ಜಿಲ್ಲೆಗಳು

ಡಿ.24ರಿಂದ ವೀರಶೈವ-ಲಿಂಗಾಯತ ಮಹಾಸಭಾದ 23ನೇ ಮಹಾ ಅಧಿವೇಶನ

ಸುದ್ದಿಗೋಷ್ಠಿಯಲ್ಲಿ ಎಚ್.ಎಂ.ರೇಣುಕಪ್ರಸನ್ನ ವಿವರಣೆ

ಚಾಮರಾಜನಗರ: ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ೨೩ನೇ ಮಹಾ ಅಧಿವೇಶನವನ್ನು ಡಿ.೨೪ ರಿಂದ ೨೬ ರವರೆಗೆ ದಾವಣಗೆರೆಯ ಎಂ.ಬಿ.ವಿ. ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಎಚ್.ಎಂ.ರೇಣುಕಪ್ರಸನ್ನ ತಿಳಿಸಿದರು.
ಮಹಾಸಭಾದ ರಾಜ್ಯಾಧ್ಯಕ್ಷ ಶ್ಯಾಮನೂರು ಶಿವಶಂಕರಪ್ಪ ಅವರು ಅಧಿವೇಶನದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸುವರು. ರಾಷ್ಟçಪತಿ ದ್ರೌಪದಿ ಮುರ್ಮು ಅವರು ಭಾಗವಹಿಸುವ ನಿರೀಕ್ಷೆಯಿದೆ. ಅಲ್ಲದೆ ನಾಡಿನ ಸ್ವಾಮೀಜಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಮಹಾ ಅಧಿವೇಶನದಲ್ಲಿ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಕೃಷಿ, ಕೈಗಾರಿಕೆ, ವಾಣಿಜ್ಯ, ಮಹಿಳಾ ಮತ್ತು ಯುವ ಅಧಿವೇಶನಗಳು ನಡೆಯಲಿವೆ. ಇದೇ ಮೊದಲ ಬಾರಿಗೆ ವೀರಶೈವ-ಲಿಂಗಾಯತ ನೌಕರರ ಅಧಿವೇಶನ ಏರ್ಪಡಿಸಲಾಗಿದೆ. ಸಾಂಸ್ಕೃತಿಕ ಪರಂಪರೆ, ಸಾಹಿತ್ಯ, ಕವಿಗೋಷ್ಠಿಗಳು ಹಾಗೂ ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಮಹಾಸಭಾದ ದಾವಣಗೆರೆ ಜಿಲ್ಲಾ ಘಟಕವು ಅಧಿವೇಶನದ ಆತಿಥ್ಯ ವಹಿಸಲಿದ್ದು, ಸುತ್ತಲಿನ ೫ ಜಿಲ್ಲಾ ಘಟಕಗಳು ಸಹಕಾರ ನೀಡಲಿವೆ. ೩ ದಿನಗಳ ಅಧಿವೇಶನದಲ್ಲಿ ೧.೫೦ ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಈಗಾಗಲೇ ಅಧಿವೇಶನದಲ್ಲಿ ಪಾಲ್ಗೊಳ್ಳುವರನ್ನು ನೋಂದಣಿ ಮಾಡುವ ಕಾರ್ಯ ಶುರುವಾಗಿದೆ. ಆಸಕ್ತರು ಆಯಾಯ ಜಿಲ್ಲಾ ಘಟಕಗಳ ಮೂಲಕ ಹೆಸರು ನೋಂದಾಯಿಸಬೇಕು.
ಪಾಲ್ಗೊಳ್ಳುವವರಿಗೆ ಊಟ, ವಸತಿ ಸೌಲಭ್ಯ ಕಲ್ಪಿಸಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ನೋಂದಣಿ ಆರಂಭಿಸಲಾಗಿದೆ ಎಂದರು.
ಮಹಾಸಭಾದ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್ ಮಾತನಾಡಿ, ಅಧಿವೇಶನಕ್ಕೆ ಜಿಲ್ಲೆಯಿಂದ ೫ ಸಾವಿರ ಜನರನ್ನು ಕಳುಹಿಸಲು ಉದ್ದೇಶಿಸಲಾಗಿದೆ. ಆಸಕ್ತರು ಮಹಾಸಭಾವನ್ನು ಸಂಪರ್ಕಿಸಬಹುದು ಎಂದು ಕೋರಿದರು.

andolanait

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

5 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

7 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

9 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

9 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

11 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

11 hours ago