ಜಿಲ್ಲೆಗಳು

ಡಿ.24ರಿಂದ ವೀರಶೈವ-ಲಿಂಗಾಯತ ಮಹಾಸಭಾದ 23ನೇ ಮಹಾ ಅಧಿವೇಶನ

ಸುದ್ದಿಗೋಷ್ಠಿಯಲ್ಲಿ ಎಚ್.ಎಂ.ರೇಣುಕಪ್ರಸನ್ನ ವಿವರಣೆ

ಚಾಮರಾಜನಗರ: ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ೨೩ನೇ ಮಹಾ ಅಧಿವೇಶನವನ್ನು ಡಿ.೨೪ ರಿಂದ ೨೬ ರವರೆಗೆ ದಾವಣಗೆರೆಯ ಎಂ.ಬಿ.ವಿ. ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಎಚ್.ಎಂ.ರೇಣುಕಪ್ರಸನ್ನ ತಿಳಿಸಿದರು.
ಮಹಾಸಭಾದ ರಾಜ್ಯಾಧ್ಯಕ್ಷ ಶ್ಯಾಮನೂರು ಶಿವಶಂಕರಪ್ಪ ಅವರು ಅಧಿವೇಶನದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸುವರು. ರಾಷ್ಟçಪತಿ ದ್ರೌಪದಿ ಮುರ್ಮು ಅವರು ಭಾಗವಹಿಸುವ ನಿರೀಕ್ಷೆಯಿದೆ. ಅಲ್ಲದೆ ನಾಡಿನ ಸ್ವಾಮೀಜಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಮಹಾ ಅಧಿವೇಶನದಲ್ಲಿ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಕೃಷಿ, ಕೈಗಾರಿಕೆ, ವಾಣಿಜ್ಯ, ಮಹಿಳಾ ಮತ್ತು ಯುವ ಅಧಿವೇಶನಗಳು ನಡೆಯಲಿವೆ. ಇದೇ ಮೊದಲ ಬಾರಿಗೆ ವೀರಶೈವ-ಲಿಂಗಾಯತ ನೌಕರರ ಅಧಿವೇಶನ ಏರ್ಪಡಿಸಲಾಗಿದೆ. ಸಾಂಸ್ಕೃತಿಕ ಪರಂಪರೆ, ಸಾಹಿತ್ಯ, ಕವಿಗೋಷ್ಠಿಗಳು ಹಾಗೂ ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಮಹಾಸಭಾದ ದಾವಣಗೆರೆ ಜಿಲ್ಲಾ ಘಟಕವು ಅಧಿವೇಶನದ ಆತಿಥ್ಯ ವಹಿಸಲಿದ್ದು, ಸುತ್ತಲಿನ ೫ ಜಿಲ್ಲಾ ಘಟಕಗಳು ಸಹಕಾರ ನೀಡಲಿವೆ. ೩ ದಿನಗಳ ಅಧಿವೇಶನದಲ್ಲಿ ೧.೫೦ ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಈಗಾಗಲೇ ಅಧಿವೇಶನದಲ್ಲಿ ಪಾಲ್ಗೊಳ್ಳುವರನ್ನು ನೋಂದಣಿ ಮಾಡುವ ಕಾರ್ಯ ಶುರುವಾಗಿದೆ. ಆಸಕ್ತರು ಆಯಾಯ ಜಿಲ್ಲಾ ಘಟಕಗಳ ಮೂಲಕ ಹೆಸರು ನೋಂದಾಯಿಸಬೇಕು.
ಪಾಲ್ಗೊಳ್ಳುವವರಿಗೆ ಊಟ, ವಸತಿ ಸೌಲಭ್ಯ ಕಲ್ಪಿಸಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ನೋಂದಣಿ ಆರಂಭಿಸಲಾಗಿದೆ ಎಂದರು.
ಮಹಾಸಭಾದ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್ ಮಾತನಾಡಿ, ಅಧಿವೇಶನಕ್ಕೆ ಜಿಲ್ಲೆಯಿಂದ ೫ ಸಾವಿರ ಜನರನ್ನು ಕಳುಹಿಸಲು ಉದ್ದೇಶಿಸಲಾಗಿದೆ. ಆಸಕ್ತರು ಮಹಾಸಭಾವನ್ನು ಸಂಪರ್ಕಿಸಬಹುದು ಎಂದು ಕೋರಿದರು.

andolanait

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

2 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

2 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

2 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

2 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

2 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago