ಜಿಲ್ಲೆಗಳು

ಡಿ.24ರಿಂದ ವೀರಶೈವ-ಲಿಂಗಾಯತ ಮಹಾಸಭಾದ 23ನೇ ಮಹಾ ಅಧಿವೇಶನ

ಸುದ್ದಿಗೋಷ್ಠಿಯಲ್ಲಿ ಎಚ್.ಎಂ.ರೇಣುಕಪ್ರಸನ್ನ ವಿವರಣೆ

ಚಾಮರಾಜನಗರ: ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ೨೩ನೇ ಮಹಾ ಅಧಿವೇಶನವನ್ನು ಡಿ.೨೪ ರಿಂದ ೨೬ ರವರೆಗೆ ದಾವಣಗೆರೆಯ ಎಂ.ಬಿ.ವಿ. ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಎಚ್.ಎಂ.ರೇಣುಕಪ್ರಸನ್ನ ತಿಳಿಸಿದರು.
ಮಹಾಸಭಾದ ರಾಜ್ಯಾಧ್ಯಕ್ಷ ಶ್ಯಾಮನೂರು ಶಿವಶಂಕರಪ್ಪ ಅವರು ಅಧಿವೇಶನದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸುವರು. ರಾಷ್ಟçಪತಿ ದ್ರೌಪದಿ ಮುರ್ಮು ಅವರು ಭಾಗವಹಿಸುವ ನಿರೀಕ್ಷೆಯಿದೆ. ಅಲ್ಲದೆ ನಾಡಿನ ಸ್ವಾಮೀಜಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಮಹಾ ಅಧಿವೇಶನದಲ್ಲಿ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಕೃಷಿ, ಕೈಗಾರಿಕೆ, ವಾಣಿಜ್ಯ, ಮಹಿಳಾ ಮತ್ತು ಯುವ ಅಧಿವೇಶನಗಳು ನಡೆಯಲಿವೆ. ಇದೇ ಮೊದಲ ಬಾರಿಗೆ ವೀರಶೈವ-ಲಿಂಗಾಯತ ನೌಕರರ ಅಧಿವೇಶನ ಏರ್ಪಡಿಸಲಾಗಿದೆ. ಸಾಂಸ್ಕೃತಿಕ ಪರಂಪರೆ, ಸಾಹಿತ್ಯ, ಕವಿಗೋಷ್ಠಿಗಳು ಹಾಗೂ ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಮಹಾಸಭಾದ ದಾವಣಗೆರೆ ಜಿಲ್ಲಾ ಘಟಕವು ಅಧಿವೇಶನದ ಆತಿಥ್ಯ ವಹಿಸಲಿದ್ದು, ಸುತ್ತಲಿನ ೫ ಜಿಲ್ಲಾ ಘಟಕಗಳು ಸಹಕಾರ ನೀಡಲಿವೆ. ೩ ದಿನಗಳ ಅಧಿವೇಶನದಲ್ಲಿ ೧.೫೦ ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಈಗಾಗಲೇ ಅಧಿವೇಶನದಲ್ಲಿ ಪಾಲ್ಗೊಳ್ಳುವರನ್ನು ನೋಂದಣಿ ಮಾಡುವ ಕಾರ್ಯ ಶುರುವಾಗಿದೆ. ಆಸಕ್ತರು ಆಯಾಯ ಜಿಲ್ಲಾ ಘಟಕಗಳ ಮೂಲಕ ಹೆಸರು ನೋಂದಾಯಿಸಬೇಕು.
ಪಾಲ್ಗೊಳ್ಳುವವರಿಗೆ ಊಟ, ವಸತಿ ಸೌಲಭ್ಯ ಕಲ್ಪಿಸಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ನೋಂದಣಿ ಆರಂಭಿಸಲಾಗಿದೆ ಎಂದರು.
ಮಹಾಸಭಾದ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್ ಮಾತನಾಡಿ, ಅಧಿವೇಶನಕ್ಕೆ ಜಿಲ್ಲೆಯಿಂದ ೫ ಸಾವಿರ ಜನರನ್ನು ಕಳುಹಿಸಲು ಉದ್ದೇಶಿಸಲಾಗಿದೆ. ಆಸಕ್ತರು ಮಹಾಸಭಾವನ್ನು ಸಂಪರ್ಕಿಸಬಹುದು ಎಂದು ಕೋರಿದರು.

andolanait

Recent Posts

ಜೂ.20ರಿಂದ ಎಸ್‌ಐಆರ್; ಮತದಾರರಲ್ಲಿ ಇರಲಿ ಜಾಗ್ರತೆ

ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್‌ಒಗಳು ಮೈಸೂರು:ಕಳೆದ ಎಲೆಕ್ಷನ್‌ನಲ್ಲಿ ಇದೇ ಬೂತ್‌ನಲ್ಲಿ ವೋಟ್ ಮಾಡಿದ್ದೆ,…

10 mins ago

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

12 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

13 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

14 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

14 hours ago