ಕೊಳ್ಳೇಗಾಲದ ಬಸ್ ನಿಲ್ದಾಣದಲ್ಲಿ ಭಿಕ್ಷೆ ಬೇಡುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ರಾಜ್ಯದ ಗಡಿ ದಾಟಲು ಯತ್ನಿಸಿದ ಕೇರಳ ಮೂಲದ ನಾಲ್ವರು ಇದೀಗ ಪೊಲೀಸರ ಅತಿಥಿಗಳಾಗಿದ್ದಾರೆ. ಕಾರಿನಲ್ಲಿ ಕುಳಿತಿದ್ದ ಕಿಡಿಗೇಡಿಗಳ ಬಳಿ ಬಾಲಕಿ ಭಿಕ್ಷೆ ಬೇಡಲು ಬಂದಾಗ ಬಾಲಕಿಯನ್ನು ಅಪಹರಿಸಿ ಬಾಯಿಗೆ ಬಟ್ಟೆ ತುರುಕಿ ಕಾರಿನಲ್ಲಿ ಕೂರಿಸಿಕೊಂಡು ರಾಜ್ಯದ ಗಡಿ ದಾಟಲು ಮುಂದಾಗಿದ್ದಾರೆ.
ಈ ವೇಳೆ ಕೊಳ್ಳೇಗಾಲ ಸಮೀಪದ ಮಧುವನಹಳ್ಳಿ ಬಳಿ ಕಾರು ಅಪಘಾತವಾಗಿದ್ದು, ಅಲ್ಲಿನ ಗ್ರಾಮಸ್ಥರು ವೇಗವಾಗಿ ಕಾರು ಚಲಾಯಿಸಿದ್ದಕ್ಕೆ ತರಾಟೆಗೆ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಕಾರಿನಲ್ಲಿ ಅಪ್ರಾಪ್ತ ಬಾಲಕಿ ಇರುವುದು ಕಂಡುಬಂದಿದೆ.
ಇದನ್ನು ಕಂಡು ಕಿಡಿಗೇಡಿಗಳಿಗೆ ಗ್ರಾಮಸ್ಥರು ಚೆನ್ನಾಗಿ ಥಳಿಸಿ ಬಾಲಕಿಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಗ್ರಾಮಸ್ಥರನ್ನು ಕಂಡ ಕೂಡಲೇ ತನ್ನನ್ನು ಕಿಡಿಗೇಡಿಗಳು ಭಿಕ್ಷೆ ಬೇಡಲು ಕಾರಿನ ಬಳಿ ಬಂದಾಗ ಅಪಹರಿಸಿ ಬಾಯಿಗೆ ಬಟ್ಟೆ ತುರುಕಿ ಕರೆದುಕೊಂಡು ಬಂದರು ಎಂದು ಕಣ್ಣೀರಿಡುತ್ತಾ ನಡೆದ ಘಟನೆಯನ್ನು ವಿವರಿಸಿದ್ದಾಳೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…