ಸುದ್ದಿಗೋಷ್ಠಿಯಲ್ಲಿ ಎಚ್.ಎಂ.ರೇಣುಕಪ್ರಸನ್ನ ವಿವರಣೆ
ಚಾಮರಾಜನಗರ: ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ೨೩ನೇ ಮಹಾ ಅಧಿವೇಶನವನ್ನು ಡಿ.೨೪ ರಿಂದ ೨೬ ರವರೆಗೆ ದಾವಣಗೆರೆಯ ಎಂ.ಬಿ.ವಿ. ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಎಚ್.ಎಂ.ರೇಣುಕಪ್ರಸನ್ನ ತಿಳಿಸಿದರು.
ಮಹಾಸಭಾದ ರಾಜ್ಯಾಧ್ಯಕ್ಷ ಶ್ಯಾಮನೂರು ಶಿವಶಂಕರಪ್ಪ ಅವರು ಅಧಿವೇಶನದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸುವರು. ರಾಷ್ಟçಪತಿ ದ್ರೌಪದಿ ಮುರ್ಮು ಅವರು ಭಾಗವಹಿಸುವ ನಿರೀಕ್ಷೆಯಿದೆ. ಅಲ್ಲದೆ ನಾಡಿನ ಸ್ವಾಮೀಜಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಮಹಾ ಅಧಿವೇಶನದಲ್ಲಿ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಕೃಷಿ, ಕೈಗಾರಿಕೆ, ವಾಣಿಜ್ಯ, ಮಹಿಳಾ ಮತ್ತು ಯುವ ಅಧಿವೇಶನಗಳು ನಡೆಯಲಿವೆ. ಇದೇ ಮೊದಲ ಬಾರಿಗೆ ವೀರಶೈವ-ಲಿಂಗಾಯತ ನೌಕರರ ಅಧಿವೇಶನ ಏರ್ಪಡಿಸಲಾಗಿದೆ. ಸಾಂಸ್ಕೃತಿಕ ಪರಂಪರೆ, ಸಾಹಿತ್ಯ, ಕವಿಗೋಷ್ಠಿಗಳು ಹಾಗೂ ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಮಹಾಸಭಾದ ದಾವಣಗೆರೆ ಜಿಲ್ಲಾ ಘಟಕವು ಅಧಿವೇಶನದ ಆತಿಥ್ಯ ವಹಿಸಲಿದ್ದು, ಸುತ್ತಲಿನ ೫ ಜಿಲ್ಲಾ ಘಟಕಗಳು ಸಹಕಾರ ನೀಡಲಿವೆ. ೩ ದಿನಗಳ ಅಧಿವೇಶನದಲ್ಲಿ ೧.೫೦ ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಈಗಾಗಲೇ ಅಧಿವೇಶನದಲ್ಲಿ ಪಾಲ್ಗೊಳ್ಳುವರನ್ನು ನೋಂದಣಿ ಮಾಡುವ ಕಾರ್ಯ ಶುರುವಾಗಿದೆ. ಆಸಕ್ತರು ಆಯಾಯ ಜಿಲ್ಲಾ ಘಟಕಗಳ ಮೂಲಕ ಹೆಸರು ನೋಂದಾಯಿಸಬೇಕು.
ಪಾಲ್ಗೊಳ್ಳುವವರಿಗೆ ಊಟ, ವಸತಿ ಸೌಲಭ್ಯ ಕಲ್ಪಿಸಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ನೋಂದಣಿ ಆರಂಭಿಸಲಾಗಿದೆ ಎಂದರು.
ಮಹಾಸಭಾದ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್ ಮಾತನಾಡಿ, ಅಧಿವೇಶನಕ್ಕೆ ಜಿಲ್ಲೆಯಿಂದ ೫ ಸಾವಿರ ಜನರನ್ನು ಕಳುಹಿಸಲು ಉದ್ದೇಶಿಸಲಾಗಿದೆ. ಆಸಕ್ತರು ಮಹಾಸಭಾವನ್ನು ಸಂಪರ್ಕಿಸಬಹುದು ಎಂದು ಕೋರಿದರು.
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…