ಜಿಲ್ಲೆಗಳು

42ನೇ ಕರ್ನಾಟಕ ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್ ಗೆ ನಾಗೇಂದ್ರ ಚಾಲನೆ

ಮೈಸೂರು: ಮೈಸೂರು ಜಿಲ್ಲಾ ಮಟ್ಟದಲ್ಲಿ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್, ಕರ್ನಾಟಕ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್, ಮೈಸೂರು ಅಥ್ಲೆಟಿಕ್ಸ್ ಕ್ಲಬ್ ಸಹಯೋಗದಲ್ಲಿ ಆಯೋಜಿಸಿರುವ ೪೨ನೇ ಕರ್ನಾಟಕ ರಾಜ್ಯಮಟ್ಟದ ವಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್-೨೦೨೨ ಶನಿವಾರ ಚಾಲನೆ ದೊರೆಯಿತು.

ಮೈಸೂರು ವಿಶ್ವವಿದ್ಯಾನಿಲಯದ ಓವೆಲ್ ಮೈದಾನದಲ್ಲಿ ಆಯೋಜಿಸಿರುವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ಗೆ ಶಾಸಕ ಎಲ್.ನಾಗೇಂದ್ರ ಚಾಲನೆ ನೀಡಿದರು.

ಹವಾಮಾನ ವೈಫರೀತ್ಯದಿಂದಾಗಿ ಶೀತಗಾಳಿ, ಆಗಾಗ್ಗೆ ಮಳೆ ಸುರಿಯುತ್ತಿರುವುದನ್ನೂ ಲೆಕ್ಕಿಸದೇ ರಾಜ್ಯದ ಮೂಲೆ ಮೂಲೆಗಳಿಂದ ಬಂದಿರುವ ೫೦೦ಕ್ಕೂ ಹೆಚ್ಚು ಹಿರಿಯ ಕ್ರೀಡಾಪಟುಗಳು ಅತ್ಯಂತ ಉತ್ಸಾಹದಿಂದ ಕ್ರೀಡಾ ಕೂಟದಲ್ಲಿ ಪಾಲ್ಗೊಂಡಿದ್ದರು.

ಕರ್ನಾಟಕ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಡೇವಿಡ್ ಪ್ರೇಮನಾಥ್ ಮಾತನಾಡಿ, ಮುಂಬರುವ ಏಷ್ಯಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರತಿಯೊಬ್ಬರೂ ಸಕ್ರೀಯವಾಗಿ ಪಾಲ್ಗೊಳ್ಳಬೇಕು. ಅನಧಿಕೃತ ಕ್ಲಬ್‌ಗಳು ನಡೆಸುವ ಕ್ರೀಡಾಕೂಟಗಳಲ್ಲಿ ಯಾವುದೇ ಕಾರಣಕ್ಕೂ ಭಾಗವಹಿಸಬಾರದು ಎಂದು ಹೇಳಿದರು.

ಮಹಾಪೌರ ಶಿವಕುಮಾರ್, ಹಿರಿಯ ಪತ್ರಕರ್ತ ರವೀಂದ್ರ ಭಟ್ ಮಾತನಾಡಿದರು. ಮೈಸೂರು ಜಿಲ್ಲಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಸುಮನಾ ನರಸಿಂಹಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಮೈಸೂರು ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷರೂ ಆದ ಮಾಜಿ ಶಾಸಕ ವಾಸು, ಮೈವಿವಿ ದೈಹಿಕ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಪಿ.ಕೃಷ್ಣಯ್ಶ, ನಿವೃತ್ತ ನಿರ್ದೇಶಕ ಡಾ.ಸಿ.ಕೃಷ್ಣ, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ವಾಣಿಜ್ಯ ತೆರಿಗೆ ಇಲಾಖೆ ಉಪ ಆಯುಕ್ತರಾದ ಶ್ರುತಿ, ಕರ್ನಾಟಕ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಕಾರ್ಯದರ್ಶಿ ಎಚ್.ಸಿ.ಷಣ್ಮುಗಂ, ಮೈಸೂರು ಜಿಲ್ಲಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಪದಾಧಿಕಾರಿಗಳಾದ ಎನ್.ಆರ್.ಶಂಕರರಾವ್, ಕೆ.ಎನ್.ಸೋಮಶೇಖರ್, ಎಂ.ಯೋಗೇಂದ್ರ, ಸಿ.ಎನ್.ಗಣೇಶ್, ಪಾರ್ವತಿ ಕಾಂತರಾಜ್, ಸಿ.ಆರ್.ಆನಂದ, ಎಂ.ಎಂ.ನಾಣಯ, ಬಿ.ಬಸವರಾಜು, ಮಹದೇವಯ್ಶ, ಬಿ.ಎಸ್.ಜಯಶ್ರೀ, ಎಸ್.ಮಹದೇವು, ಎಂ.ಎಲ್.ಅಶೋಕ್, ಸಿ.ಕೆ.ಮುರಳೀಧರನ್, ಬಿ.ಕೆ.ಸೋಮಶೇಖರ್, ಮಹದೇವರಾವ್, ಎಂ.ಶಶಿಧರನ್ ಕುಟ್ಟಿ, ಚನ್ನಯ್ಶ, ಎಂ.ಎಸ್.ಮಹೇಶ್, ರಾಣಿ ಬಿ.ರಾಜ್, ಅಂತಾರಾಷ್ಟ್ರೀಯ ಅಥ್ಲೀಟ್‌ಗಳು ಪಾಲ್ಗೊಂಡಿದ್ದರು.

andolana

Recent Posts

ವೈಯಕ್ತಿಕ ದ್ವೇಷ: ಕಾರ್ಮಿಕನನ್ನು ಕೊಲೆಗೈಯ್ದು ಶರಣಾದ ಆರೋಪಿ

ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…

6 hours ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ಈಗ ರಾಜ್ಯಸಭೆ ಅಭ್ಯರ್ಥಿ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರು ಬಿಹಾರದಿಂದ…

7 hours ago

ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ವಿಡಿಯೋ ಕಾಲ್‌ ಮಾಡಿ ಧೈರ್ಯ ಹೇಳಿದ ವಿಜಯೇಂದ್ರ

ಬೆಂಗಳೂರು: ಅಮೇರಿಕಾ, ಇಸ್ರೇಲ್‌-ಇರಾನ್‌ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…

7 hours ago

ಬೂದಬಾಳು ಗ್ರಾಮದ ಕೆರೆಗೆ ಬಾಗಿನ ಸಮರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…

7 hours ago

ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…

8 hours ago

ಹಾರ್ಮುಜ್‌ ಜನಸಂಧಿಯನ್ನು ಮುಚ್ಚಿದ ಇರಾನ್: ತೈಲ ಬೆಲೆಯಲ್ಲಿ ಭಾರೀ ಏರಿಕೆ

ಟೆಹರಾನ್:‌ ಅಮೇರಿಕಾ ಹಾಗೂ ಇಸ್ರೇಲ್‌ ದೇಶಗಳು ಇರಾನ್‌ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…

8 hours ago