ಜಿಲ್ಲೆಗಳು

42ನೇ ಕರ್ನಾಟಕ ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್ ಗೆ ನಾಗೇಂದ್ರ ಚಾಲನೆ

ಮೈಸೂರು: ಮೈಸೂರು ಜಿಲ್ಲಾ ಮಟ್ಟದಲ್ಲಿ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್, ಕರ್ನಾಟಕ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್, ಮೈಸೂರು ಅಥ್ಲೆಟಿಕ್ಸ್ ಕ್ಲಬ್ ಸಹಯೋಗದಲ್ಲಿ ಆಯೋಜಿಸಿರುವ ೪೨ನೇ ಕರ್ನಾಟಕ ರಾಜ್ಯಮಟ್ಟದ ವಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್-೨೦೨೨ ಶನಿವಾರ ಚಾಲನೆ ದೊರೆಯಿತು.

ಮೈಸೂರು ವಿಶ್ವವಿದ್ಯಾನಿಲಯದ ಓವೆಲ್ ಮೈದಾನದಲ್ಲಿ ಆಯೋಜಿಸಿರುವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ಗೆ ಶಾಸಕ ಎಲ್.ನಾಗೇಂದ್ರ ಚಾಲನೆ ನೀಡಿದರು.

ಹವಾಮಾನ ವೈಫರೀತ್ಯದಿಂದಾಗಿ ಶೀತಗಾಳಿ, ಆಗಾಗ್ಗೆ ಮಳೆ ಸುರಿಯುತ್ತಿರುವುದನ್ನೂ ಲೆಕ್ಕಿಸದೇ ರಾಜ್ಯದ ಮೂಲೆ ಮೂಲೆಗಳಿಂದ ಬಂದಿರುವ ೫೦೦ಕ್ಕೂ ಹೆಚ್ಚು ಹಿರಿಯ ಕ್ರೀಡಾಪಟುಗಳು ಅತ್ಯಂತ ಉತ್ಸಾಹದಿಂದ ಕ್ರೀಡಾ ಕೂಟದಲ್ಲಿ ಪಾಲ್ಗೊಂಡಿದ್ದರು.

ಕರ್ನಾಟಕ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಡೇವಿಡ್ ಪ್ರೇಮನಾಥ್ ಮಾತನಾಡಿ, ಮುಂಬರುವ ಏಷ್ಯಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರತಿಯೊಬ್ಬರೂ ಸಕ್ರೀಯವಾಗಿ ಪಾಲ್ಗೊಳ್ಳಬೇಕು. ಅನಧಿಕೃತ ಕ್ಲಬ್‌ಗಳು ನಡೆಸುವ ಕ್ರೀಡಾಕೂಟಗಳಲ್ಲಿ ಯಾವುದೇ ಕಾರಣಕ್ಕೂ ಭಾಗವಹಿಸಬಾರದು ಎಂದು ಹೇಳಿದರು.

ಮಹಾಪೌರ ಶಿವಕುಮಾರ್, ಹಿರಿಯ ಪತ್ರಕರ್ತ ರವೀಂದ್ರ ಭಟ್ ಮಾತನಾಡಿದರು. ಮೈಸೂರು ಜಿಲ್ಲಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಸುಮನಾ ನರಸಿಂಹಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಮೈಸೂರು ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷರೂ ಆದ ಮಾಜಿ ಶಾಸಕ ವಾಸು, ಮೈವಿವಿ ದೈಹಿಕ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಪಿ.ಕೃಷ್ಣಯ್ಶ, ನಿವೃತ್ತ ನಿರ್ದೇಶಕ ಡಾ.ಸಿ.ಕೃಷ್ಣ, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ವಾಣಿಜ್ಯ ತೆರಿಗೆ ಇಲಾಖೆ ಉಪ ಆಯುಕ್ತರಾದ ಶ್ರುತಿ, ಕರ್ನಾಟಕ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಕಾರ್ಯದರ್ಶಿ ಎಚ್.ಸಿ.ಷಣ್ಮುಗಂ, ಮೈಸೂರು ಜಿಲ್ಲಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಪದಾಧಿಕಾರಿಗಳಾದ ಎನ್.ಆರ್.ಶಂಕರರಾವ್, ಕೆ.ಎನ್.ಸೋಮಶೇಖರ್, ಎಂ.ಯೋಗೇಂದ್ರ, ಸಿ.ಎನ್.ಗಣೇಶ್, ಪಾರ್ವತಿ ಕಾಂತರಾಜ್, ಸಿ.ಆರ್.ಆನಂದ, ಎಂ.ಎಂ.ನಾಣಯ, ಬಿ.ಬಸವರಾಜು, ಮಹದೇವಯ್ಶ, ಬಿ.ಎಸ್.ಜಯಶ್ರೀ, ಎಸ್.ಮಹದೇವು, ಎಂ.ಎಲ್.ಅಶೋಕ್, ಸಿ.ಕೆ.ಮುರಳೀಧರನ್, ಬಿ.ಕೆ.ಸೋಮಶೇಖರ್, ಮಹದೇವರಾವ್, ಎಂ.ಶಶಿಧರನ್ ಕುಟ್ಟಿ, ಚನ್ನಯ್ಶ, ಎಂ.ಎಸ್.ಮಹೇಶ್, ರಾಣಿ ಬಿ.ರಾಜ್, ಅಂತಾರಾಷ್ಟ್ರೀಯ ಅಥ್ಲೀಟ್‌ಗಳು ಪಾಲ್ಗೊಂಡಿದ್ದರು.

andolana

Recent Posts

ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೈಸೂರು: ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ನಾಗೇಂದ್ರ ಎಂಬುವವರು…

16 mins ago

ಕಪಿಲಾ ನದಿಗೆ ಮತ್ತೊಂದು ಸೇತುವೆ

ನಂಜನಗೂಡು: ವರುಣ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಸಂಪರ್ಕಿಸಲು ಕಪಿಲಾ ನದಿಗೆ ಮತ್ತೊಂದು ಸೇತುವೆ ಮಂಜೂರಾಗಿದೆ. ತಾಲ್ಲೂಕಿನ ನಂಜನಗೂಡು-ಹುಲ್ಲಹಳ್ಳಿ…

40 mins ago

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಸಂಕಷ್ಟ

ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ ಎಂಬ ಮಾಹಿತಿ…

44 mins ago

ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್‌ಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ…

1 hour ago

ನಿಜ್ಜರ್ ಹತ್ಯೆ ಪ್ರತಿಧ್ವನಿ-ಕೆನಡಾ ಭಾರತೀಯರಲ್ಲಿ ಆತಂಕ

ಅಮಿತ್ ಶಾ, ಅಜಿತ್‌ ದೋವಲ್ ಮೇಲೆಯೂ ಆರೋಪ ಡಿ.ವಿ.ರಾಜಶೇಖರ ಖಾಲಿಸ್ತಾನ್ ಉಗ್ರವಾದಿ ನಾಯಕ ಹರದೀಪ್‌ ಸಿಂಗ್ ನಿಜ್ಜರ್ ಹತ್ಯೆಯ ನಂತರದ…

1 hour ago

ಸೈಕಲ್ ಎಂಬ ಮಾಯಾಂಗನೆಯನೇರಿ..!

ಮೂಲ : ಪೂಜ ಹರೀಶ್‌, ಮೈಸೂರು ಅನುವಾದ: ಎನ್.ನರಸಿಂಹಸ್ವಾಮಿ, ನಾಗಮಂಗಲ ಜೀವನ ಒಂದು ಸೈಕಲ್ ಸವಾರಿಯಂತೆ, ಆಯ ತಪ್ಪದಿರಲು ಮುಂದೆ…

1 hour ago