ಜಿಲ್ಲೆಗಳು

ಭಿಕ್ಷೆ ಬೇಡುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಲು ಯತ್ನಿಸಿ ಸಿಕ್ಕಿಬಿದ್ದ ಕಿಡಿಗೇಡಿಗಳು

ಕೊಳ್ಳೇಗಾಲದ ಬಸ್‌ ನಿಲ್ದಾಣದಲ್ಲಿ ಭಿಕ್ಷೆ ಬೇಡುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ರಾಜ್ಯದ ಗಡಿ ದಾಟಲು ಯತ್ನಿಸಿದ ಕೇರಳ ಮೂಲದ ನಾಲ್ವರು ಇದೀಗ ಪೊಲೀಸರ ಅತಿಥಿಗಳಾಗಿದ್ದಾರೆ. ಕಾರಿನಲ್ಲಿ ಕುಳಿತಿದ್ದ ಕಿಡಿಗೇಡಿಗಳ ಬಳಿ ಬಾಲಕಿ ಭಿಕ್ಷೆ ಬೇಡಲು ಬಂದಾಗ ಬಾಲಕಿಯನ್ನು ಅಪಹರಿಸಿ ಬಾಯಿಗೆ ಬಟ್ಟೆ ತುರುಕಿ ಕಾರಿನಲ್ಲಿ ಕೂರಿಸಿಕೊಂಡು ರಾಜ್ಯದ ಗಡಿ ದಾಟಲು ಮುಂದಾಗಿದ್ದಾರೆ.

ಈ ವೇಳೆ ಕೊಳ್ಳೇಗಾಲ ಸಮೀಪದ ಮಧುವನಹಳ್ಳಿ ಬಳಿ ಕಾರು ಅಪಘಾತವಾಗಿದ್ದು, ಅಲ್ಲಿನ ಗ್ರಾಮಸ್ಥರು ವೇಗವಾಗಿ ಕಾರು ಚಲಾಯಿಸಿದ್ದಕ್ಕೆ ತರಾಟೆಗೆ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಕಾರಿನಲ್ಲಿ ಅಪ್ರಾಪ್ತ ಬಾಲಕಿ ಇರುವುದು ಕಂಡುಬಂದಿದೆ.

ಇದನ್ನು ಕಂಡು ಕಿಡಿಗೇಡಿಗಳಿಗೆ ಗ್ರಾಮಸ್ಥರು ಚೆನ್ನಾಗಿ ಥಳಿಸಿ ಬಾಲಕಿಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಗ್ರಾಮಸ್ಥರನ್ನು ಕಂಡ ಕೂಡಲೇ ತನ್ನನ್ನು ಕಿಡಿಗೇಡಿಗಳು ಭಿಕ್ಷೆ ಬೇಡಲು ಕಾರಿನ ಬಳಿ ಬಂದಾಗ ಅಪಹರಿಸಿ ಬಾಯಿಗೆ ಬಟ್ಟೆ ತುರುಕಿ ಕರೆದುಕೊಂಡು ಬಂದರು ಎಂದು ಕಣ್ಣೀರಿಡುತ್ತಾ ನಡೆದ ಘಟನೆಯನ್ನು ವಿವರಿಸಿದ್ದಾಳೆ.

andolana

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

52 mins ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

1 hour ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

2 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

2 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

3 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

3 hours ago