ದಾಳಿಯ ಸಂತ್ರಸ್ತೆಯರನ್ನು ಸಂತೈಸುವ ‘ದಿ ನೆಸ್ಟ್ ಸಲೂನ್’

ಬ್ಯೂಟಿ ಪಾರ್ಲರ್‌ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…

5 hours ago

ಜಿರಳೆಗಳು ಎದ್ದಿವೆ, ವ್ಯವಸ್ಥೆಯ ಗಟಾರ ತೊಳೆಯುವವರು ಯಾರು?

ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ  ಹಿಡಿದ…

5 hours ago

ಅಕಾಲಿಕ ಮಳೆ; ಮಾವು ಇಳುವರಿ ಕುಂಠಿತ

ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ…

5 hours ago